ಬ್ರೇಕಿಂಗ್ ನ್ಯೂಸ್
24-02-21 12:22 pm Source: FILMIBEAT ಸಿನಿಮಾ
ಕೆಜಿಎಫ್ ಚಾಪ್ಟರ್ 2 ಚಿತ್ರದ ಮೇಲೆ ಭಾರತೀಯ ಚಿತ್ರರಂಗ ಕಣ್ಣಿಟ್ಟಿದೆ. ಕನ್ನಡದಲ್ಲಿ ತಯಾರಾಗುತ್ತಿರುವ ಕೆಜಿಎಫ್ ಸೀಕ್ವೆಲ್ ತೆಲುಗು, ಹಿಂದಿ, ತಮಿಳು ಹಾಗೂ ಮಲಯಾಳಂ ಭಾಷೆಯಲ್ಲಿ ಬಿಡುಗಡೆಯಾಗಲಿದೆ. ಜುಲೈ 16 ರಂದು ಕೆಜಿಎಫ್ ಸಿನಿಮಾ ವರ್ಲ್ಡ್ ವೈಡ್ ತೆರೆಕಾಣುತ್ತಿದೆ. ಈಗಾಗಲೇ ಭಾರಿ ಮೊತ್ತಕ್ಕೆ ಹಿಂದಿ ವಿತರಣೆ ಹಕ್ಕು ಮಾರಾಟ ಆಗಿದೆ.
ಈ ಕಡೆ ಸೌತ್ ಇಂಡಿಯಾದಲ್ಲಿ ಕೆಜಿಎಫ್ ಹವಾ ಹೆಚ್ಚಿದ್ದು, ತೆಲುಗು ವರ್ಷನ್ ವಿತರಣೆ ಹಕ್ಕು ದಾಖಲೆ ಬೆಲೆಗೆ ಸೇಲ್ ಆಗಿದೆ ಎಂದು ಹೇಳಲಾಗುತ್ತಿದೆ. ಚಾಪ್ಟರ್ 1 ಸಿನಿಮಾ ರಿಲೀಸ್ ಮಾಡಿದ್ದ ವಿತರಕ ಈ ಸಲ ಹಿಂದೆ ಸರಿದಿದ್ದು, ಮತ್ತೊಬ್ಬ ಸ್ಟಾರ್ ನಿರ್ಮಾಪಕ ಕೆಜಿಎಫ್ ಹಕ್ಕು ಖರೀದಿಸಿದ್ದಾರೆ. ಹಾಗಾದ್ರೆ, ಕೆಜಿಎಫ್ ಚಿತ್ರದ ತೆಲುಗು ವಿತರಣೆ ಹಕ್ಕಿಗೆ ನೀಡಿದ ಹಣವೆಷ್ಟು? ಮುಂದೆ ಓದಿ...
ವರಾಹಿ ಬದಲು ದಿಲ್ ರಾಜು?
ಕೆಜಿಎಫ್ ಚಾಪ್ಟರ್ 1 ಚಿತ್ರವನ್ನು ತೆಲುಗು ಭಾಷೆಯಲ್ಲಿ ವರಾಹಿ ಸಂಸ್ಥೆ ಬಿಡುಗಡೆ ಮಾಡಿತ್ತು. ಇದೀಗ, ಚಾಪ್ಟರ್ 2ರಿಂದ ವರಾಹಿ ಸಂಸ್ಥೆ ಹಿಂದೆ ಸರಿದಿದೆ. ಕೆಜಿಎಫ್ ಚಿತ್ರತಂಡ ಹೆಚ್ಚು ಹಣ ಬೇಡಿಕೆಯಿಟ್ಟ ಕಾರಣ ವಿತರಣೆಯಿಂದ ಹಿಂದೆ ಹೆಜ್ಜೆಯಿಟ್ಟಿದೆ ಎಂಬ ಸುದ್ದಿ ಹೊರಬಿದ್ದಿದೆ. ಇದೀಗ, ಚಾಪ್ಟರ್ 2 ಚಿತ್ರವನ್ನು ತೆಲುಗಿನಲ್ಲಿ ಖ್ಯಾತ ನಿರ್ಮಾಪಕ ದಿಲ್ ರಾಜು ರಿಲೀಸ್ ಮಾಡಲಿದ್ದಾರೆ.

ಭಾರಿ ಮೊತ್ತಕ್ಕೆ ಕೆಜಿಎಫ್ ತೆಲುಗು ಹಕ್ಕು?
ಸಾಕ್ಷಿ ವೆಬ್ಸೈಟ್ ವರದಿ ಮಾಡಿರುವಂತೆ ಕೆಜಿಎಫ್ ಚಾಪ್ಟರ್ 2 ಚಿತ್ರವನ್ನು ದಿಲ್ ರಾಜು ಅವರು ವಿತರಣೆ ಮಾಡಲಿದ್ದಾರೆ. ಸದ್ಯದ ವರದಿ ಪ್ರಕಾರ ಸುಮಾರು 65 ಕೋಟಿ ಹಣ ನೀಡಿ ಕೆಜಿಎಫ್ ಚಾಪ್ಟರ್ 2 ಹಕ್ಕು ಖರೀದಿಸಿದ್ದಾರೆ ಎಂದು ಹೇಳಲಾಗಿದೆ.
5 ಕೋಟಿಗೆ ಸೇಲ್ ಆಗಿತ್ತು ಚಾಪ್ಟರ್ 1?
ಅಂದ್ಹಾಗೆ, ಕೆಜಿಎಫ್ ಚಾಪ್ಟರ್ 1 ಸಿನಿಮಾದ ತೆಲುಗು ವಿತರಣೆ ಹಕ್ಕು ಕೇವಲ 5 ಕೋಟಿಗೆ ಮಾರಾಟವಾಗಿತ್ತು. ತೆಲುಗು ವರ್ಷನ್ನಿಂದ ಸುಮಾರು 20 ಕೋಟಿ ಗಳಿಕೆ ಕಂಡಿತ್ತು ಎಂಬ ವರದಿ ಇದೆ. ಆದ್ರೀಗ, ಕೆಜಿಎಫ್ ಮೇಲಿನ ನಿರೀಕ್ಷೆ ಹೆಚ್ಚಾಗಿರುವುದರಿಂದ ಚಿತ್ರತಂಡ ಬೇಡಿಕೆ ಹೆಚ್ಚಿಸಿದೆ.

ಜುಲೈ 16ಕ್ಕೆ ಕೆಜಿಎಫ್
ಈ ಕಡೆ ತಮಿಳು ಭಾಷೆಯಲ್ಲೂ ಕೆಜಿಎಫ್ ಚಿತ್ರಕ್ಕೆ ಭಾರಿ ಕ್ರೇಜ್ ಇದ್ದು, ದಾಖಲೆ ಬೆಲೆಗೆ ವಿತರಣೆ ಹಕ್ಕು ಮಾರಾಟವಾಗಿದೆಯಂತೆ. ಆದರೆ, ನಿಖರವಾದ ಮಾಹಿತಿ ಲಭ್ಯವಾಗಿಲ್ಲ. ಇನ್ನುಳಿದಂತೆ ಜುಲೈ 16 ರಂದು ಸಿನಿಮಾ ರಿಲೀಸ್ ಆಗಲಿದೆ. ಪ್ರಶಾಂತ್ ನೀಲ್ ನಿರ್ದೇಶನದ ಈ ಚಿತ್ರದಲ್ಲಿ ಸಂಜಯ್ ದತ್, ಶ್ರೀನಿಧಿ ಶೆಟ್ಟಿ, ರವೀನಾ ಟಂಡನ್, ಪ್ರಕಾಶ್ ರಾಜ್ ಸೇರಿದಂತೆ ಹಲವರು ನಟಿಸಿದ್ದಾರೆ.
This News Article is a Copy of FILMIBEAT
30-10-25 11:00 pm
Bangalore Correspondent
ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ನ.5ರಂದು ಮತ್ತೊಂದ...
30-10-25 06:22 pm
ಸಿದ್ದರಾಮಯ್ಯ ಅವರೇ ಐದು ವರ್ಷಗಳಿಗೆ ಮುಖ್ಯಮಂತ್ರಿಯೆಂ...
30-10-25 04:34 pm
ಬೆಂಗಳೂರು ; ಕಾರಿನ ಮಿರ್ರ್ಗೆ ಬೈಕ್ ಟಚ್ ಆಗಿದ್ದ...
29-10-25 09:12 pm
30-10-25 03:20 pm
HK News Desk
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
30-10-25 11:16 pm
Mangalore Correspondent
ಧರ್ಮಸ್ಥಳ ಪ್ರಕರಣ ; ಮಹೇಶ್ ಶೆಟ್ಟಿ ತಿಮರೋಡಿ ತಂಡಕ್ಕ...
30-10-25 08:06 pm
ರಸ್ತೆ ಗುಂಡಿ ಮುಚ್ಚಿಸಲು ಹಣವಿಲ್ಲದ ಸರ್ಕಾರಕ್ಕೆ ಶಾಸ...
30-10-25 07:28 pm
ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮದುವೆಗೆ ಬರುತ್ತಿದ್ದ ಟೆ...
30-10-25 03:23 pm
ನವೆಂಬರ್ 28ರಂದು ಉಡುಪಿ ಶ್ರೀಕೃಷ್ಣ ಮಠಕ್ಕೆ ಪ್ರಧಾನಿ...
30-10-25 11:28 am
29-10-25 10:43 pm
Mangalore Correspondent
ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm
ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm
ಕೇರಳ ಮೂಲದ ಗಲ್ಫ್ ಉದ್ಯಮಿಗೆ ಹನಿಟ್ರ್ಯಾಪ್ ; ಬಂಧನಕ್...
28-10-25 10:48 pm