ಬ್ರೇಕಿಂಗ್ ನ್ಯೂಸ್
16-02-21 10:21 am Source: FILMIBEAT Manjunatha C ಸಿನಿಮಾ
ಬಾಲಿವುಡ್ನ ಮತ್ತೊಬ್ಬ ಪ್ರತಿಭಾವಂತ ನಟ ಮೃತರಾಗಿದ್ದಾನೆ. ಕೆಲವು ಬಾಲಿವುಡ್ ಸಿನಿಮಾಗಳಲ್ಲಿ ನಟಿಸಿರುವ ಸಂದೀಪ್ ನಹರ್ ರ ಮೃತದೇಹ ಮುಂಬೈ ನ ತಮ್ಮ ಮನೆಯಲ್ಲಿ ಪತ್ತೆಯಾಗಿದ್ದು. ಸಂದೀಪ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಸುಶಾಂತ್ ಸಿಂಗ್ ಜೊತೆಗೆ ಎಂಎಸ್ ಧೋನಿ, ಅಕ್ಷಯ್ ಕುಮಾರ್ ಜೊತೆಗೆ ಕೇಸರಿ ಸೇರಿದಂತೆ ಇನ್ನೂ ಕೆಲವು ಸಿನಿಮಾಗಳಲ್ಲಿ ನಟಿಸಿರುವ ಸಂದೀಪ್ ನಹರ್ ಸಾಯುವ ಮುನ್ನ ಫೇಸ್ಬುಕ್ನಲ್ಲಿ ವಿಡಿಯೋ ಅಪ್ಲೋಡ್ ಮಾಡಿದ್ದರು. ವಿಡಿಯೋನಲ್ಲಿ,
'ನಾನು ಜೀವನದಲ್ಲಿ ಸಾಕಷ್ಟು ಸಮಸ್ಯೆ ಎದುರಿಸುತ್ತಿದ್ದೇನೆ. ನಾನು ಸಾಕಷ್ಟು ಸುಖ-ದುಃಖಗಳನ್ನು ನೋಡಿದ್ದೇನೆ. ಆದರೆ ಈಗ ನಾನು ಎದುರಿಸುತ್ತಿರುವ ಸಮಸ್ಯೆಯಿಂದ ಹೊರಬರುವುದು ಕಷ್ಟ, ಹಾಗಾಗಿ ಆತ್ಮಹತ್ಯೆಗೆ ಶರಣಾಗುತ್ತಿದ್ದೇನೆ' ಎಂದು ಹೇಳಿದ್ದಾರೆ.
'ನನ್ನ ಪತ್ನಿ ಕಾಂಚನ್ ಶರ್ಮಾ ಹಾಗೂ ಅವರ ತಾಯಿ ವಿನು ಶರ್ಮಾ ನನ್ನನ್ನು ಅರ್ಥ ಮಾಡಿಕೊಳ್ಳಲಿಲ್ಲ, ಅರ್ಥ ಮಾಡಿಕೊಳ್ಳುವ ಪ್ರಯತ್ನವನ್ನೂ ಮಾಡಲಿಲ್ಲ. ನನ್ನ ಪತ್ನಿ ಅಸಾಧಾರಣ ವ್ಯಕ್ತಿತ್ವದವಳು. ನನ್ನ ಹಾಗೂ ಆಕೆಯ ವ್ಯಕ್ತಿತ್ವ ಏಕರೀತಿಯದ್ದಲ್ಲ. ನಮ್ಮಿಬ್ಬರಿಗೂ ಹೊಂದಾಣಿಕೆ ಆಗುತ್ತಿಲ್ಲ, ಪ್ರತಿದಿನ ಜಗಳ, ಇದು ನನಗೆ ಸಹಿಸಲು ಆಗುತ್ತಿಲ್ಲ. ಇದು ಆಕೆಗೆ ಸಾಮಾನ್ಯ, ಆದರೆ ನನಗೆ ಸಾಮಾನ್ಯವಲ್ಲ. ಇದರಲ್ಲಿ ಆಕೆಯದೇನೂ ತಪ್ಪಿಲ್ಲ, ಏಕೆಂದರೆ ಆಕೆಯ ವರ್ತನೆಯೇ ಅಂಥಹದ್ದು' ಎಂದು ಸಾಯುವ ಮುನ್ನ ವಿಡಿಯೋದಲ್ಲಿ ಹೇಳಿದ್ದಾರೆ ಸಂದೀಪ್ ತಮ್ಮ ಕೋಣೆಯಲ್ಲಿ ಪ್ರಜ್ಞಾಹೀನರಾಗಿ ಬಿದ್ದಿದ್ದ ಸಂದೀಪ್ ಅನ್ನು ಅವರ ಪತ್ನಿ ಹಾಗೂ ಗೆಳೆಯರು ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ ವೈದ್ಯರು, ಸಂದೀಪ್ ಅನ್ನು ಮೃತ ಎಂದು ಘೋಷಿಸಿದ್ದಾರೆ. ಮುಂಬೈ ಪೊಲೀಸರು ತನಿಖೆ ಆರಂಭಿಸಿದ್ದು, ಸಾವಿಗೆ ಕಾರಣ ಹುಡುಕುತ್ತಿದ್ದಾರೆ. ಕಳೆದ ವರ್ಷ ನಟ ಸುಶಾಂತ್ ಸಿಂಗ್ ಸಹ ಆತ್ಮಹತ್ಯೆಗೆ ಶರಣಾಗಿದ್ದರು. ಮುಂಬೈನ ಅವರ ನಿವಾಸದಲ್ಲಿ ನೇಣಿಗೆ ಶರಣಾಗಿದ್ದರು ಸುಶಾಂತ್ ಸಿಂಗ್. ಪ್ರಕರಣದ ಬಗ್ಗೆ ಸಿಬಿಐ ತನಿಖೆ ಇನ್ನೂ ಜಾರಿಯಲ್ಲಿದೆ.
This News Article is a Copy of FILMIBEAT
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
10-08-26 11:00 pm
HK News Desk
ನಿವೃತ್ತ ಸರ್ಕಾರಿ ನೌಕರರಿಗೆ ಗುಡ್ನ್ಯೂಸ್ ; ‘ಸಂಧ್ಯ...
08-08-26 12:17 pm
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
10-08-26 08:49 pm
HK News Staffer
Leopard Bajpe, Mangalore: ಬಜ್ಪೆಯಲ್ಲಿ ಮನೆ ಅಂಗಳ...
10-08-26 07:22 pm
ಬಾರ್ ಮುಂದೆ ತಲವಾರು ಝಳಪಿಸಿ ದಾಂಧಲೆ ; ಪುಡಿ ರೌಡಿ ಶ...
10-08-26 11:09 am
ಪೊಲೀಸ್ ಕಮಿಷನರ್ ಕಚೇರಿಯಲ್ಲಿದ್ದುಕೊಂಡೇ ನಾಲ್ಕು ಪಟ್...
09-08-26 04:47 pm
ಪಾಕ್ ಗೂಢಚಾರಿಣಿ ಮಹಿಳೆಯ ಹನಿಟ್ರ್ಯಾಪ್ ; ರಹಸ್ಯ ಮಾಹ...
09-08-26 04:07 pm