ಬ್ರೇಕಿಂಗ್ ನ್ಯೂಸ್
24-02-21 12:22 pm Source: FILMIBEAT ಸಿನಿಮಾ
ಕೆಜಿಎಫ್ ಚಾಪ್ಟರ್ 2 ಚಿತ್ರದ ಮೇಲೆ ಭಾರತೀಯ ಚಿತ್ರರಂಗ ಕಣ್ಣಿಟ್ಟಿದೆ. ಕನ್ನಡದಲ್ಲಿ ತಯಾರಾಗುತ್ತಿರುವ ಕೆಜಿಎಫ್ ಸೀಕ್ವೆಲ್ ತೆಲುಗು, ಹಿಂದಿ, ತಮಿಳು ಹಾಗೂ ಮಲಯಾಳಂ ಭಾಷೆಯಲ್ಲಿ ಬಿಡುಗಡೆಯಾಗಲಿದೆ. ಜುಲೈ 16 ರಂದು ಕೆಜಿಎಫ್ ಸಿನಿಮಾ ವರ್ಲ್ಡ್ ವೈಡ್ ತೆರೆಕಾಣುತ್ತಿದೆ. ಈಗಾಗಲೇ ಭಾರಿ ಮೊತ್ತಕ್ಕೆ ಹಿಂದಿ ವಿತರಣೆ ಹಕ್ಕು ಮಾರಾಟ ಆಗಿದೆ.
ಈ ಕಡೆ ಸೌತ್ ಇಂಡಿಯಾದಲ್ಲಿ ಕೆಜಿಎಫ್ ಹವಾ ಹೆಚ್ಚಿದ್ದು, ತೆಲುಗು ವರ್ಷನ್ ವಿತರಣೆ ಹಕ್ಕು ದಾಖಲೆ ಬೆಲೆಗೆ ಸೇಲ್ ಆಗಿದೆ ಎಂದು ಹೇಳಲಾಗುತ್ತಿದೆ. ಚಾಪ್ಟರ್ 1 ಸಿನಿಮಾ ರಿಲೀಸ್ ಮಾಡಿದ್ದ ವಿತರಕ ಈ ಸಲ ಹಿಂದೆ ಸರಿದಿದ್ದು, ಮತ್ತೊಬ್ಬ ಸ್ಟಾರ್ ನಿರ್ಮಾಪಕ ಕೆಜಿಎಫ್ ಹಕ್ಕು ಖರೀದಿಸಿದ್ದಾರೆ. ಹಾಗಾದ್ರೆ, ಕೆಜಿಎಫ್ ಚಿತ್ರದ ತೆಲುಗು ವಿತರಣೆ ಹಕ್ಕಿಗೆ ನೀಡಿದ ಹಣವೆಷ್ಟು? ಮುಂದೆ ಓದಿ...
ವರಾಹಿ ಬದಲು ದಿಲ್ ರಾಜು?
ಕೆಜಿಎಫ್ ಚಾಪ್ಟರ್ 1 ಚಿತ್ರವನ್ನು ತೆಲುಗು ಭಾಷೆಯಲ್ಲಿ ವರಾಹಿ ಸಂಸ್ಥೆ ಬಿಡುಗಡೆ ಮಾಡಿತ್ತು. ಇದೀಗ, ಚಾಪ್ಟರ್ 2ರಿಂದ ವರಾಹಿ ಸಂಸ್ಥೆ ಹಿಂದೆ ಸರಿದಿದೆ. ಕೆಜಿಎಫ್ ಚಿತ್ರತಂಡ ಹೆಚ್ಚು ಹಣ ಬೇಡಿಕೆಯಿಟ್ಟ ಕಾರಣ ವಿತರಣೆಯಿಂದ ಹಿಂದೆ ಹೆಜ್ಜೆಯಿಟ್ಟಿದೆ ಎಂಬ ಸುದ್ದಿ ಹೊರಬಿದ್ದಿದೆ. ಇದೀಗ, ಚಾಪ್ಟರ್ 2 ಚಿತ್ರವನ್ನು ತೆಲುಗಿನಲ್ಲಿ ಖ್ಯಾತ ನಿರ್ಮಾಪಕ ದಿಲ್ ರಾಜು ರಿಲೀಸ್ ಮಾಡಲಿದ್ದಾರೆ.

ಭಾರಿ ಮೊತ್ತಕ್ಕೆ ಕೆಜಿಎಫ್ ತೆಲುಗು ಹಕ್ಕು?
ಸಾಕ್ಷಿ ವೆಬ್ಸೈಟ್ ವರದಿ ಮಾಡಿರುವಂತೆ ಕೆಜಿಎಫ್ ಚಾಪ್ಟರ್ 2 ಚಿತ್ರವನ್ನು ದಿಲ್ ರಾಜು ಅವರು ವಿತರಣೆ ಮಾಡಲಿದ್ದಾರೆ. ಸದ್ಯದ ವರದಿ ಪ್ರಕಾರ ಸುಮಾರು 65 ಕೋಟಿ ಹಣ ನೀಡಿ ಕೆಜಿಎಫ್ ಚಾಪ್ಟರ್ 2 ಹಕ್ಕು ಖರೀದಿಸಿದ್ದಾರೆ ಎಂದು ಹೇಳಲಾಗಿದೆ.
5 ಕೋಟಿಗೆ ಸೇಲ್ ಆಗಿತ್ತು ಚಾಪ್ಟರ್ 1?
ಅಂದ್ಹಾಗೆ, ಕೆಜಿಎಫ್ ಚಾಪ್ಟರ್ 1 ಸಿನಿಮಾದ ತೆಲುಗು ವಿತರಣೆ ಹಕ್ಕು ಕೇವಲ 5 ಕೋಟಿಗೆ ಮಾರಾಟವಾಗಿತ್ತು. ತೆಲುಗು ವರ್ಷನ್ನಿಂದ ಸುಮಾರು 20 ಕೋಟಿ ಗಳಿಕೆ ಕಂಡಿತ್ತು ಎಂಬ ವರದಿ ಇದೆ. ಆದ್ರೀಗ, ಕೆಜಿಎಫ್ ಮೇಲಿನ ನಿರೀಕ್ಷೆ ಹೆಚ್ಚಾಗಿರುವುದರಿಂದ ಚಿತ್ರತಂಡ ಬೇಡಿಕೆ ಹೆಚ್ಚಿಸಿದೆ.

ಜುಲೈ 16ಕ್ಕೆ ಕೆಜಿಎಫ್
ಈ ಕಡೆ ತಮಿಳು ಭಾಷೆಯಲ್ಲೂ ಕೆಜಿಎಫ್ ಚಿತ್ರಕ್ಕೆ ಭಾರಿ ಕ್ರೇಜ್ ಇದ್ದು, ದಾಖಲೆ ಬೆಲೆಗೆ ವಿತರಣೆ ಹಕ್ಕು ಮಾರಾಟವಾಗಿದೆಯಂತೆ. ಆದರೆ, ನಿಖರವಾದ ಮಾಹಿತಿ ಲಭ್ಯವಾಗಿಲ್ಲ. ಇನ್ನುಳಿದಂತೆ ಜುಲೈ 16 ರಂದು ಸಿನಿಮಾ ರಿಲೀಸ್ ಆಗಲಿದೆ. ಪ್ರಶಾಂತ್ ನೀಲ್ ನಿರ್ದೇಶನದ ಈ ಚಿತ್ರದಲ್ಲಿ ಸಂಜಯ್ ದತ್, ಶ್ರೀನಿಧಿ ಶೆಟ್ಟಿ, ರವೀನಾ ಟಂಡನ್, ಪ್ರಕಾಶ್ ರಾಜ್ ಸೇರಿದಂತೆ ಹಲವರು ನಟಿಸಿದ್ದಾರೆ.
This News Article is a Copy of FILMIBEAT
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
10-08-26 11:00 pm
HK News Desk
ನಿವೃತ್ತ ಸರ್ಕಾರಿ ನೌಕರರಿಗೆ ಗುಡ್ನ್ಯೂಸ್ ; ‘ಸಂಧ್ಯ...
08-08-26 12:17 pm
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
10-08-26 08:49 pm
HK News Staffer
Leopard Bajpe, Mangalore: ಬಜ್ಪೆಯಲ್ಲಿ ಮನೆ ಅಂಗಳ...
10-08-26 07:22 pm
ಬಾರ್ ಮುಂದೆ ತಲವಾರು ಝಳಪಿಸಿ ದಾಂಧಲೆ ; ಪುಡಿ ರೌಡಿ ಶ...
10-08-26 11:09 am
ಪೊಲೀಸ್ ಕಮಿಷನರ್ ಕಚೇರಿಯಲ್ಲಿದ್ದುಕೊಂಡೇ ನಾಲ್ಕು ಪಟ್...
09-08-26 04:47 pm
ಪಾಕ್ ಗೂಢಚಾರಿಣಿ ಮಹಿಳೆಯ ಹನಿಟ್ರ್ಯಾಪ್ ; ರಹಸ್ಯ ಮಾಹ...
09-08-26 04:07 pm