ಬ್ರೇಕಿಂಗ್ ನ್ಯೂಸ್
11-02-21 12:56 pm Source: FILMIBEAT Manjunatha C ಸಿನಿಮಾ
ದೆಹಲಿ ರೈತ ಹೋರಾಟಕ್ಕೆ ಬಾಲಿವುಡ್ನ ಬಹುಪಾಲು ಸೆಲೆಬ್ರಿಟಿಗಳು ಬೆಂಬಲ ಸೂಚಿಸಿಲ್ಲ, ಕೆಲವರಂತೂ ರೈತ ಹೋರಾಟದ ವಿರುದ್ಧ ಮಾತನಾಡಿದ್ದಾರೆ. ಹಲವರು ಮೌನವಾಗಿದ್ದಾರೆ. ಆದರೆ ಕನ್ನಡದ ಸ್ಟಾರ್ ನಟ ಶಿವರಾಜ್ ಕುಮಾರ್ ರೈತ ಹೋರಾಟಕ್ಕೆ ಬೆಂಬಲ ಸೂಚಿಸಿದ್ದಾರೆ.
ಇಂದು ಮಾಧ್ಯಮಗಳೊಟ್ಟಿಗೆ ಮಾತನಾಡಿದ ಶಿವಣ್ಣ, 'ನನ್ನ ಕೈಯಲ್ಲಿ ಅಧಿಕಾರ ಇದ್ದಿದ್ರೆ ರೈತರು ಕೇಳಿದ್ದು ಬರೆದುಕೊಡ್ತಿದ್ದೆ. ಸರ್ಕಾರ ರೈತರ ಮನವಿಗೆ ಸ್ಪಂದಿಸಬೇಕು' ಎಂದು ಹೇಳಿದ್ದಾರೆ. ''ರೈತರು ರಸ್ತೆಯಲ್ಲಿ ಕುಳಿತು ಊಟ ಮಾಡುವುದನ್ನು ನೋಡಿದರೆ ಹೊಟ್ಟೆ ಉರಿಯುತ್ತೆ. ಯಾರೂ ಹೋರಾಟದ ಬಗ್ಗೆ ಕಾಮೆಂಟ್ ಮಾಡುತ್ತಿಲ್ಲ ಎನ್ನುತ್ತಾರೆ.
ಆದರೆ ಅದು ನಮ್ಮಿಂದ, ಇಂಡಸ್ಟ್ರಿಯಿಂದ ಅಥವಾ ಇಡೀ ಭಾರತೀಯ ಸಿನಿಮಾರಂಗ ಬೀದಿ ಇಳಿಯೋದರಿಂದ ಏನೂ ಸಾಧ್ಯವಾಗಲ್ಲ, ಅದನ್ನು ಸರ್ಕಾರ ಬಗೆಹರಿಸಬೇಕು' ಎಂದಿದ್ದಾರೆ ಶಿವರಾಜ್ ಕುಮಾರ್.
'ಒಂದು ವೇಳೆ ನಾವು ಬೀದಿಗೆ ಇಳಿಯುವುದರಿಂದ ಸಮಸ್ಯೆ ಬಗೆಹರಿಯುವುದಾದರೆ ನಾವು ಸಿದ್ಧ. ಯಾರೇ ರೈತರ ಪರವಾಗಿ ನಿಂತರೆ ಬೆಂಬಲ ಇದೆ' ಎಂದಿದ್ದಾರೆ ಶಿವಣ್ಣ. ''ನಮ್ಮ ಸಮಸ್ಯೆಗಳನ್ನ ನಾವು ಪರಿಹಾರ ಮಾಡಿಕೊಳ್ಳೋಕೆ ಆಗುತ್ತಿಲ್ಲ, ಅಂತದ್ರಲ್ಲಿ ನಮ್ಮ ಕೈಯಲ್ಲಿ ಏನಿದೆ, ರೈತರ ಏನೇ ಮಾಡಿದರೂ ನಮ್ಮ ಬೆಂಬಲ ಕಂಡಿದ ಇದೆ.
ನನ್ನ ಕೈಯಲ್ಲಿ ಆಧಿಕಾರ ಇದ್ದಿದ್ದರೆ, ಎಲ್ಲವನ್ನೂ ಬರೆದು ಕೊಡ್ತಿದ್ದೆ'' ಎಂದಿದ್ದಾರೆ ಶಿವಣ್ಣ. ಸಂಗೀತ ನಿರ್ದೇಶಕ ರವಿ ಬಸ್ರೂರು ಅವರ ಹೊಸ ಸ್ಟುಡಿಯೋದಲ್ಲಿ ನಟ ಶಿವರಾಜ್ ಕುಮಾರ್ ಅವರು ಹಾಡಿನ ರೆಕಾರ್ಡ್ ಮಾಡಿದರು. ರವಿಚಂದ್ರನ್ ನಟಿಸುತ್ತಿರುವ 'ಕನ್ನಡಿಗ' ಸಿನಿಮಾದ ಹಾಡಿಗೆ ಶಿವಣ್ಣ ದನಿಯಾದರು. ಆ ಸಮಯದಲ್ಲಿ ಎದುರಾದ ಮಾಧ್ಯಮಗಳೊಟ್ಟಿಗೆ ಶಿವಣ್ಣ ಮೇಲಿನಂತೆ ಮಾತನಾಡಿದ್ದಾರೆ.
ಶಿವರಾಜ್ ಕುಮಾರ್ ಅವರು ರೈತ ಹೋರಾಟಕ್ಕೆ ಬೆಂಬಲ ಸೂಚಿಸಿದ್ದಕ್ಕೆ ಸಾಮಾಜಿಕ ಜಾಲತಾಣದಲ್ಲಿ ಹಲವಾರು ಮಂದಿ ಅವರಿಗೆ ಧನ್ಯವಾದಗಳನ್ನು ಸಲ್ಲಿಸುತ್ತಿದ್ದಾರೆ. ರೈತ ಹೋರಾಟದ ಬಗ್ಗೆ ಮಾತನಾಡಲು ಬಾಲಿವುಡ್ ನಟರೇ ಭಯ ಪಡುತ್ತಿರುವ ಹೊತ್ತಿನಲ್ಲಿ ಶಿವಣ್ಣ ರೈತ ಪ್ರತಿಭಟನೆಗೆ ಬೆಂಬಲ ಸೂಚಿಸಿ ಮಾತನಾಡಿರುವುದಕ್ಕೆ ಅಭಿನಂದನೆಗಳು ವ್ಯಕ್ತವಾಗುತ್ತಿದೆ.
This News Article is a Copy of FILMIBEAT
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
10-08-26 11:00 pm
HK News Desk
ನಿವೃತ್ತ ಸರ್ಕಾರಿ ನೌಕರರಿಗೆ ಗುಡ್ನ್ಯೂಸ್ ; ‘ಸಂಧ್ಯ...
08-08-26 12:17 pm
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
10-08-26 08:49 pm
HK News Staffer
Leopard Bajpe, Mangalore: ಬಜ್ಪೆಯಲ್ಲಿ ಮನೆ ಅಂಗಳ...
10-08-26 07:22 pm
ಬಾರ್ ಮುಂದೆ ತಲವಾರು ಝಳಪಿಸಿ ದಾಂಧಲೆ ; ಪುಡಿ ರೌಡಿ ಶ...
10-08-26 11:09 am
ಪೊಲೀಸ್ ಕಮಿಷನರ್ ಕಚೇರಿಯಲ್ಲಿದ್ದುಕೊಂಡೇ ನಾಲ್ಕು ಪಟ್...
09-08-26 04:47 pm
ಪಾಕ್ ಗೂಢಚಾರಿಣಿ ಮಹಿಳೆಯ ಹನಿಟ್ರ್ಯಾಪ್ ; ರಹಸ್ಯ ಮಾಹ...
09-08-26 04:07 pm