ಬ್ರೇಕಿಂಗ್ ನ್ಯೂಸ್
10-02-21 04:19 pm Source: FILMIBEAT Bharath Kumar K ಸಿನಿಮಾ
ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ರಾಬರ್ಟ್ ಸಿನಿಮಾ ತೆರೆಗೆ ಬರಲು ಸಜ್ಜಾಗಿದೆ. ಮಾರ್ಚ್ 11 ರಂದು ಕನ್ನಡ ಮತ್ತು ತೆಲುಗು ಭಾಷೆಯಲ್ಲಿ ದರ್ಶನ್ ಸಿನಿಮಾ ಬಿಡುಗಡೆಯಾಗುತ್ತಿದೆ. ಕನ್ನಡದಂತೆ ತೆಲುಗಿನಲ್ಲೂ ರಾಬರ್ಟ್ ಚಿತ್ರದ ಟೀಸರ್, ಸಾಂಗ್ ಸದ್ದು ಮಾಡ್ತಿದೆ. ಆಂಧ್ರ-ತೆಲಂಗಾಣದಲ್ಲೂ ರಾಬರ್ಟ್ ಕ್ರೇಜ್ ಹೆಚ್ಚಾಗಿದ್ದು, ಡಿ ಬಾಸ್ ಎಂಟ್ರಿಗೆ ಭರ್ಜರಿ ಸ್ವಾಗತ ಸಿಗುವ ನಿರೀಕ್ಷೆ ಇದೆ.
ಈ ನಡುವೆ ನಟ ದರ್ಶನ್, ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಗೌಡ ತಿರುಪತಿಗೆ ಭೇಟಿ ನೀಡಿ ವೆಂಕಟೇಶ್ವರ ಸ್ವಾಮಿಯ ದರ್ಶನ ಪಡೆದುಕೊಂಡಿದ್ದಾರೆ. ಬಹಳ ವರ್ಷದ ಬಳಿಕ ತಿರುಪತಿಗೆ ಭೇಟಿ ನೀಡಿರುವ ದರ್ಶನ್ಗೆ ತೆಲುಗಿನ ಕೆಲವು ನಿರ್ಮಾಪಕ, ನಿರ್ದೇಶಕರು ಸಾಥ್ ನೀಡಿದ್ದಾರೆ.
ರಾಬರ್ಟ್ ಚಿತ್ರವನ್ನು ತೆಲುಗಿನ ಹಿರಿಯ ನಿರ್ದೇಶಕ ಚಂಚಲವಾಡ ಶ್ರೀನಿವಾಸ್ ರಾವ್ ವಿತರಣೆ ಮಾಡುತ್ತಿದ್ದಾರೆ. ಶ್ರೀ ವೆಂಕಟೇಶ್ವರ ಮೂವೀಸ್ ಮೂಲಕ ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳಲ್ಲಿ ದರ್ಶನ್ ಚಿತ್ರವನ್ನು ಬಿಡುಗಡೆ ಮಾಡುತ್ತಿದ್ದಾರೆ. ತೆಲುಗು ರಾಜ್ಯಗಳಲ್ಲಿ ಸುಮಾರು 300 ರಿಂದ 400 ಚಿತ್ರಮಂದಿರಗಳಲ್ಲಿ ರಾಬರ್ಟ್ ಸಿನಿಮಾ ರಿಲೀಸ್ ಮಾಡಲು ಪ್ಲಾನ್ ಮಾಡಲಾಗಿದೆಯಂತೆ.
ಈ ಹಿಂದೆ ರಾಬರ್ಟ್ ಚಿತ್ರವನ್ನು ಮಾರ್ಚ್ 11ಕ್ಕೆ ಬಿಡುಗಡೆ ಮಾಡಲು ಆಂಧ್ರ-ತೆಲಂಗಾಣದಲ್ಲಿ ವಿರೋಧ ವ್ಯಕ್ತವಾಗಿತ್ತು. ಏಕಕಾಲದಲ್ಲಿ ಸಿನಿಮಾ ರಿಲೀಸ್ ಮಾಡಲು ಸಾಧ್ಯವಿಲ್ಲ ಎಂದು ಕೆಲವರು ಅಡ್ಡಿ ಪಡಿಸಿದ್ದರು. ಕೊನೆಗೆ ದರ್ಶನ್ ಅವರೇ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಭೇಟಿ ನೀಡಿ ಈ ಕುರಿತು ದೂರು ನೀಡಿದ್ದರು. ನಂತರ ಈ ಸಮಸ್ಯೆ ಬಗೆಹರಿದಿತ್ತು.
This News Article is a Copy of FILMIBEAT
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
10-08-26 11:00 pm
HK News Desk
ನಿವೃತ್ತ ಸರ್ಕಾರಿ ನೌಕರರಿಗೆ ಗುಡ್ನ್ಯೂಸ್ ; ‘ಸಂಧ್ಯ...
08-08-26 12:17 pm
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
10-08-26 08:49 pm
HK News Staffer
Leopard Bajpe, Mangalore: ಬಜ್ಪೆಯಲ್ಲಿ ಮನೆ ಅಂಗಳ...
10-08-26 07:22 pm
ಬಾರ್ ಮುಂದೆ ತಲವಾರು ಝಳಪಿಸಿ ದಾಂಧಲೆ ; ಪುಡಿ ರೌಡಿ ಶ...
10-08-26 11:09 am
ಪೊಲೀಸ್ ಕಮಿಷನರ್ ಕಚೇರಿಯಲ್ಲಿದ್ದುಕೊಂಡೇ ನಾಲ್ಕು ಪಟ್...
09-08-26 04:47 pm
ಪಾಕ್ ಗೂಢಚಾರಿಣಿ ಮಹಿಳೆಯ ಹನಿಟ್ರ್ಯಾಪ್ ; ರಹಸ್ಯ ಮಾಹ...
09-08-26 04:07 pm