ಬ್ರೇಕಿಂಗ್ ನ್ಯೂಸ್
21-02-21 11:39 am Source: FILMIBEAT Manjunatha C ಸಿನಿಮಾ
ಕನ್ನಡತಿ ರಶ್ಮಿಕಾ ಮಂದಣ್ಣ ಮತ್ತೆ ಕನ್ನಡಿಗರ ಅಸಮಾಧಾನಕ್ಕೆ ಗುರಿಯಾಗಿದ್ದಾರೆ. ಈ ಹಿಂದೆ ಕನ್ನಡ ಭಾಷೆ ಬರುವುದಿಲ್ಲವೆಂದು ಹೇಳಿ ಬಹುವಾಗಿ ಟ್ರೋಲ್ ಆಗಿದ್ದ ರಶ್ಮಿಕಾ ಮಂದಣ್ಣ ಈ ಬಾರಿ ಸಿನಿಮಾ ಕಾರಣಕ್ಕೆ ಟ್ರೋಲ್ ಆಗಿದ್ದಾರೆ.
ನಟಿ ರಶ್ಮಿಕಾ ಮಂದಣ್ಣ ನಾಯಕಿಯಾಗಿ ನಟಿಸಿರುವ 'ಪೊಗರು' ಸಿನಿಮಾ ಫೆಬ್ರವರಿ 19 ರಂದು ಬಿಡುಗಡೆ ಆಗಿದೆ. ಆದರೆ ರಶ್ಮಿಕಾ ಮಂದಣ್ಣ ಸಿನಿಮಾ ಬಗ್ಗೆ ಒಂದೇ ಒಂದು ಪೋಸ್ಟ್ ಸಹ ಸಾಮಾಜಿಕ ಜಾಲತಾಣದಲ್ಲಿ ಹಾಕಿಲ್ಲ.
ಸಾಮಾಜಿಕ ಜಾಲತಾಣದಲ್ಲಿ ರಶ್ಮಿಕಾ ಮಂದಣ್ಣ ಬಹು ಸಕ್ರಿಯರಾಗಿರುತ್ತಾರೆ. ತಮ್ಮ ಎಲ್ಲ ಸಿನಿಮಾಗಳ ಬಗ್ಗೆ ಮಾಹಿತಿಯನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುತ್ತಿರುತ್ತಾರೆ. ಬಾಲಿವುಡ್ನ ರ್ಯಾಪ್ ಹಾಡಿನ ವಿಡಿಯೋ, ಚಿತ್ರಗಳನ್ನು ಸಹ ಅವರು ಹಂಚಿಕೊಂಡಿದ್ದರು. ಆದರೆ ಪೊಗರು ಸಿನಿಮಾ ಬಗ್ಗೆ ಒಂದು ಪೋಸ್ಟ್ ಸಹ ಹಾಕಿಲ್ಲ. ಕನಿಷ್ಟ ಬಿಡುಗಡೆ ದಿನಾಂಕವನ್ನು ಸಹ ಪ್ರಕಟಿಸಿಲ್ಲ.
ಒಂದು ದಿನ ಪ್ರಚಾರಕ್ಕಾಗಿ ಬಂದ ರಶ್ಮಿಕಾ ಮಂದಣ್ಣ, ಸಾಲಾಗಿ ಟಿವಿಗಳಿಗೆ ಸಂದರ್ಶನವನ್ನು ನೀಡಿ ತೆರಳಿದರು. ಆದರೆ ಸಾಮಾಜಿಕ ಜಾಲತಾಣದಲ್ಲಿ ಸಿನಿಮಾ ಬಗ್ಗೆ ಯಾವ ಪೋಸ್ಟ್ ಸಹ ಮಾಡಲಿಲ್ಲ. ರಶ್ಮಿಕಾ ಪ್ರಸ್ತುತ ತೆಲುಗು, ತಮಿಳು, ಹಿಂದಿಯ ಸಿನಿಮಾಗಳಲ್ಲಿ ನಟಿಸುತ್ತಿದ್ದು, ಇನ್ನೂ ಚಿತ್ರೀಕರಣ ಹಂತದಲ್ಲಿರುವಾಗಲೇ ಸಿನಿಮಾಗಳ ಬಗ್ಗೆ ಸಾಕಷ್ಟು ಪೋಸ್ಟ್ಗಳನ್ನು ಮಾಡುತ್ತಲೇ ಇರುತ್ತಾರೆ. ಆದರೆ ಕನ್ನಡದ ಸಿನಿಮಾ ಬಗ್ಗೆ ಏಕೆ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಕೆಲವರು ಪ್ರಶ್ನಿಸಿದ್ದಾರೆ. ರಶ್ಮಿಕಾ ಗೆ 'ಪೊಗರು' ಚಿತ್ರದ ಬಗ್ಗೆ ಮಾತ್ರ ಅಸಡ್ಡೆಯೋ ಅಥವಾ ಕನ್ನಡದ ಬಗ್ಗೆಯೇ ಅಸಡ್ಡೆಯೇ ಗೊತ್ತಿಲ್ಲ. ನಟಿ ರಶ್ಮಿಕಾ ಮಂದಣ್ಣ ತೆಲುಗಿನ ಪುಷ್ಪ, ಹಿಂದಿಯ ಮಿಷನ್ ಮಜ್ನು ಹಾಗೂ ಇನ್ನೂ ಹೆಸರಿಡದ ಮತ್ತೊಂದು ಬಿಗ್ ಬಜೆಟ್ ಸಿನಿಮಾದಲ್ಲಿ ನಟಿಸಲಿದ್ದಾರೆ. ಆ ಸಿನಿಮಾದಲ್ಲಿ ಅಮಿತಾಬ್ ಬಚ್ಚನ್ ಸಹ ಇರಲಿದ್ದಾರೆ.
This News Article is a Copy of FILMIBEAT
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
11-01-26 09:59 pm
Mangaluru Staff
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm