ಬ್ರೇಕಿಂಗ್ ನ್ಯೂಸ್
11-02-21 12:56 pm Source: FILMIBEAT Manjunatha C ಸಿನಿಮಾ
ದೆಹಲಿ ರೈತ ಹೋರಾಟಕ್ಕೆ ಬಾಲಿವುಡ್ನ ಬಹುಪಾಲು ಸೆಲೆಬ್ರಿಟಿಗಳು ಬೆಂಬಲ ಸೂಚಿಸಿಲ್ಲ, ಕೆಲವರಂತೂ ರೈತ ಹೋರಾಟದ ವಿರುದ್ಧ ಮಾತನಾಡಿದ್ದಾರೆ. ಹಲವರು ಮೌನವಾಗಿದ್ದಾರೆ. ಆದರೆ ಕನ್ನಡದ ಸ್ಟಾರ್ ನಟ ಶಿವರಾಜ್ ಕುಮಾರ್ ರೈತ ಹೋರಾಟಕ್ಕೆ ಬೆಂಬಲ ಸೂಚಿಸಿದ್ದಾರೆ.
ಇಂದು ಮಾಧ್ಯಮಗಳೊಟ್ಟಿಗೆ ಮಾತನಾಡಿದ ಶಿವಣ್ಣ, 'ನನ್ನ ಕೈಯಲ್ಲಿ ಅಧಿಕಾರ ಇದ್ದಿದ್ರೆ ರೈತರು ಕೇಳಿದ್ದು ಬರೆದುಕೊಡ್ತಿದ್ದೆ. ಸರ್ಕಾರ ರೈತರ ಮನವಿಗೆ ಸ್ಪಂದಿಸಬೇಕು' ಎಂದು ಹೇಳಿದ್ದಾರೆ. ''ರೈತರು ರಸ್ತೆಯಲ್ಲಿ ಕುಳಿತು ಊಟ ಮಾಡುವುದನ್ನು ನೋಡಿದರೆ ಹೊಟ್ಟೆ ಉರಿಯುತ್ತೆ. ಯಾರೂ ಹೋರಾಟದ ಬಗ್ಗೆ ಕಾಮೆಂಟ್ ಮಾಡುತ್ತಿಲ್ಲ ಎನ್ನುತ್ತಾರೆ.
ಆದರೆ ಅದು ನಮ್ಮಿಂದ, ಇಂಡಸ್ಟ್ರಿಯಿಂದ ಅಥವಾ ಇಡೀ ಭಾರತೀಯ ಸಿನಿಮಾರಂಗ ಬೀದಿ ಇಳಿಯೋದರಿಂದ ಏನೂ ಸಾಧ್ಯವಾಗಲ್ಲ, ಅದನ್ನು ಸರ್ಕಾರ ಬಗೆಹರಿಸಬೇಕು' ಎಂದಿದ್ದಾರೆ ಶಿವರಾಜ್ ಕುಮಾರ್.
'ಒಂದು ವೇಳೆ ನಾವು ಬೀದಿಗೆ ಇಳಿಯುವುದರಿಂದ ಸಮಸ್ಯೆ ಬಗೆಹರಿಯುವುದಾದರೆ ನಾವು ಸಿದ್ಧ. ಯಾರೇ ರೈತರ ಪರವಾಗಿ ನಿಂತರೆ ಬೆಂಬಲ ಇದೆ' ಎಂದಿದ್ದಾರೆ ಶಿವಣ್ಣ. ''ನಮ್ಮ ಸಮಸ್ಯೆಗಳನ್ನ ನಾವು ಪರಿಹಾರ ಮಾಡಿಕೊಳ್ಳೋಕೆ ಆಗುತ್ತಿಲ್ಲ, ಅಂತದ್ರಲ್ಲಿ ನಮ್ಮ ಕೈಯಲ್ಲಿ ಏನಿದೆ, ರೈತರ ಏನೇ ಮಾಡಿದರೂ ನಮ್ಮ ಬೆಂಬಲ ಕಂಡಿದ ಇದೆ.
ನನ್ನ ಕೈಯಲ್ಲಿ ಆಧಿಕಾರ ಇದ್ದಿದ್ದರೆ, ಎಲ್ಲವನ್ನೂ ಬರೆದು ಕೊಡ್ತಿದ್ದೆ'' ಎಂದಿದ್ದಾರೆ ಶಿವಣ್ಣ. ಸಂಗೀತ ನಿರ್ದೇಶಕ ರವಿ ಬಸ್ರೂರು ಅವರ ಹೊಸ ಸ್ಟುಡಿಯೋದಲ್ಲಿ ನಟ ಶಿವರಾಜ್ ಕುಮಾರ್ ಅವರು ಹಾಡಿನ ರೆಕಾರ್ಡ್ ಮಾಡಿದರು. ರವಿಚಂದ್ರನ್ ನಟಿಸುತ್ತಿರುವ 'ಕನ್ನಡಿಗ' ಸಿನಿಮಾದ ಹಾಡಿಗೆ ಶಿವಣ್ಣ ದನಿಯಾದರು. ಆ ಸಮಯದಲ್ಲಿ ಎದುರಾದ ಮಾಧ್ಯಮಗಳೊಟ್ಟಿಗೆ ಶಿವಣ್ಣ ಮೇಲಿನಂತೆ ಮಾತನಾಡಿದ್ದಾರೆ.
ಶಿವರಾಜ್ ಕುಮಾರ್ ಅವರು ರೈತ ಹೋರಾಟಕ್ಕೆ ಬೆಂಬಲ ಸೂಚಿಸಿದ್ದಕ್ಕೆ ಸಾಮಾಜಿಕ ಜಾಲತಾಣದಲ್ಲಿ ಹಲವಾರು ಮಂದಿ ಅವರಿಗೆ ಧನ್ಯವಾದಗಳನ್ನು ಸಲ್ಲಿಸುತ್ತಿದ್ದಾರೆ. ರೈತ ಹೋರಾಟದ ಬಗ್ಗೆ ಮಾತನಾಡಲು ಬಾಲಿವುಡ್ ನಟರೇ ಭಯ ಪಡುತ್ತಿರುವ ಹೊತ್ತಿನಲ್ಲಿ ಶಿವಣ್ಣ ರೈತ ಪ್ರತಿಭಟನೆಗೆ ಬೆಂಬಲ ಸೂಚಿಸಿ ಮಾತನಾಡಿರುವುದಕ್ಕೆ ಅಭಿನಂದನೆಗಳು ವ್ಯಕ್ತವಾಗುತ್ತಿದೆ.
This News Article is a Copy of FILMIBEAT
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 09:28 pm
HK News Desk
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm
Mangalore Minor student Suicide: ಅಪ್ರಾಪ್ತೆಗೆ...
24-06-26 02:25 pm