ಬ್ರೇಕಿಂಗ್ ನ್ಯೂಸ್
25-02-21 11:03 am Source: FILMIBEAT ಸಿನಿಮಾ
ತಮಿಳು ಸೂಪರ್ ಸ್ಟಾರ್ ವಿಜಯ್ ನಟನೆಯ ಮಾಸ್ಟರ್ ಸಿನಿಮಾ ರಿಲೀಸ್ ಆಗಿ ಯಶಸ್ವಿ ಪ್ರದರ್ಶನ ಕಂಡಿದೆ. ಬಾಕ್ಸ್ ಆಫೀಸ್ನಲ್ಲಿ ಸುಮಾರು 200 ಕೋಟಿಗೂ ಹೆಚ್ಚು ಗಳಿಕೆ ಕಂಡಿದೆ. ಮಾಸ್ಟರ್ ಸಕ್ಸಸ್ ಬಳಿಕ ವಿಜಯ್ ನೆಲ್ಸನ್ ದಿಲೀಪ್ ಕುಮಾರ್ ಜೊತೆ ಹೊಸ ಸಿನಿಮಾ ಆರಂಭಿಸಿದ್ದಾರೆ.
ಸದ್ಯಕ್ಕೆ 'ವಿಜಯ್ 65' ಎಂದು ಈ ಚಿತ್ರಕ್ಕೆ ಹೆಸರಿಡಲಾಗಿದ್ದು, ಶೀಘ್ರದಲ್ಲಿ ಚಿತ್ರೀಕರಣ ಪ್ರಾರಂಭವಾಗಲಿದೆ. ಸನ್ ಪಿಕ್ಚರ್ಸ್ ಈ ಚಿತ್ರಕ್ಕೆ ಬಂಡವಾಳ ಹಾಕಲಿದ್ದು, ನಾಯಕಿ ಪಾತ್ರಕ್ಕೆ ರಶ್ಮಿಕಾ ಮಂದಣ್ಣ ಹೆಸರು ಚರ್ಚೆಯಲ್ಲಿದೆ. ಇದೀಗ, ವಿಜಯ್ ಪುತ್ರ ಚಿತ್ರರಂಗಕ್ಕೆ ಪ್ರವೇಶ ಮಾಡ್ತಾರೆ ಎಂಬ ಸುದ್ದಿ ಹೊರಬಿದ್ದಿದೆ. ಇತ್ತೀಚಿಗಷ್ಟೆ ತೆರೆಕಂಡು ಸೂಪರ್ ಹಿಟ್ ಎನಿಸಿಕೊಂಡಿರುವ ತೆಲುಗು ಚಿತ್ರದ ರೀಮೇಕ್ನಲ್ಲಿ ವಿಜಯ್ ಪುತ್ರ ನಟಿಸುವ ಸಾಧ್ಯತೆ ಇದೆ. ಯಾವುದು ಆ ಚಿತ್ರ? ಮುಂದೆ ಓದಿ....
ಉಪ್ಪೇನಾ ರೀಮೇಕ್ನಲ್ಲಿ ವಿಜಯ್ ಪುತ್ರ?
ತೆಲುಗಿನಲ್ಲಿ ಕಳೆದ ವಾರವಷ್ಟೇ ಬಿಡುಗಡೆಯಾಗಿ ಅದ್ಭುತ ಪ್ರದರ್ಶನ ಕಾಣುತ್ತಿರುವ ಉಪ್ಪೇನಾ ಚಿತ್ರವನ್ನು ತಮಿಳಿಗೆ ರೀಮೇಕ್ ಮಾಡುವ ಯೋಜನೆ ನಡೆಯುತ್ತಿದೆಯಂತೆ. ಸದ್ಯದ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಸುದ್ದಿ ಪ್ರಕಾರ, ಉಪ್ಪೇನಾ ತಮಿಳು ರೀಮೇಕ್ನಲ್ಲಿ ವಿಜಯ್ ಪುತ್ರ ಜೇಸನ್ ಸಂಜಯ್ ನಟಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

ವಿಜಯ್ ಸೇತುಪತಿ ನಟನೆ
ಸುಕುಮಾರ್ ಬಳಿ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡ್ತಿದ್ದ ಬಚ್ಚಿ ಬಾಬು ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದು, ವೈಷ್ಣವ್ ತೇಜ್, ಕೃತಿ ಶೆಟ್ಟಿ ಹಾಗೂ ವಿಜಯ್ ಸೇತುಪತಿ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರದ ರೀಮೇಕ್ ಹಕ್ಕು ಪಡೆಯಲು ವಿಜಯ್ ಮುಂದಾಗಿದ್ದಾರೆ ಎಂಬ ಸುದ್ದಿ ಚರ್ಚೆಯಾಗುತ್ತಿದೆ.
ವಿಜಯ್ ಮುಂದಿನ ಚಿತ್ರಕ್ಕೆ ಮಗ ನಿರ್ದೇಶಕ
ಮತ್ತೊಂದು ಕಡೆ ವಿಜಯ್ ನಟಿಸಲಿರುವ ಮುಂದಿನ ಚಿತ್ರಕ್ಕೆ ಮಗ ಜೇಸನ್ ಸಂಜಯ್ ನಿರ್ದೇಶನ ಮಾಡಲು ತಯಾರಾಗುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ವಿಜಯ್ 65ನೇ ಚಿತ್ರ ಮುಗಿದ ಬಳಿಕ ಮಗನ ಚಿತ್ರದಲ್ಲಿ ವಿಜಯ್ ನಟಿಸುವ ಲೆಕ್ಕಾಚಾರ ಇದೆಯಂತೆ. ಆದ್ರೆ, ಈ ಸುದ್ದಿ ಅಧಿಕೃತವಾಗಿಲ್ಲ.

ತರಬೇತಿ ಪಡೆದು ಬಂದಿರುವ ಜೇಸನ್ ಸಂಜಯ್
ವಿಜಯ್ ಪುತ್ರ ಜೇಸನ್ ಸಂಜಯ್ ಕೆನಡಾದಲ್ಲಿ ತರಬೇತಿ ಪಡೆದು ಬಂದಿದ್ದಾರೆ. ಸಿನಿಮಾ ಕಲೆ, ತಂತ್ರಜ್ಞಾನದಲ್ಲಿ ಪದವಿ ಮುಗಿಸಿದ್ದಾರೆ. ಈಗ ವಿಜಯ್ ಚಿತ್ರಗಳಲ್ಲಿ ಸಹಾಯಕರಾಗಿ ಕೆಲಸ ಮಾಡಲು ತೀರ್ಮಾನಿಸಿರುವ ಸಂಜಯ್ ನಂತರ ಸ್ವತಂತ್ರವಾಗಿ ನಿರ್ದೇಶನ ಮಾಡುವ ಕನಸು ಕಂಡಿದ್ದಾರೆ.
This News Article is a Copy of FILMIBEAT
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
10-08-26 11:00 pm
HK News Desk
ನಿವೃತ್ತ ಸರ್ಕಾರಿ ನೌಕರರಿಗೆ ಗುಡ್ನ್ಯೂಸ್ ; ‘ಸಂಧ್ಯ...
08-08-26 12:17 pm
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
10-08-26 08:49 pm
HK News Staffer
Leopard Bajpe, Mangalore: ಬಜ್ಪೆಯಲ್ಲಿ ಮನೆ ಅಂಗಳ...
10-08-26 07:22 pm
ಬಾರ್ ಮುಂದೆ ತಲವಾರು ಝಳಪಿಸಿ ದಾಂಧಲೆ ; ಪುಡಿ ರೌಡಿ ಶ...
10-08-26 11:09 am
ಪೊಲೀಸ್ ಕಮಿಷನರ್ ಕಚೇರಿಯಲ್ಲಿದ್ದುಕೊಂಡೇ ನಾಲ್ಕು ಪಟ್...
09-08-26 04:47 pm
ಪಾಕ್ ಗೂಢಚಾರಿಣಿ ಮಹಿಳೆಯ ಹನಿಟ್ರ್ಯಾಪ್ ; ರಹಸ್ಯ ಮಾಹ...
09-08-26 04:07 pm