ಬ್ರೇಕಿಂಗ್ ನ್ಯೂಸ್
16-02-21 10:21 am Source: FILMIBEAT Manjunatha C ಸಿನಿಮಾ
ಬಾಲಿವುಡ್ನ ಮತ್ತೊಬ್ಬ ಪ್ರತಿಭಾವಂತ ನಟ ಮೃತರಾಗಿದ್ದಾನೆ. ಕೆಲವು ಬಾಲಿವುಡ್ ಸಿನಿಮಾಗಳಲ್ಲಿ ನಟಿಸಿರುವ ಸಂದೀಪ್ ನಹರ್ ರ ಮೃತದೇಹ ಮುಂಬೈ ನ ತಮ್ಮ ಮನೆಯಲ್ಲಿ ಪತ್ತೆಯಾಗಿದ್ದು. ಸಂದೀಪ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಸುಶಾಂತ್ ಸಿಂಗ್ ಜೊತೆಗೆ ಎಂಎಸ್ ಧೋನಿ, ಅಕ್ಷಯ್ ಕುಮಾರ್ ಜೊತೆಗೆ ಕೇಸರಿ ಸೇರಿದಂತೆ ಇನ್ನೂ ಕೆಲವು ಸಿನಿಮಾಗಳಲ್ಲಿ ನಟಿಸಿರುವ ಸಂದೀಪ್ ನಹರ್ ಸಾಯುವ ಮುನ್ನ ಫೇಸ್ಬುಕ್ನಲ್ಲಿ ವಿಡಿಯೋ ಅಪ್ಲೋಡ್ ಮಾಡಿದ್ದರು. ವಿಡಿಯೋನಲ್ಲಿ,
'ನಾನು ಜೀವನದಲ್ಲಿ ಸಾಕಷ್ಟು ಸಮಸ್ಯೆ ಎದುರಿಸುತ್ತಿದ್ದೇನೆ. ನಾನು ಸಾಕಷ್ಟು ಸುಖ-ದುಃಖಗಳನ್ನು ನೋಡಿದ್ದೇನೆ. ಆದರೆ ಈಗ ನಾನು ಎದುರಿಸುತ್ತಿರುವ ಸಮಸ್ಯೆಯಿಂದ ಹೊರಬರುವುದು ಕಷ್ಟ, ಹಾಗಾಗಿ ಆತ್ಮಹತ್ಯೆಗೆ ಶರಣಾಗುತ್ತಿದ್ದೇನೆ' ಎಂದು ಹೇಳಿದ್ದಾರೆ.
'ನನ್ನ ಪತ್ನಿ ಕಾಂಚನ್ ಶರ್ಮಾ ಹಾಗೂ ಅವರ ತಾಯಿ ವಿನು ಶರ್ಮಾ ನನ್ನನ್ನು ಅರ್ಥ ಮಾಡಿಕೊಳ್ಳಲಿಲ್ಲ, ಅರ್ಥ ಮಾಡಿಕೊಳ್ಳುವ ಪ್ರಯತ್ನವನ್ನೂ ಮಾಡಲಿಲ್ಲ. ನನ್ನ ಪತ್ನಿ ಅಸಾಧಾರಣ ವ್ಯಕ್ತಿತ್ವದವಳು. ನನ್ನ ಹಾಗೂ ಆಕೆಯ ವ್ಯಕ್ತಿತ್ವ ಏಕರೀತಿಯದ್ದಲ್ಲ. ನಮ್ಮಿಬ್ಬರಿಗೂ ಹೊಂದಾಣಿಕೆ ಆಗುತ್ತಿಲ್ಲ, ಪ್ರತಿದಿನ ಜಗಳ, ಇದು ನನಗೆ ಸಹಿಸಲು ಆಗುತ್ತಿಲ್ಲ. ಇದು ಆಕೆಗೆ ಸಾಮಾನ್ಯ, ಆದರೆ ನನಗೆ ಸಾಮಾನ್ಯವಲ್ಲ. ಇದರಲ್ಲಿ ಆಕೆಯದೇನೂ ತಪ್ಪಿಲ್ಲ, ಏಕೆಂದರೆ ಆಕೆಯ ವರ್ತನೆಯೇ ಅಂಥಹದ್ದು' ಎಂದು ಸಾಯುವ ಮುನ್ನ ವಿಡಿಯೋದಲ್ಲಿ ಹೇಳಿದ್ದಾರೆ ಸಂದೀಪ್ ತಮ್ಮ ಕೋಣೆಯಲ್ಲಿ ಪ್ರಜ್ಞಾಹೀನರಾಗಿ ಬಿದ್ದಿದ್ದ ಸಂದೀಪ್ ಅನ್ನು ಅವರ ಪತ್ನಿ ಹಾಗೂ ಗೆಳೆಯರು ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ ವೈದ್ಯರು, ಸಂದೀಪ್ ಅನ್ನು ಮೃತ ಎಂದು ಘೋಷಿಸಿದ್ದಾರೆ. ಮುಂಬೈ ಪೊಲೀಸರು ತನಿಖೆ ಆರಂಭಿಸಿದ್ದು, ಸಾವಿಗೆ ಕಾರಣ ಹುಡುಕುತ್ತಿದ್ದಾರೆ. ಕಳೆದ ವರ್ಷ ನಟ ಸುಶಾಂತ್ ಸಿಂಗ್ ಸಹ ಆತ್ಮಹತ್ಯೆಗೆ ಶರಣಾಗಿದ್ದರು. ಮುಂಬೈನ ಅವರ ನಿವಾಸದಲ್ಲಿ ನೇಣಿಗೆ ಶರಣಾಗಿದ್ದರು ಸುಶಾಂತ್ ಸಿಂಗ್. ಪ್ರಕರಣದ ಬಗ್ಗೆ ಸಿಬಿಐ ತನಿಖೆ ಇನ್ನೂ ಜಾರಿಯಲ್ಲಿದೆ.
This News Article is a Copy of FILMIBEAT
26-02-26 10:01 pm
HK News Staffer
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
ವರನಟ ಡಾ.ರಾಜ್ ಅಪಹರಣ ಪ್ರಕರಣ ; ಬರೋಬ್ಬರಿ 25 ವರ್ಷಗ...
25-02-26 07:54 pm
ಕಾಮಗಾರಿ ಮುಗಿದರೂ ಮುಗಿಯದ 'ನಮ್ಮ ಮೆಟ್ರೋ' ಕಿರಿಕಿರಿ...
25-02-26 04:30 pm
27-02-26 03:55 pm
HK News Staffer
ಲಂಚ ಆರೋಪದಲ್ಲಿ ಸಿಕ್ಕಿಬಿದ್ದ ಗಣಿ ಉಪ ನಿರ್ದೇಶಕರ ಮನ...
27-02-26 06:14 am
ಮಾರ್ಚ್ 11ರಿಂದ ಅನಿರ್ದಿಷ್ಟ ಮುಷ್ಕರ ; ರಾಜ್ಯಾದ್ಯಂತ...
25-02-26 10:10 pm
ಮಧ್ಯಪ್ರದೇಶದಲ್ಲಿ ಹೊಸ ರೀತಿಯ ಮತಾಂತರ ಜಾಲ ; ಹಿಂದು...
25-02-26 03:38 pm
ಇರಾನ್ ಮೇಲೆ ಅಮೆರಿಕ ದಾಳಿ ಸಾಧ್ಯತೆ ; ಮತ್ತೆ ಭುಗಿಲೆ...
24-02-26 01:21 pm
27-02-26 05:00 pm
HK News Staffer
ಮನೆಯಲ್ಲೇ ಅಕ್ರಮ ಗೋಹತ್ಯೆ, 56 ಕೇಜಿ ಗೋಮಾಂಸ ಪತ್ತೆ...
27-02-26 04:43 pm
Lourdes School Bejai, Bomb: ಮಂಗಳೂರಿನಲ್ಲಿ ಮತ್ತ...
26-02-26 01:21 pm
Mangalore: ಕುರ್ನಾಡಿನ ವೃದ್ಧ ದಂಪತಿಗೆ ನೂತನ ಮನೆ ಹ...
26-02-26 10:37 am
ಮಂಗಳೂರು ವಿವಿಯ ಯಕ್ಷಮಂಗಳ ಪ್ರಶಸ್ತಿ ಪ್ರಕಟ ; ಕಪ್ಪೆ...
25-02-26 05:41 pm
27-02-26 01:32 pm
HK News Desk
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm
ಹವಾಲಾ ಹಣದ ಭಾರವೇ ಸಿಜೆ ರಾಯ್ ಪ್ರಾಣ ತೆಗೆಯಿತಾ?! ಕ...
26-02-26 04:45 pm
Vexon fraud Company, Mangalore: ಮಂಗಳೂರಿನಲ್ಲಿ...
26-02-26 03:48 pm