ಬ್ರೇಕಿಂಗ್ ನ್ಯೂಸ್
23-02-21 03:23 pm Source: FILMIBEAT Manjunatha C ಸಿನಿಮಾ
'ಚಂದನವನ ಫಿಲ್ಮ್ಸ್ ಕ್ರಿಟಿಕ್ಸ್ ಅಕಾಡೆಮಿ ಅವಾರ್ಡ್ಸ್ 2021' ನಲ್ಲಿ 'ದಿಯಾ' ಅತ್ಯುತ್ತಮ ಸಿನಿಮಾ ಪ್ರಶಸ್ತಿಗೆ ಭಾಜನವಾಗಿದೆ. 'ಪಾಪ್ ಕಾರ್ನ್ ಮಂಕಿ ಟೈಗರ್' ಸಿನಿಮಾದ ನಟನೆಗೆ ಧನಂಜಯ್ ಅತ್ಯುತ್ತಮ ನಟ, 'ದಿಯಾ' ಸಿನಿಮಾದ ಅತ್ಯುತ್ತಮ ನಟನೆಗೆ ಖುಷಿಗೆ ಅತ್ಯುತ್ತಮ ನಟಿ ಪ್ರಶಸ್ತಿ ಸಂದಿದೆ.
ಭಾನುವಾರ ಸಂಜೆ ಚಾಮರಾಜಪೇಟೆಯ ಕಲಾವಿದರ ಸಂಘದಲ್ಲಿ ಕಾರ್ಯಕ್ರಮ ನಡೆದಿದ್ದು, 'ಆಕ್ಟ್-1978' ಸಿನಿಮಾದ ನಿರ್ದೇಶಕ ಮಂಸೋರೆಗೆ ಅತ್ಯುತ್ತಮ ನಿರ್ದೇಶಕ ಪ್ರಶಸ್ತಿ ನೀಡಲಾಗಿದೆ. 2020 ರಲ್ಲಿ ಬಿಡುಗಡೆ ಆದ ಅತ್ಯುತ್ತಮ ಸಿನಿಮಾಗಳನ್ನು ಸಿನಿಮಾ ಪತ್ರಕರ್ತರು ನೋಡಿ 21 ವಿವಿಧ ವಿಭಾಗಗಳಲ್ಲಿ ಅತ್ಯುತ್ತಮ ನಟ, ನಟಿ, ತಂತ್ರಜ್ಞರನ್ನು ಆಯ್ಕೆ ಮಾಡಿದ್ದಾರೆ.

'ಚಂದನವನ ಫಿಲಮ್ಸ್ ಕ್ರಿಟಿಕ್ಸ್ ಅಕಾಡೆಮಿ ಅವಾರ್ಡ್ಸ್ 2021' ನಲ್ಲಿ ಅಚ್ಯುತ್ ಕುಮಾರ್ ಅವರಿಗೆ ಅತ್ಯುತ್ತಮ ಪೋಷಕ ನಟ ಪ್ರಶಸ್ತಿ, ತಾರಾ ಅನುರಾಧಾಗೆ ಶಿವಾರ್ಜುನ ಸಿನಿಮಾಕ್ಕಾಗಿ ಪೋಷಕ ನಟಿ ಪ್ರಶಸ್ತಿ, ಅತ್ಯುತ್ತಮ ಸಂಗೀತ ದಿಯಾ ಗಾಗಿ ಅಜನೀಶ್ ಲೋಕನಾಥ್, 'ಮರಳಿ ಮನಸ್ಸಾಗಿದೆ' ಹಾಡಿಗೆ ಅತ್ಯುತ್ತಮ ಗಾಯಕ ಸಂಜಿತ್ ಹೆಗಡೆಗೆ ಪ್ರಶಸ್ತಿ, ದಿಯಾ ಸಿನಿಮಾದ ಹಾಡಿಗಾಗಿ ಚಿನ್ಮಯಿಗೆ ಪ್ರಶಸ್ತಿ ದೊರೆತಿದೆ.
ಸಂಗೀತ ನಿರ್ದೇಶನ ವಿಭಾಗದಲ್ಲಿ ರಘು ದೀಕ್ಷಿತ್ ಗೆ ಪ್ರಶಸ್ತಿ ದೊರೆತಿದೆ. ಮನುಷ್ಯೇತರ ವಿಭಾಗವೂ ಒಂದಿದ್ದು, ಆ ವಿಭಾಗದಲ್ಲಿ 'ನಾನು ಮತ್ತು ಗುಂಡ' ಸಿನಿಮಾದಲ್ಲಿ ಕಾಣಿಸಿಕೊಂಡ ನಾಯಿ ಸಿಂಭಾ ಗೆ ಆ ಪ್ರಶಸ್ತಿ ನೀಡಲಾಗಿದೆ. ಆ ಸಿಂಭಾ ನಾಯಿಯು, ಮಲಯಾಳಂ ನ 'ಬೆಂಗಳೂರು ಡೇಸ್', 'ಗುಲ್ಟು', 'ಶಿವಾಜಿ ಸೂರತ್ಕಲ್' ಸಿನಿಮಾದಲ್ಲಿಯೂ ಪಾತ್ರವಹಿಸಿದೆ.
This News Article is a Copy of FILMIBEAT
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 08:58 pm
HK News Staffer
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm