ಬ್ರೇಕಿಂಗ್ ನ್ಯೂಸ್
 
            
                        14-02-21 10:03 pm Prajwal Cinema Correspondent ಸಿನಿಮಾ
 
            ಬೆಂಗಳೂರು, ಫೆ.14: ಭಾರೀ ಪೋಸ್ಟರ್ ನಿಂದಲೇ ಸದ್ದು ಮಾಡಿದ್ದ ಬಹುಭಾಷಾ ನಟ ಪ್ರಭಾಸ್ ಹಾಗೂ ಪೂಜಾ ಹೆಗ್ಡೆ ಅಭಿನಯದ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ ʻರಾಧೆ ಶ್ಯಾಮ್ʼ ತೆರೆಗೆ ಬರಲು ಸಿದ್ಧವಾಗಿದ್ದು ಇದೇ ಜುಲೈ 30ಕ್ಕೆ ರಿಲೀಸ್ ಆಗಲು ದಿನಾಂಕ ಫಿಕ್ಸ್ ಆಗಿದೆ. ಪ್ರೇಮಿಗಳ ನಡುವಿನ ವಿಭಿನ್ನ ಕತೆಯನ್ನು ಹೊಂದಿರುವ ರಾಧೆ ಶ್ಯಾಮ ಚಿತ್ರದ ಟೀಸರ್ ಅನ್ನು ವ್ಯಾಲಂಟೈನ್ಸ್ ಡೇ ದಿನವೇ ಯೂಟ್ಯೂಬ್ ನಲ್ಲಿ ಬಿಡುಗಡೆ ಮಾಡಿದೆ. 

ರೋಮ್ ದೇಶದ ಅತ್ಯಂತ ರಮಣೀಯ ಪ್ರದೇಶವೊಂದರ ದೃಶ್ಯಗಳೊಂದಿಗೆ ಆರಂಭವಾಗುವ ಟೀಸರ್ ನಲ್ಲಿ ರೊಮೇನಿಯನ್ ರೈಲ್ವೆ ನಿಲ್ದಾಣದಲ್ಲಿ ಜನಸಮೂಹದ ನಡುವೆ ಪ್ರಭಾಸ್, ಪೂಜಾ ಹೆಗ್ಡೆಯನ್ನ ಹುಡುಕುತ್ತಾ ಇಟಾಲಿಯನ್ ಭಾಷೆಯಲ್ಲಿ 'Sei Un Angelo? Devo Morire per incontrarti? ಎಂದು ಕರೆಯುವುದು ಅಭಿಮಾನಿಗಳಲ್ಲಿ ಕುತೂಹಲ ಕೆರಳಿಸುತ್ತದೆ. ಆ ನಂತರ ಇಬ್ಬರ ನಡುವಿನ ಪ್ರೀತಿಯ ಸಂಭಾಷಣೆ ಟೀಸರ್ ಹೈಲೈಟ್.
ಸದಾ ಆಕರ್ಷಕವಾಗಿರುವ ರೋಮ್ ಪಟ್ಟಣ ಮತ್ತು ಅಲ್ಲಿನ ಅರಣ್ಯದ ಸುಂದರ ಪ್ರದೇಶಗಳಲ್ಲಿ ʻರಾಧೆ ಶ್ಯಾಮ್ʼ ಚಿತ್ರೀಕರಣಗೊಂಡಿದ್ದು, ಚಿತ್ರರಸಿಕರಿಗೆ ರಸದೌತಣ ನೀಡಲಿದೆ. ಇದರ ಝಲಕ್ ಅನ್ನು ಮೊದಲ ವಿಡಿಯೋದ ಮೂಲಕ ಪ್ರೇಕ್ಷಕರಿಗೆ ತೋರಿಸಿಕೊಟ್ಟಿದೆ. ಈ ದಶಕದ ಅತಿದೊಡ್ಡ ಪ್ರೇಮಕಥೆ ಅಂತಲೇ ಬಿಂಬಿತವಾಗಿರೋ ʻರಾಧೆ ಶ್ಯಾಮ್ʼ ಬಹುಭಾಷಾ ಚಿತ್ರವಾಗಿದ್ದು, ಕನ್ನಡ, ತೆಲುಗು, ತಮಿಳು, ಮಲಯಾಳಂ ಮತ್ತು ಹಿಂದಿ ಭಾಷೆಗಳಲ್ಲಿ ಬಿಡುಗಡೆಯಾಗಲಿದೆ.
ಡಾ.ಯು.ವಿ. ಕೃಷ್ಣಂ ರಾಜು ಮತ್ತು ಗೋಪಿಕೃಷ್ಣ ಚಲನಚಿತ್ರಗಳನ್ನು ಪ್ರಸ್ತುತ ಪಡಿಸಿದ ರಾಧಾಕೃಷ್ಣ ಕುಮಾರ್ ಈ ಚಿತ್ರಕ್ಕೂ ನಿರ್ದೇಶಕರು. ಯುವಿ ಕ್ರಿಯೇಷನ್ಸ್ ನಿರ್ಮಾಣದ ಈ ಚಿತ್ರದಲ್ಲಿ ಪ್ರಭಾಸ್ ಮತ್ತು ಪೂಜಾ ಹೆಗ್ಡೆ ಮುಖ್ಯ ಪಾತ್ರದಲ್ಲಿದ್ದಾರೆ.
ಚಿತ್ರವನ್ನು ವಂಶಿ, ಪ್ರಮೋದ್ ಮತ್ತು ಪ್ರಸೀಡಾ ನಿರ್ಮಿಸುತ್ತಿದ್ದಾರೆ.
This Valentines, let us celebrate love with the biggest announcement of the year! ☺️💕 #RadheShyam to release in a theatre near you on 30th July! 💥💥 #ValentinesWithRS
— Radhe Shyam (@RadheShyamFilm) February 14, 2021
Telugu : https://t.co/Dh687qoC69
Hindi : https://t.co/Xzqp4v4aCJ
Tamil : https://t.co/fl6zREDVFK pic.twitter.com/TFo4ttCEqF
 
            
            
             
    
            
             30-10-25 11:00 pm
                        
            
                  
                Bangalore Correspondent    
            
                    
 
    ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
 
    ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ನ.5ರಂದು ಮತ್ತೊಂದ...
30-10-25 06:22 pm
 
    ಸಿದ್ದರಾಮಯ್ಯ ಅವರೇ ಐದು ವರ್ಷಗಳಿಗೆ ಮುಖ್ಯಮಂತ್ರಿಯೆಂ...
30-10-25 04:34 pm
 
    ಬೆಂಗಳೂರು ; ಕಾರಿನ ಮಿರ್ರ್ಗೆ ಬೈಕ್ ಟಚ್ ಆಗಿದ್ದ...
29-10-25 09:12 pm
 
    
            
             30-10-25 03:20 pm
                        
            
                  
                HK News Desk    
            
                    
 
    ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
 
    ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
 
    ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
 
    ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
 
    
            
             30-10-25 11:16 pm
                        
            
                  
                Mangalore Correspondent    
            
                    
 
    ಧರ್ಮಸ್ಥಳ ಪ್ರಕರಣ ; ಮಹೇಶ್ ಶೆಟ್ಟಿ ತಿಮರೋಡಿ ತಂಡಕ್ಕ...
30-10-25 08:06 pm
 
    ರಸ್ತೆ ಗುಂಡಿ ಮುಚ್ಚಿಸಲು ಹಣವಿಲ್ಲದ ಸರ್ಕಾರಕ್ಕೆ ಶಾಸ...
30-10-25 07:28 pm
 
    ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮದುವೆಗೆ ಬರುತ್ತಿದ್ದ ಟೆ...
30-10-25 03:23 pm
 
    ನವೆಂಬರ್ 28ರಂದು ಉಡುಪಿ ಶ್ರೀಕೃಷ್ಣ ಮಠಕ್ಕೆ ಪ್ರಧಾನಿ...
30-10-25 11:28 am
 
    
            
             29-10-25 10:43 pm
                        
            
                  
                Mangalore Correspondent    
            
                    
 
    ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
 
    ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm
 
    ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm
 
    ಕೇರಳ ಮೂಲದ ಗಲ್ಫ್ ಉದ್ಯಮಿಗೆ ಹನಿಟ್ರ್ಯಾಪ್ ; ಬಂಧನಕ್...
28-10-25 10:48 pm