ಬ್ರೇಕಿಂಗ್ ನ್ಯೂಸ್
14-02-21 11:40 am Source: FILMIBEAT Bharath Kumar K ಸಿನಿಮಾ
ತಮಿಳು ನಟಿ, ಮಾಡೆಲ್ ಮೀರಾ ಮಿಥುನ್ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕುವ ಮೂಲಕ ಆತಂಕ ಸೃಷ್ಟಿಸಿದ್ದಾರೆ. ನನಗೆ ಖಿನ್ನತೆ ಕಾಡ್ತಿದೆ, ಸಾಮಾಜಿಕ ಜಾಲತಾಣದಲ್ಲಿ ನನಗೆ ಕಿರುಕುಳ ನೀಡಲಾಗಿದೆ, ಮಾನಸಿಕವಾಗಿ ನಾನು ಬಹಳ ನೊಂದಿದ್ದೇನೆ ಎಂದು ವಿಡಿಯೋ ಸಹ ಮಾಡಿ ಕಣ್ಣೀರಿಟ್ಟಿದ್ದಾರೆ.
ಸೋಶಿಯಲ್ ಮೀಡಿಯಾದಲ್ಲಿ ಬರುತ್ತಿರುವ ಕಾಮೆಂಟ್ಗಳು ನನ್ನನ್ನು ಸಾಯುವಂತೆ ಮಾಡುತ್ತಿದೆ. ಕೆಲವರನ್ನು ನನ್ನ ಬಗ್ಗೆ ಬಹಳ ಕೆಟ್ಟದಾಗಿ ಮಾತನಾಡುತ್ತಿದ್ದಾರೆ. ಸತ್ತು ಹೋಗು ಎಂದು ಹೀಯಾಳಿಸುತ್ತಿದ್ದಾರೆ. ನನಗೆ ಬದುಕಬೇಕು ಎಂದು ಅನಿಸುತ್ತಿಲ್ಲ ಎಂದು ಮೀರಾ ಮಿಥುನ್ ಟ್ವಿಟ್ಟರ್ನಲ್ಲಿ ಅಳಲು ತೋಡಿಕೊಂಡಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ನನಗೆ ನೀಡುತ್ತಿರುವ ಕಿರುಕುಳ ನಿಲ್ಲುವುದಿಲ್ಲ. ಈ ಬಗ್ಗೆ ನಾನು ಎಲ್ಲವೂ ದಾಖಲಿಸುತ್ತಿದ್ದೇನೆ, ಮಾನಸಿಕವಾಗಿ ನನ್ನ ಆರೋಗ್ಯ ಹದಗೆಡುತ್ತಿದೆ, ನನ್ನ ಸಾವಿಗೆ ಕಾರಣರಾದ ಪ್ರತಿಯೊಬ್ಬರನ್ನು ಗಲ್ಲಿಗೇರಿಸಬೇಕು ಎಂದು ಪ್ರಧಾನಿ ಮೋದಿ ಅವರನ್ನು ಟ್ಯಾಗ್ ಮಾಡಿ ಪೋಸ್ಟ್ ಹಾಕಿದ್ದಾರೆ.
''ಕಳೆದ ಮೂರು ವರ್ಷದಿಂದ ನಿರಂತರವಾಗಿ ನಾನು ಖಿನ್ನತೆಗೆ ಒಳಗಾಗಿದ್ದೇನೆ. ಸಮಾಜದಲ್ಲಿ ನನಗೆ ಯಾವುದೇ ರೀತಿ ಗೌರವ ಕೊಡ್ತಿಲ್ಲ. ಪ್ರತಿಕ್ಷಣವೂ ನನಗೆ ಅನ್ಯಾಯವಾಗ್ತಿದೆ. ನನ್ನ ಈ ನೋವನ್ನು ಕೊನೆಯಾಗಿಸಲು ನಾನು ನಿರ್ಧರಿಸಿದ್ದೇನೆ'' ಎಂದು ಆತಂಕ ಸೃಷ್ಟಿಸಿದ್ದಾರೆ.
ಸುಮಾರು 20 ನಿಮಿಷಗಳ ಕಾಲ ವಿಡಿಯೋದಲ್ಲಿ ಕಣ್ಣೀರಿಟ್ಟಿರುವ ನಟಿ ಮೀರಾ ಮಿಥುನ್ ''ಸಿನಿಮಾ ಇಂಡಸ್ಟ್ರಿಯಲ್ಲಿ ಹಾಗೂ ಫ್ಯಾಶನ್ ಇಂಡಸ್ಟ್ರಿಯಲ್ಲಿ ನನ್ನನ್ನು ತುಳಿಯಲಾಗಿದೆ. ನಾನು ಮಾಡಿದ ಕೆಲಸಗಳನ್ನು ಕಾಪಿ ಮಾಡಿದ್ದಾರೆ, ನನ್ನ ಸಾಧನೆಯನ್ನು ಗುರುತಿಸಿ, ಅದನ್ನು ತಾವೇ ಮಾಡಿರವಂತೆ ಕಾಪಿ ಮಾಡಿದ್ದಾರೆ. ನಾನು ತಮಿಳುನಾಡಿನಲ್ಲಿ ಹುಟ್ಟಿದ್ದರೂ, ಓರ್ವ ತಮಿಳು ಹುಡುಗಿಯಾಗಿದ್ದರೂ ನನಗೆ ತೊಂದರೆ ಕೊಟ್ಟಿದ್ದಾರೆ'' ಎಂದು ಆರೋಪಿಸಿದ್ದಾರೆ.
2017ರಲ್ಲಿ '8 ತೋಟಕ್ಕಲ್' ಚಿತ್ರದಲ್ಲಿ ನಟಿಸುವ ಮೂಲಕ ಇಂಡಸ್ಟ್ರಿ ಪ್ರವೇಶಿಸಿದ್ದರು. 'ಜೋಡಿ ನಂಬರ್ 1' ಹಾಗೂ ಬಿಗ್ ಬಾಸ್ 3ನೇ ಆವೃತ್ತಿಯಲ್ಲಿ ಸ್ಪರ್ಧಿಯಾಗಿದ್ದರು.
This News Article is a Copy of FILMIBEAT
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 09:28 pm
HK News Desk
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm
Mangalore Minor student Suicide: ಅಪ್ರಾಪ್ತೆಗೆ...
24-06-26 02:25 pm