ಬ್ರೇಕಿಂಗ್ ನ್ಯೂಸ್
19-02-21 04:46 pm Source: FILMIBEAT ಸಿನಿಮಾ
ಕಾಲಿವುಡ್ ನ ದಳಪತಿ ವಿಜಯ್ ಸದ್ಯ ಮಾಸ್ಟರ್ ಸಿನಿಮಾದ ಯಶಸ್ಸಿನ ಸಂತಸದಲ್ಲಿದ್ದಾರೆ. ಮಾಸ್ಟರ್ ಬಳಿಕ ವಿಜಯ್ ಮುಂದಿನ ಸಿನಿಮಾ ಯಾವುದು ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಮನೆ ಮಾಡಿತ್ತು. ಆದರೆ ವಿಜಯ್ 65ನೇ ಚಿತ್ರಕ್ಕೆ ನೆಲ್ಸನ್ ದಿಲೀಪ್ ಕುಮಾರ್ ಆಕ್ಷನ್ ಕಟ್ ಹೇಳುತ್ತಾರೆ ಎಂದು ಅನೌನ್ಸ್ ಮಾಡುವ ಮೂಲಕ ಕುತೂಹಲಕ್ಕೆ ತೆರೆ ಎಳೆಯಲಾಗಿದೆ. ದಳಪತಿ 65 ಎಂದು ಕರೆಯುವ ವಿಜಯ್ ಮುಂದಿನ ಸಿನಿಮಾಗೆ ಇನ್ನು ಟೈಟಲ್ ಫಿಕ್ಸ್ ಆಗಿಲ್ಲ. ಆದರೆ ಈಗಾಗಲೇ ಈ ಸಿನಿಮಾದ ಬಗ್ಗೆ ಸಾಕಷ್ಟು ಸುದ್ದಿಗಳು ಹರಿದಾಡುತ್ತಿದೆ. ಇದೀಗ ಮತ್ತೊಂದು ವಿಚಾರ ವೈರಲ್ ಆಗಿದೆ. ನಟ ವಿಜಯ್ ಸಿನಿಮಾದಲ್ಲಿ ಬಾಲಿವುಡ್ ನ ಖ್ಯಾತ ನಟ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ.
ಹೌದು, ಬಾಲಿವುಡ್ ನಟ ನವಾಜುದ್ದೀನ್ ಸಿದ್ದಿಕಿ ವಿಜಯ್ ಸಿನಿಮಾದಲ್ಲಿ ನಟಿಸಲಿದ್ದಾರೆ ಎನ್ನುವ ಮಾತುಗಳು ಜೋರಾಗಿ ಕೇಳಿಬರುತ್ತಿದೆ. ನವಾಜುದ್ದೀನ್, ವಿಜಯ್ ಎದುರು ವಿಲನ್ ಆಗಿ ಅಬ್ಬರಿಸಲಿದ್ದಾರೆ. ಮೂಲಗಳ ಪ್ರಕಾರ, ದಳಪತಿ 65 ಸಿನಿಮಾದಲ್ಲಿ ವಿಲನ್ ಪಾತ್ರ ತುಂಬಾ ಪವರ್ ಫುಲ್ ಆಗಿದೆಯಂತೆ. ಹಾಗಾಗಿ ಈ ಪಾತ್ರ ನವಾಜುದ್ದೀನ್ ಮಾಡಿದರೆ ಸೂಕ್ತ ಎನ್ನುವುದು ಚಿತ್ರತಂಡದ ನಿರ್ಧಾರ. ಇದರಿಂದ ಸಿನಿಮಾತಂಡ ಅವರನ್ನು ತಮಿಳಿಗೆ ಕರೆತರುವ ಪ್ಲಾನ್ ಮಾಡಿದೆ ಎನ್ನಲಾಗಿದೆ.
ಈಗಾಗಲೇ ಸಿನಿಮಾತಂಡ ನವಾಜುದ್ದೀನ್ ಜೊತೆ ಮಾತುಕತೆ ನಡೆಸಿದ್ದು, ಗ್ರೀನ್ ಸಿಗ್ನಲ್ ಗಾಗಿ ಕಾಯುತ್ತಿದೆಯಂತೆ. ಎಲ್ಲವೂ ಅಂದುಕೊಂಡಂತೆ ಆದರೆ ವಿಜಯ್ ಎದುರು ನವಾಜುದ್ದೀನ್ ನಟಿಸುವುದು ಕನ್ಫರ್ಮ್. ಇಬ್ಬರನ್ನು ಒಟ್ಟಿಗೆ ನೋಡಲು ಅಭಿಮಾನಿಗಳು ಸಹ ಕಾತರರಾಗಿದ್ದಾರೆ.
ನವಾಜುದ್ದೀನ್ ಸಿದ್ದಿಕಿ ಸದ್ಯ ಬಾಲಿವುಡ್ ನ ಅನೇಕ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಈ ನಡುವೆಯೂ ಡೇಟ್ ಹೊಂದಾಣಿಕೆ ಮಾಡಿಕೊಂಡು ವಿಜಯ್ ಎದುರು ತೊಡೆತಟ್ಟಿ ನಿಲ್ಲಲಿದ್ದಾರಾ ಎಂದು ಕಾದು ನೋಡಬೇಕು. ಅಂದಹಾಗೆ ವಿಜಯ್ ಸಿನಿಮಾ ಜೂನ್ ತಿಂಗಳಿಂದ ಚಿತ್ರೀಕರಣ ಪ್ರಾರಂಭವಾಗುವ ಸಾಧ್ಯತೆ ಇದೆ. ಚಿತ್ರಕ್ಕೆ ಸನ್ ಪಿಕ್ಟರ್ಸ್ ಬಂಡವಾಳ ಹೂಡುತ್ತಿದೆ. ವಿಜಯ್ ಗೆ ನಾಯಕಿಯಾಗಿ ಪೂಜಾ ಹೆಗ್ಡೆ ಕಾಣಿಸಿಕೊಳ್ಳುವ ಸಾಧ್ಯತೆ ಇದೆ.
This News Article is a Copy of FILMIBEAT
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
10-08-26 11:00 pm
HK News Desk
ನಿವೃತ್ತ ಸರ್ಕಾರಿ ನೌಕರರಿಗೆ ಗುಡ್ನ್ಯೂಸ್ ; ‘ಸಂಧ್ಯ...
08-08-26 12:17 pm
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
10-08-26 08:49 pm
HK News Staffer
Leopard Bajpe, Mangalore: ಬಜ್ಪೆಯಲ್ಲಿ ಮನೆ ಅಂಗಳ...
10-08-26 07:22 pm
ಬಾರ್ ಮುಂದೆ ತಲವಾರು ಝಳಪಿಸಿ ದಾಂಧಲೆ ; ಪುಡಿ ರೌಡಿ ಶ...
10-08-26 11:09 am
ಪೊಲೀಸ್ ಕಮಿಷನರ್ ಕಚೇರಿಯಲ್ಲಿದ್ದುಕೊಂಡೇ ನಾಲ್ಕು ಪಟ್...
09-08-26 04:47 pm
ಪಾಕ್ ಗೂಢಚಾರಿಣಿ ಮಹಿಳೆಯ ಹನಿಟ್ರ್ಯಾಪ್ ; ರಹಸ್ಯ ಮಾಹ...
09-08-26 04:07 pm