ಬ್ರೇಕಿಂಗ್ ನ್ಯೂಸ್
16-02-21 10:21 am Source: FILMIBEAT Manjunatha C ಸಿನಿಮಾ
ಬಾಲಿವುಡ್ನ ಮತ್ತೊಬ್ಬ ಪ್ರತಿಭಾವಂತ ನಟ ಮೃತರಾಗಿದ್ದಾನೆ. ಕೆಲವು ಬಾಲಿವುಡ್ ಸಿನಿಮಾಗಳಲ್ಲಿ ನಟಿಸಿರುವ ಸಂದೀಪ್ ನಹರ್ ರ ಮೃತದೇಹ ಮುಂಬೈ ನ ತಮ್ಮ ಮನೆಯಲ್ಲಿ ಪತ್ತೆಯಾಗಿದ್ದು. ಸಂದೀಪ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಸುಶಾಂತ್ ಸಿಂಗ್ ಜೊತೆಗೆ ಎಂಎಸ್ ಧೋನಿ, ಅಕ್ಷಯ್ ಕುಮಾರ್ ಜೊತೆಗೆ ಕೇಸರಿ ಸೇರಿದಂತೆ ಇನ್ನೂ ಕೆಲವು ಸಿನಿಮಾಗಳಲ್ಲಿ ನಟಿಸಿರುವ ಸಂದೀಪ್ ನಹರ್ ಸಾಯುವ ಮುನ್ನ ಫೇಸ್ಬುಕ್ನಲ್ಲಿ ವಿಡಿಯೋ ಅಪ್ಲೋಡ್ ಮಾಡಿದ್ದರು. ವಿಡಿಯೋನಲ್ಲಿ,
'ನಾನು ಜೀವನದಲ್ಲಿ ಸಾಕಷ್ಟು ಸಮಸ್ಯೆ ಎದುರಿಸುತ್ತಿದ್ದೇನೆ. ನಾನು ಸಾಕಷ್ಟು ಸುಖ-ದುಃಖಗಳನ್ನು ನೋಡಿದ್ದೇನೆ. ಆದರೆ ಈಗ ನಾನು ಎದುರಿಸುತ್ತಿರುವ ಸಮಸ್ಯೆಯಿಂದ ಹೊರಬರುವುದು ಕಷ್ಟ, ಹಾಗಾಗಿ ಆತ್ಮಹತ್ಯೆಗೆ ಶರಣಾಗುತ್ತಿದ್ದೇನೆ' ಎಂದು ಹೇಳಿದ್ದಾರೆ.
'ನನ್ನ ಪತ್ನಿ ಕಾಂಚನ್ ಶರ್ಮಾ ಹಾಗೂ ಅವರ ತಾಯಿ ವಿನು ಶರ್ಮಾ ನನ್ನನ್ನು ಅರ್ಥ ಮಾಡಿಕೊಳ್ಳಲಿಲ್ಲ, ಅರ್ಥ ಮಾಡಿಕೊಳ್ಳುವ ಪ್ರಯತ್ನವನ್ನೂ ಮಾಡಲಿಲ್ಲ. ನನ್ನ ಪತ್ನಿ ಅಸಾಧಾರಣ ವ್ಯಕ್ತಿತ್ವದವಳು. ನನ್ನ ಹಾಗೂ ಆಕೆಯ ವ್ಯಕ್ತಿತ್ವ ಏಕರೀತಿಯದ್ದಲ್ಲ. ನಮ್ಮಿಬ್ಬರಿಗೂ ಹೊಂದಾಣಿಕೆ ಆಗುತ್ತಿಲ್ಲ, ಪ್ರತಿದಿನ ಜಗಳ, ಇದು ನನಗೆ ಸಹಿಸಲು ಆಗುತ್ತಿಲ್ಲ. ಇದು ಆಕೆಗೆ ಸಾಮಾನ್ಯ, ಆದರೆ ನನಗೆ ಸಾಮಾನ್ಯವಲ್ಲ. ಇದರಲ್ಲಿ ಆಕೆಯದೇನೂ ತಪ್ಪಿಲ್ಲ, ಏಕೆಂದರೆ ಆಕೆಯ ವರ್ತನೆಯೇ ಅಂಥಹದ್ದು' ಎಂದು ಸಾಯುವ ಮುನ್ನ ವಿಡಿಯೋದಲ್ಲಿ ಹೇಳಿದ್ದಾರೆ ಸಂದೀಪ್ ತಮ್ಮ ಕೋಣೆಯಲ್ಲಿ ಪ್ರಜ್ಞಾಹೀನರಾಗಿ ಬಿದ್ದಿದ್ದ ಸಂದೀಪ್ ಅನ್ನು ಅವರ ಪತ್ನಿ ಹಾಗೂ ಗೆಳೆಯರು ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ ವೈದ್ಯರು, ಸಂದೀಪ್ ಅನ್ನು ಮೃತ ಎಂದು ಘೋಷಿಸಿದ್ದಾರೆ. ಮುಂಬೈ ಪೊಲೀಸರು ತನಿಖೆ ಆರಂಭಿಸಿದ್ದು, ಸಾವಿಗೆ ಕಾರಣ ಹುಡುಕುತ್ತಿದ್ದಾರೆ. ಕಳೆದ ವರ್ಷ ನಟ ಸುಶಾಂತ್ ಸಿಂಗ್ ಸಹ ಆತ್ಮಹತ್ಯೆಗೆ ಶರಣಾಗಿದ್ದರು. ಮುಂಬೈನ ಅವರ ನಿವಾಸದಲ್ಲಿ ನೇಣಿಗೆ ಶರಣಾಗಿದ್ದರು ಸುಶಾಂತ್ ಸಿಂಗ್. ಪ್ರಕರಣದ ಬಗ್ಗೆ ಸಿಬಿಐ ತನಿಖೆ ಇನ್ನೂ ಜಾರಿಯಲ್ಲಿದೆ.
This News Article is a Copy of FILMIBEAT
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 09:28 pm
HK News Desk
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm
Mangalore Minor student Suicide: ಅಪ್ರಾಪ್ತೆಗೆ...
24-06-26 02:25 pm