ಬ್ರೇಕಿಂಗ್ ನ್ಯೂಸ್
10-02-21 03:53 pm Source: FILMIBEAT Bharath Kumar K ಸಿನಿಮಾ
ಸ್ಯಾಂಡಲ್ವುಡ್ ನಟ, ನಿರ್ದೇಶಕ ರಿಷಬ್ ಶೆಟ್ಟಿ ಮತ್ತು ಪತ್ನಿ ಪ್ರಗತಿ ದಂಪತಿ ವಿವಾಹ ವಾರ್ಷಿಕೋತ್ಸವ ಸಂಭ್ರಮದಲ್ಲಿದ್ದಾರೆ. ದಾಂಪತ್ಯದಲ್ಲಿ ನಾಲ್ಕು ವರ್ಷ (ವಿವಾಹ ದಿನಾಂಕ: 10 ಫೆಬ್ರವರಿ 2017) ಪೂರೈಸಿರುವ ರಿಷಬ್ ಶೆಟ್ಟಿ ಇನ್ಸ್ಟಾಗ್ರಾಂ ಮೂಲಕ ತನ್ನ ಪತ್ನಿಗೆ ಶುಭಕೋರಿದ್ದಾರೆ. ಪತ್ನಿ ಪ್ರಗತಿ ಹಾಗೂ ಮಗನ ಜೊತೆ ಸೇರಿ ಕೇಕ್ ಕತ್ತರಿಸಿರುವ ರಿಷಬ್ ಶೆಟ್ಟಿ ನಂತರ ಆ ಫೋಟೋಗಳನ್ನು ಇನ್ಸ್ಟಾದಲ್ಲಿ ಶೇರ್ ಮಾಡಿದ್ದಾರೆ. ಪತ್ನಿಯ ಬಗ್ಗೆ ಕೆಲವು ಸಾಲುಗಳನ್ನು ಬರೆದುಕೊಂಡಿದ್ದಾರೆ.

''ನಿನ್ನ ಕೈ ಹಿಡಿದು ಹೊಸದೊಂದು ಮೈಲಿಗಲ್ಲನ್ನು ತಲುಪಿದ್ದೇನೆ. ಹಿಂತಿರುಗಿ ನೋಡಿದರೆ, ಕಾಣುವುದೆಲ್ಲಾ, ಕಷ್ಟ ಮರೆಸುವ ನಿನ್ನ ಸ್ನಿಗ್ಧತೆ, ನನ್ನನ್ನೂ ಮಗುವಾಗಿಸಿಬಿಡುವ ಮುಗ್ಧತೆ, ಮಡದಿಯಾಗಿ, ತಾಯಿಯಾಗಿ ಬದುಕಿನೆಡೆಗಿರುವ ನಿನ್ನ ಬದ್ಧತೆ. ಇದಕ್ಕಿಂತ ಮತ್ತೇನು ಬೇಕು? I am lucky to have you in my life. '' ಎಂದು ನಿರ್ದೇಶಕ ರಿಷಬ್ ಶೆಟ್ಟಿ ಖುಷಿ ಹಂಚಿಕೊಂಡಿದ್ದಾರೆ.

'ಇಚ್ಛೆಯನರಿತು ನಡೆವ ಸತಿಯಿರಲು ಸ್ವರ್ಗಕ್ಕೆ ಕಿಚ್ಚು ಹಚ್ಚು ಎಂದಿದ್ದಾನೆ ಸರ್ವಜ್ಞ. ಸದ್ಯಕ್ಕೆ ನಾವು ಕಿಚ್ಚು ಗಿಚ್ಚು ಹಚ್ಚದೇ ಈ ಸಂಭ್ರಮದಲ್ಲೊಂದು ಒಲವಿನ ದೀಪ ಹಚ್ಚೋಣಾ ಬಾ. ಹ್ಯಾಪಿ ಆನಿವರ್ಸರಿ'' ಎಂದು ತಮ್ಮ ಪತ್ನಿಗೆ ವಿಶ್ ಮಾಡಿದ್ದಾರೆ.
ರಿಷಬ್ ಶೆಟ್ಟಿ ಸಿನಿಮಾ ವಿಚಾರಕ್ಕೆ ಬಂದ್ರೆ ಹೀರೋ ಸಿನಿಮಾ ತೆರೆಗೆ ಬರಲು ಸಜ್ಜಾಗಿದೆ. ಹರಿಕಥೆ ಅಲ್ಲ ಗಿರಿಕಥೆ, ಮಹಾನಿಯರೇ ಮಹಿಳೆಯರೇ, ಕೌ ಬಾಯ್ ಕೃಷ್ಣ, ಗರುಡ ಗಮನ ವೃಷಭ ವಾಹನ ಸೇರಿದಂತೆ ಹಲವು ಪ್ರಾಜೆಕ್ಟ್ ಕೈಯಲ್ಲಿಟ್ಟುಕೊಂಡಿದ್ದಾರೆ. ತೆಲುಗಿನ 'ಮಿಷನ್ ಇಂಪಾಸಿಬಲ್' ಚಿತ್ರದಲ್ಲೂ ನಟಿಸುತ್ತಿದ್ದಾರೆ.
This News Article is a Copy of FILMIBEAT
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 09:28 pm
HK News Desk
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm
Mangalore Minor student Suicide: ಅಪ್ರಾಪ್ತೆಗೆ...
24-06-26 02:25 pm