ಬ್ರೇಕಿಂಗ್ ನ್ಯೂಸ್
 
            
                        13-02-21 02:30 pm Source: FILMIBEAT Bharath Kumar K ಸಿನಿಮಾ
 
            ಮದುವೆ ಆದ್ಮೇಲೆ ಚಿತ್ರರಂಗದಿಂದ ಹಿಂದೆ ಸರಿದಿದ್ದ ನಟಿ ಶಾಲಿನಿ ಅಜಿತ್ ಮತ್ತೆ ಕಂಬ್ಯಾಕ್ ಮಾಡಲಿದ್ದಾರೆ ಎನ್ನುವ ಸುದ್ದಿ ಚರ್ಚೆಯಾಗುತ್ತಿದೆ. ಸುಮಾರು 20 ವರ್ಷದ ನಂತರ ಮತ್ತೆ ಬಣ್ಣದ ಲೋಕಕ್ಕೆ ಮರಳುತ್ತಿದ್ದಾರೆ. ಮಣಿರತ್ನಂ ನಿರ್ದೇಶನ ಮಾಡಲಿರುವ ಮೆಗಾ ಚಿತ್ರದಲ್ಲಿ ಶಾಲಿನಿ ಕಾಣಿಸಿಕೊಳ್ಳಲಿದ್ದಾರೆ ಎಂಬ ಸುದ್ದಿ ಹೊರಬಿದ್ದಿದೆ. ಮಣಿರತ್ನಂ ನಿರ್ದೇಶನದಲ್ಲಿ ತಯಾರಾಗುತ್ತಿರುವ 'ಪೊನ್ನಿಯನ್ ಸೆಲ್ವನ್' ಚಿತ್ರದಲ್ಲಿ ಶಾಲಿನಿ ನಟಿಸಲಿದ್ದಾರೆ. ಭಾರತೀಯ ಚಿತ್ರರಂಗದ ಹಲವು ಸ್ಟಾರ್ ಕಲಾವಿದರು ಈ ಸಿನಿಮಾದಲ್ಲಿ ಅಭಿನಯಿಸುತ್ತಿದ್ದು, ಈ ಪ್ರಾಜೆಕ್ಟ್ಗೆ ಈಗ ಶಾಲಿನಿ ಸರ್ಪ್ರೈಸ್ ಎಂಟ್ರಿಯಾಗಿದ್ದಾರೆ.
ಹೈದರಾಬಾದ್ಗೆ ತೆರಳಲಿದ್ದಾರೆ ಶಾಲಿನಿ?
ಮೊದಲ ಹಂತದಲ್ಲಿ ಚಿತ್ರೀಕರಣ ಮುಗಿಸಿರುವ ಪೊನ್ನಿಯನ್ ಸೆಲ್ವನ್ ಸಿನಿಮಾತಂಡ ಈಗ ಎರಡನೇ ಶೆಡ್ಯೂಲ್ ಆರಂಭಿಸಿದೆ. ಸದ್ಯದಲ್ಲೇ ಅಜಿತ್ ಅವರ ಪತ್ನಿ ಶಾಲಿನಿ ಹೈದರಾಬಾದ್ಗೆ ತೆರಳಿದ್ದು, ಚಿತ್ರೀಕರಣದಲ್ಲಿ ಪಾಲ್ಗೊಳ್ಳಲಿದ್ದಾರೆ. ಸದ್ಯಕ್ಕೆ ಪಾತ್ರದ ಬಗ್ಗೆ ಹೆಚ್ಚು ಮಾಹಿತಿ ಬಹಿರಂಗವಾಗಿಲ್ಲವಾದರೂ ಇದೊಂದು ಪ್ರಮುಖ ಪಾತ್ರ ಎಂದು ಹೇಳಲಾಗಿದೆ.

ಶಾಲಿನಿ ಕೊನೆಯ ಚಿತ್ರ ಯಾವುದು?
2000ನೇ ಇಸವಿಯಲ್ಲಿ ನಟ ಅಜಿತ್ ಅವರ ಕೈಹಿಡಿದ ಶಾಲಿನಿ ವೈವಾಹಿಕ ಜೀವನ ಆರಂಭಿಸಿದರು. 2001ರಲ್ಲಿ ಬಿಡುಗಡೆಯಾಗಿದ್ದ 'ಪರಿಯಾಧ ವಾರಂ ವೇಂಡುಂ' (Piriyadha Varam Vendum) ಚಿತ್ರದಲ್ಲಿ ಕೊನೆದಾಗಿ ಶಾಲಿನಿ ಕಾಣಿಸಿಕೊಂಡಿದ್ದರು. ಈ ಚಿತ್ರದಲ್ಲಿ ತಮಿಳು ನಟ ಪ್ರಶಾಂತ್ ನಾಯಕರಾಗಿದ್ದರು.

ಶಾಲಿನಿ ಸಿನಿಮಾಗಳು ಕುರಿತು
ಶಾಲಿನಿ ಬಾಲನಟಿಯಾಗಿ ಚಿತ್ರರಂಗ ಪ್ರವೇಶಿಸಿದ್ದರು. ತೆಲುಗು, ತಮಿಳು, ಕನ್ನಡ ಹಾಗು ಮಲಯಾಳಂ ಭಾಷೆಯಲ್ಲಿ ಬಾಲನಟಿಯಾಗಿ ಸಿನಿ ಜರ್ನಿ ಆರಂಭಿಸಿದ್ದರು. 1986ರಲ್ಲಿ ರಿಲೀಸ್ ಆಗಿದ್ದ ವಿಷ್ಣುವರ್ಧನ್ ಅವರ ಚಿತ್ರ ''ಈ ಜೀವ ನಿನಗಾಗಿ'' ಸಿನಿಮಾದಲ್ಲಿ ಕಾಣಿಸಿಕೊಂಡಿರುವ ಪುಟ್ಟ ಬಾಲಕಿ ಇದೇ ಶಾಲಿನಿ. 1997ರಲ್ಲಿ ಮಲಯಾಳಂ ಚಿತ್ರದಲ್ಲಿ ಚೊಚ್ಚಲ ಬಾರಿಗೆ ನಾಯಕಿಯಾಗಿ ನಟಿಸಿದ್ದರು.

ಪೊನ್ನಿಯನ್ ಸೆಲ್ವನ್ ಚಿತ್ರದ ಕುರಿತು
ಮಣಿರತ್ನಂ ಅವರ ಮೆಗಾಪ್ರಾಜೆಕ್ಟ್ನಲ್ಲಿ ನಟಿ ತ್ರಿಷಾ, ಐಶ್ವರ್ಯ ರೈ, ಜಯಂ ರವಿ, ಕಾರ್ತಿ, ಅಮಿತಾಭ್ ಬಚ್ಚನ್, ಚಿಯಾನ್ ವಿಕ್ರಂ, ಶೋಭಿತಾ, ಪ್ರಕಾಶ್ ರಾಜ್ ಸೇರಿದಂತೆ ಹಲವರು ನಟಿಸುತ್ತಿದ್ದಾರೆ. ಎರಡು ಭಾಗಗಳಲ್ಲಿ ಈ ಚಿತ್ರ ಬಿಡುಗಡೆಯಾಗಲಿದೆ.
This News Article is a Copy of FILMIBEAT
 
            
            
             
    
            
             30-10-25 11:00 pm
                        
            
                  
                Bangalore Correspondent    
            
                    
 
    ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
 
    ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ನ.5ರಂದು ಮತ್ತೊಂದ...
30-10-25 06:22 pm
 
    ಸಿದ್ದರಾಮಯ್ಯ ಅವರೇ ಐದು ವರ್ಷಗಳಿಗೆ ಮುಖ್ಯಮಂತ್ರಿಯೆಂ...
30-10-25 04:34 pm
 
    ಬೆಂಗಳೂರು ; ಕಾರಿನ ಮಿರ್ರ್ಗೆ ಬೈಕ್ ಟಚ್ ಆಗಿದ್ದ...
29-10-25 09:12 pm
 
    
            
             30-10-25 03:20 pm
                        
            
                  
                HK News Desk    
            
                    
 
    ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
 
    ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
 
    ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
 
    ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
 
    
            
             30-10-25 11:16 pm
                        
            
                  
                Mangalore Correspondent    
            
                    
 
    ಧರ್ಮಸ್ಥಳ ಪ್ರಕರಣ ; ಮಹೇಶ್ ಶೆಟ್ಟಿ ತಿಮರೋಡಿ ತಂಡಕ್ಕ...
30-10-25 08:06 pm
 
    ರಸ್ತೆ ಗುಂಡಿ ಮುಚ್ಚಿಸಲು ಹಣವಿಲ್ಲದ ಸರ್ಕಾರಕ್ಕೆ ಶಾಸ...
30-10-25 07:28 pm
 
    ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮದುವೆಗೆ ಬರುತ್ತಿದ್ದ ಟೆ...
30-10-25 03:23 pm
 
    ನವೆಂಬರ್ 28ರಂದು ಉಡುಪಿ ಶ್ರೀಕೃಷ್ಣ ಮಠಕ್ಕೆ ಪ್ರಧಾನಿ...
30-10-25 11:28 am
 
    
            
             29-10-25 10:43 pm
                        
            
                  
                Mangalore Correspondent    
            
                    
 
    ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
 
    ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm
 
    ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm
 
    ಕೇರಳ ಮೂಲದ ಗಲ್ಫ್ ಉದ್ಯಮಿಗೆ ಹನಿಟ್ರ್ಯಾಪ್ ; ಬಂಧನಕ್...
28-10-25 10:48 pm