ಬ್ರೇಕಿಂಗ್ ನ್ಯೂಸ್
14-02-21 11:40 am Source: FILMIBEAT Bharath Kumar K ಸಿನಿಮಾ
ತಮಿಳು ನಟಿ, ಮಾಡೆಲ್ ಮೀರಾ ಮಿಥುನ್ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕುವ ಮೂಲಕ ಆತಂಕ ಸೃಷ್ಟಿಸಿದ್ದಾರೆ. ನನಗೆ ಖಿನ್ನತೆ ಕಾಡ್ತಿದೆ, ಸಾಮಾಜಿಕ ಜಾಲತಾಣದಲ್ಲಿ ನನಗೆ ಕಿರುಕುಳ ನೀಡಲಾಗಿದೆ, ಮಾನಸಿಕವಾಗಿ ನಾನು ಬಹಳ ನೊಂದಿದ್ದೇನೆ ಎಂದು ವಿಡಿಯೋ ಸಹ ಮಾಡಿ ಕಣ್ಣೀರಿಟ್ಟಿದ್ದಾರೆ.
ಸೋಶಿಯಲ್ ಮೀಡಿಯಾದಲ್ಲಿ ಬರುತ್ತಿರುವ ಕಾಮೆಂಟ್ಗಳು ನನ್ನನ್ನು ಸಾಯುವಂತೆ ಮಾಡುತ್ತಿದೆ. ಕೆಲವರನ್ನು ನನ್ನ ಬಗ್ಗೆ ಬಹಳ ಕೆಟ್ಟದಾಗಿ ಮಾತನಾಡುತ್ತಿದ್ದಾರೆ. ಸತ್ತು ಹೋಗು ಎಂದು ಹೀಯಾಳಿಸುತ್ತಿದ್ದಾರೆ. ನನಗೆ ಬದುಕಬೇಕು ಎಂದು ಅನಿಸುತ್ತಿಲ್ಲ ಎಂದು ಮೀರಾ ಮಿಥುನ್ ಟ್ವಿಟ್ಟರ್ನಲ್ಲಿ ಅಳಲು ತೋಡಿಕೊಂಡಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ನನಗೆ ನೀಡುತ್ತಿರುವ ಕಿರುಕುಳ ನಿಲ್ಲುವುದಿಲ್ಲ. ಈ ಬಗ್ಗೆ ನಾನು ಎಲ್ಲವೂ ದಾಖಲಿಸುತ್ತಿದ್ದೇನೆ, ಮಾನಸಿಕವಾಗಿ ನನ್ನ ಆರೋಗ್ಯ ಹದಗೆಡುತ್ತಿದೆ, ನನ್ನ ಸಾವಿಗೆ ಕಾರಣರಾದ ಪ್ರತಿಯೊಬ್ಬರನ್ನು ಗಲ್ಲಿಗೇರಿಸಬೇಕು ಎಂದು ಪ್ರಧಾನಿ ಮೋದಿ ಅವರನ್ನು ಟ್ಯಾಗ್ ಮಾಡಿ ಪೋಸ್ಟ್ ಹಾಕಿದ್ದಾರೆ.
''ಕಳೆದ ಮೂರು ವರ್ಷದಿಂದ ನಿರಂತರವಾಗಿ ನಾನು ಖಿನ್ನತೆಗೆ ಒಳಗಾಗಿದ್ದೇನೆ. ಸಮಾಜದಲ್ಲಿ ನನಗೆ ಯಾವುದೇ ರೀತಿ ಗೌರವ ಕೊಡ್ತಿಲ್ಲ. ಪ್ರತಿಕ್ಷಣವೂ ನನಗೆ ಅನ್ಯಾಯವಾಗ್ತಿದೆ. ನನ್ನ ಈ ನೋವನ್ನು ಕೊನೆಯಾಗಿಸಲು ನಾನು ನಿರ್ಧರಿಸಿದ್ದೇನೆ'' ಎಂದು ಆತಂಕ ಸೃಷ್ಟಿಸಿದ್ದಾರೆ.
ಸುಮಾರು 20 ನಿಮಿಷಗಳ ಕಾಲ ವಿಡಿಯೋದಲ್ಲಿ ಕಣ್ಣೀರಿಟ್ಟಿರುವ ನಟಿ ಮೀರಾ ಮಿಥುನ್ ''ಸಿನಿಮಾ ಇಂಡಸ್ಟ್ರಿಯಲ್ಲಿ ಹಾಗೂ ಫ್ಯಾಶನ್ ಇಂಡಸ್ಟ್ರಿಯಲ್ಲಿ ನನ್ನನ್ನು ತುಳಿಯಲಾಗಿದೆ. ನಾನು ಮಾಡಿದ ಕೆಲಸಗಳನ್ನು ಕಾಪಿ ಮಾಡಿದ್ದಾರೆ, ನನ್ನ ಸಾಧನೆಯನ್ನು ಗುರುತಿಸಿ, ಅದನ್ನು ತಾವೇ ಮಾಡಿರವಂತೆ ಕಾಪಿ ಮಾಡಿದ್ದಾರೆ. ನಾನು ತಮಿಳುನಾಡಿನಲ್ಲಿ ಹುಟ್ಟಿದ್ದರೂ, ಓರ್ವ ತಮಿಳು ಹುಡುಗಿಯಾಗಿದ್ದರೂ ನನಗೆ ತೊಂದರೆ ಕೊಟ್ಟಿದ್ದಾರೆ'' ಎಂದು ಆರೋಪಿಸಿದ್ದಾರೆ.
2017ರಲ್ಲಿ '8 ತೋಟಕ್ಕಲ್' ಚಿತ್ರದಲ್ಲಿ ನಟಿಸುವ ಮೂಲಕ ಇಂಡಸ್ಟ್ರಿ ಪ್ರವೇಶಿಸಿದ್ದರು. 'ಜೋಡಿ ನಂಬರ್ 1' ಹಾಗೂ ಬಿಗ್ ಬಾಸ್ 3ನೇ ಆವೃತ್ತಿಯಲ್ಲಿ ಸ್ಪರ್ಧಿಯಾಗಿದ್ದರು.
This News Article is a Copy of FILMIBEAT
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
10-08-26 11:00 pm
HK News Desk
ನಿವೃತ್ತ ಸರ್ಕಾರಿ ನೌಕರರಿಗೆ ಗುಡ್ನ್ಯೂಸ್ ; ‘ಸಂಧ್ಯ...
08-08-26 12:17 pm
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
10-08-26 08:49 pm
HK News Staffer
Leopard Bajpe, Mangalore: ಬಜ್ಪೆಯಲ್ಲಿ ಮನೆ ಅಂಗಳ...
10-08-26 07:22 pm
ಬಾರ್ ಮುಂದೆ ತಲವಾರು ಝಳಪಿಸಿ ದಾಂಧಲೆ ; ಪುಡಿ ರೌಡಿ ಶ...
10-08-26 11:09 am
ಪೊಲೀಸ್ ಕಮಿಷನರ್ ಕಚೇರಿಯಲ್ಲಿದ್ದುಕೊಂಡೇ ನಾಲ್ಕು ಪಟ್...
09-08-26 04:47 pm
ಪಾಕ್ ಗೂಢಚಾರಿಣಿ ಮಹಿಳೆಯ ಹನಿಟ್ರ್ಯಾಪ್ ; ರಹಸ್ಯ ಮಾಹ...
09-08-26 04:07 pm