ಬ್ರೇಕಿಂಗ್ ನ್ಯೂಸ್
14-02-21 11:40 am Source: FILMIBEAT Bharath Kumar K ಸಿನಿಮಾ
ತಮಿಳು ನಟಿ, ಮಾಡೆಲ್ ಮೀರಾ ಮಿಥುನ್ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕುವ ಮೂಲಕ ಆತಂಕ ಸೃಷ್ಟಿಸಿದ್ದಾರೆ. ನನಗೆ ಖಿನ್ನತೆ ಕಾಡ್ತಿದೆ, ಸಾಮಾಜಿಕ ಜಾಲತಾಣದಲ್ಲಿ ನನಗೆ ಕಿರುಕುಳ ನೀಡಲಾಗಿದೆ, ಮಾನಸಿಕವಾಗಿ ನಾನು ಬಹಳ ನೊಂದಿದ್ದೇನೆ ಎಂದು ವಿಡಿಯೋ ಸಹ ಮಾಡಿ ಕಣ್ಣೀರಿಟ್ಟಿದ್ದಾರೆ.
ಸೋಶಿಯಲ್ ಮೀಡಿಯಾದಲ್ಲಿ ಬರುತ್ತಿರುವ ಕಾಮೆಂಟ್ಗಳು ನನ್ನನ್ನು ಸಾಯುವಂತೆ ಮಾಡುತ್ತಿದೆ. ಕೆಲವರನ್ನು ನನ್ನ ಬಗ್ಗೆ ಬಹಳ ಕೆಟ್ಟದಾಗಿ ಮಾತನಾಡುತ್ತಿದ್ದಾರೆ. ಸತ್ತು ಹೋಗು ಎಂದು ಹೀಯಾಳಿಸುತ್ತಿದ್ದಾರೆ. ನನಗೆ ಬದುಕಬೇಕು ಎಂದು ಅನಿಸುತ್ತಿಲ್ಲ ಎಂದು ಮೀರಾ ಮಿಥುನ್ ಟ್ವಿಟ್ಟರ್ನಲ್ಲಿ ಅಳಲು ತೋಡಿಕೊಂಡಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ನನಗೆ ನೀಡುತ್ತಿರುವ ಕಿರುಕುಳ ನಿಲ್ಲುವುದಿಲ್ಲ. ಈ ಬಗ್ಗೆ ನಾನು ಎಲ್ಲವೂ ದಾಖಲಿಸುತ್ತಿದ್ದೇನೆ, ಮಾನಸಿಕವಾಗಿ ನನ್ನ ಆರೋಗ್ಯ ಹದಗೆಡುತ್ತಿದೆ, ನನ್ನ ಸಾವಿಗೆ ಕಾರಣರಾದ ಪ್ರತಿಯೊಬ್ಬರನ್ನು ಗಲ್ಲಿಗೇರಿಸಬೇಕು ಎಂದು ಪ್ರಧಾನಿ ಮೋದಿ ಅವರನ್ನು ಟ್ಯಾಗ್ ಮಾಡಿ ಪೋಸ್ಟ್ ಹಾಕಿದ್ದಾರೆ.
''ಕಳೆದ ಮೂರು ವರ್ಷದಿಂದ ನಿರಂತರವಾಗಿ ನಾನು ಖಿನ್ನತೆಗೆ ಒಳಗಾಗಿದ್ದೇನೆ. ಸಮಾಜದಲ್ಲಿ ನನಗೆ ಯಾವುದೇ ರೀತಿ ಗೌರವ ಕೊಡ್ತಿಲ್ಲ. ಪ್ರತಿಕ್ಷಣವೂ ನನಗೆ ಅನ್ಯಾಯವಾಗ್ತಿದೆ. ನನ್ನ ಈ ನೋವನ್ನು ಕೊನೆಯಾಗಿಸಲು ನಾನು ನಿರ್ಧರಿಸಿದ್ದೇನೆ'' ಎಂದು ಆತಂಕ ಸೃಷ್ಟಿಸಿದ್ದಾರೆ.
ಸುಮಾರು 20 ನಿಮಿಷಗಳ ಕಾಲ ವಿಡಿಯೋದಲ್ಲಿ ಕಣ್ಣೀರಿಟ್ಟಿರುವ ನಟಿ ಮೀರಾ ಮಿಥುನ್ ''ಸಿನಿಮಾ ಇಂಡಸ್ಟ್ರಿಯಲ್ಲಿ ಹಾಗೂ ಫ್ಯಾಶನ್ ಇಂಡಸ್ಟ್ರಿಯಲ್ಲಿ ನನ್ನನ್ನು ತುಳಿಯಲಾಗಿದೆ. ನಾನು ಮಾಡಿದ ಕೆಲಸಗಳನ್ನು ಕಾಪಿ ಮಾಡಿದ್ದಾರೆ, ನನ್ನ ಸಾಧನೆಯನ್ನು ಗುರುತಿಸಿ, ಅದನ್ನು ತಾವೇ ಮಾಡಿರವಂತೆ ಕಾಪಿ ಮಾಡಿದ್ದಾರೆ. ನಾನು ತಮಿಳುನಾಡಿನಲ್ಲಿ ಹುಟ್ಟಿದ್ದರೂ, ಓರ್ವ ತಮಿಳು ಹುಡುಗಿಯಾಗಿದ್ದರೂ ನನಗೆ ತೊಂದರೆ ಕೊಟ್ಟಿದ್ದಾರೆ'' ಎಂದು ಆರೋಪಿಸಿದ್ದಾರೆ.
2017ರಲ್ಲಿ '8 ತೋಟಕ್ಕಲ್' ಚಿತ್ರದಲ್ಲಿ ನಟಿಸುವ ಮೂಲಕ ಇಂಡಸ್ಟ್ರಿ ಪ್ರವೇಶಿಸಿದ್ದರು. 'ಜೋಡಿ ನಂಬರ್ 1' ಹಾಗೂ ಬಿಗ್ ಬಾಸ್ 3ನೇ ಆವೃತ್ತಿಯಲ್ಲಿ ಸ್ಪರ್ಧಿಯಾಗಿದ್ದರು.
This News Article is a Copy of FILMIBEAT
26-02-26 10:01 pm
HK News Staffer
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
ವರನಟ ಡಾ.ರಾಜ್ ಅಪಹರಣ ಪ್ರಕರಣ ; ಬರೋಬ್ಬರಿ 25 ವರ್ಷಗ...
25-02-26 07:54 pm
ಕಾಮಗಾರಿ ಮುಗಿದರೂ ಮುಗಿಯದ 'ನಮ್ಮ ಮೆಟ್ರೋ' ಕಿರಿಕಿರಿ...
25-02-26 04:30 pm
27-02-26 03:55 pm
HK News Staffer
ಲಂಚ ಆರೋಪದಲ್ಲಿ ಸಿಕ್ಕಿಬಿದ್ದ ಗಣಿ ಉಪ ನಿರ್ದೇಶಕರ ಮನ...
27-02-26 06:14 am
ಮಾರ್ಚ್ 11ರಿಂದ ಅನಿರ್ದಿಷ್ಟ ಮುಷ್ಕರ ; ರಾಜ್ಯಾದ್ಯಂತ...
25-02-26 10:10 pm
ಮಧ್ಯಪ್ರದೇಶದಲ್ಲಿ ಹೊಸ ರೀತಿಯ ಮತಾಂತರ ಜಾಲ ; ಹಿಂದು...
25-02-26 03:38 pm
ಇರಾನ್ ಮೇಲೆ ಅಮೆರಿಕ ದಾಳಿ ಸಾಧ್ಯತೆ ; ಮತ್ತೆ ಭುಗಿಲೆ...
24-02-26 01:21 pm
27-02-26 05:00 pm
HK News Staffer
ಮನೆಯಲ್ಲೇ ಅಕ್ರಮ ಗೋಹತ್ಯೆ, 56 ಕೇಜಿ ಗೋಮಾಂಸ ಪತ್ತೆ...
27-02-26 04:43 pm
Lourdes School Bejai, Bomb: ಮಂಗಳೂರಿನಲ್ಲಿ ಮತ್ತ...
26-02-26 01:21 pm
Mangalore: ಕುರ್ನಾಡಿನ ವೃದ್ಧ ದಂಪತಿಗೆ ನೂತನ ಮನೆ ಹ...
26-02-26 10:37 am
ಮಂಗಳೂರು ವಿವಿಯ ಯಕ್ಷಮಂಗಳ ಪ್ರಶಸ್ತಿ ಪ್ರಕಟ ; ಕಪ್ಪೆ...
25-02-26 05:41 pm
27-02-26 01:32 pm
HK News Desk
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm
ಹವಾಲಾ ಹಣದ ಭಾರವೇ ಸಿಜೆ ರಾಯ್ ಪ್ರಾಣ ತೆಗೆಯಿತಾ?! ಕ...
26-02-26 04:45 pm
Vexon fraud Company, Mangalore: ಮಂಗಳೂರಿನಲ್ಲಿ...
26-02-26 03:48 pm