ಬ್ರೇಕಿಂಗ್ ನ್ಯೂಸ್
25-02-21 11:03 am Source: FILMIBEAT ಸಿನಿಮಾ
ತಮಿಳು ಸೂಪರ್ ಸ್ಟಾರ್ ವಿಜಯ್ ನಟನೆಯ ಮಾಸ್ಟರ್ ಸಿನಿಮಾ ರಿಲೀಸ್ ಆಗಿ ಯಶಸ್ವಿ ಪ್ರದರ್ಶನ ಕಂಡಿದೆ. ಬಾಕ್ಸ್ ಆಫೀಸ್ನಲ್ಲಿ ಸುಮಾರು 200 ಕೋಟಿಗೂ ಹೆಚ್ಚು ಗಳಿಕೆ ಕಂಡಿದೆ. ಮಾಸ್ಟರ್ ಸಕ್ಸಸ್ ಬಳಿಕ ವಿಜಯ್ ನೆಲ್ಸನ್ ದಿಲೀಪ್ ಕುಮಾರ್ ಜೊತೆ ಹೊಸ ಸಿನಿಮಾ ಆರಂಭಿಸಿದ್ದಾರೆ.
ಸದ್ಯಕ್ಕೆ 'ವಿಜಯ್ 65' ಎಂದು ಈ ಚಿತ್ರಕ್ಕೆ ಹೆಸರಿಡಲಾಗಿದ್ದು, ಶೀಘ್ರದಲ್ಲಿ ಚಿತ್ರೀಕರಣ ಪ್ರಾರಂಭವಾಗಲಿದೆ. ಸನ್ ಪಿಕ್ಚರ್ಸ್ ಈ ಚಿತ್ರಕ್ಕೆ ಬಂಡವಾಳ ಹಾಕಲಿದ್ದು, ನಾಯಕಿ ಪಾತ್ರಕ್ಕೆ ರಶ್ಮಿಕಾ ಮಂದಣ್ಣ ಹೆಸರು ಚರ್ಚೆಯಲ್ಲಿದೆ. ಇದೀಗ, ವಿಜಯ್ ಪುತ್ರ ಚಿತ್ರರಂಗಕ್ಕೆ ಪ್ರವೇಶ ಮಾಡ್ತಾರೆ ಎಂಬ ಸುದ್ದಿ ಹೊರಬಿದ್ದಿದೆ. ಇತ್ತೀಚಿಗಷ್ಟೆ ತೆರೆಕಂಡು ಸೂಪರ್ ಹಿಟ್ ಎನಿಸಿಕೊಂಡಿರುವ ತೆಲುಗು ಚಿತ್ರದ ರೀಮೇಕ್ನಲ್ಲಿ ವಿಜಯ್ ಪುತ್ರ ನಟಿಸುವ ಸಾಧ್ಯತೆ ಇದೆ. ಯಾವುದು ಆ ಚಿತ್ರ? ಮುಂದೆ ಓದಿ....
ಉಪ್ಪೇನಾ ರೀಮೇಕ್ನಲ್ಲಿ ವಿಜಯ್ ಪುತ್ರ?
ತೆಲುಗಿನಲ್ಲಿ ಕಳೆದ ವಾರವಷ್ಟೇ ಬಿಡುಗಡೆಯಾಗಿ ಅದ್ಭುತ ಪ್ರದರ್ಶನ ಕಾಣುತ್ತಿರುವ ಉಪ್ಪೇನಾ ಚಿತ್ರವನ್ನು ತಮಿಳಿಗೆ ರೀಮೇಕ್ ಮಾಡುವ ಯೋಜನೆ ನಡೆಯುತ್ತಿದೆಯಂತೆ. ಸದ್ಯದ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಸುದ್ದಿ ಪ್ರಕಾರ, ಉಪ್ಪೇನಾ ತಮಿಳು ರೀಮೇಕ್ನಲ್ಲಿ ವಿಜಯ್ ಪುತ್ರ ಜೇಸನ್ ಸಂಜಯ್ ನಟಿಸುವ ಸಾಧ್ಯತೆ ಇದೆ ಎನ್ನಲಾಗಿದೆ.
ವಿಜಯ್ ಸೇತುಪತಿ ನಟನೆ
ಸುಕುಮಾರ್ ಬಳಿ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡ್ತಿದ್ದ ಬಚ್ಚಿ ಬಾಬು ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದು, ವೈಷ್ಣವ್ ತೇಜ್, ಕೃತಿ ಶೆಟ್ಟಿ ಹಾಗೂ ವಿಜಯ್ ಸೇತುಪತಿ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರದ ರೀಮೇಕ್ ಹಕ್ಕು ಪಡೆಯಲು ವಿಜಯ್ ಮುಂದಾಗಿದ್ದಾರೆ ಎಂಬ ಸುದ್ದಿ ಚರ್ಚೆಯಾಗುತ್ತಿದೆ.
ವಿಜಯ್ ಮುಂದಿನ ಚಿತ್ರಕ್ಕೆ ಮಗ ನಿರ್ದೇಶಕ
ಮತ್ತೊಂದು ಕಡೆ ವಿಜಯ್ ನಟಿಸಲಿರುವ ಮುಂದಿನ ಚಿತ್ರಕ್ಕೆ ಮಗ ಜೇಸನ್ ಸಂಜಯ್ ನಿರ್ದೇಶನ ಮಾಡಲು ತಯಾರಾಗುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ವಿಜಯ್ 65ನೇ ಚಿತ್ರ ಮುಗಿದ ಬಳಿಕ ಮಗನ ಚಿತ್ರದಲ್ಲಿ ವಿಜಯ್ ನಟಿಸುವ ಲೆಕ್ಕಾಚಾರ ಇದೆಯಂತೆ. ಆದ್ರೆ, ಈ ಸುದ್ದಿ ಅಧಿಕೃತವಾಗಿಲ್ಲ.
ತರಬೇತಿ ಪಡೆದು ಬಂದಿರುವ ಜೇಸನ್ ಸಂಜಯ್
ವಿಜಯ್ ಪುತ್ರ ಜೇಸನ್ ಸಂಜಯ್ ಕೆನಡಾದಲ್ಲಿ ತರಬೇತಿ ಪಡೆದು ಬಂದಿದ್ದಾರೆ. ಸಿನಿಮಾ ಕಲೆ, ತಂತ್ರಜ್ಞಾನದಲ್ಲಿ ಪದವಿ ಮುಗಿಸಿದ್ದಾರೆ. ಈಗ ವಿಜಯ್ ಚಿತ್ರಗಳಲ್ಲಿ ಸಹಾಯಕರಾಗಿ ಕೆಲಸ ಮಾಡಲು ತೀರ್ಮಾನಿಸಿರುವ ಸಂಜಯ್ ನಂತರ ಸ್ವತಂತ್ರವಾಗಿ ನಿರ್ದೇಶನ ಮಾಡುವ ಕನಸು ಕಂಡಿದ್ದಾರೆ.
This News Article is a Copy of FILMIBEAT
06-05-25 01:35 pm
HK News Desk
Hassan Suicide, Police Constable Harrasment:...
05-05-25 01:30 pm
ಅಲ್ಲೊಂದು, ಇಲ್ಲೊಂದು ಕೊಲೆ ಆಗತ್ತೆ, ಅದನ್ಯಾಕೆ ಧರ್ಮ...
04-05-25 09:55 pm
ಸಿಇಟಿ ಬಳಿಕ ನೀಟ್ ಪರೀಕ್ಷೆಗೂ ಜನಿವಾರಕ್ಕೆ ಕತ್ತರಿ !...
04-05-25 09:26 pm
ಹಿಮಾಲಯ - ದೆಹಲಿಗೆ ಸುನಾಮಿ, ಮಹಾನ್ ನಾಯಕರ ದುರ್ಮರಣ...
04-05-25 09:15 pm
06-05-25 02:45 pm
HK News Desk
ಭಾರತ - ಪಾಕ್ ಯುದ್ಧ ಸನ್ನಿವೇಶ ; ದೇಶಾದ್ಯಂತ ಮೇ 7ರಂ...
05-05-25 11:10 pm
ಪಾಕ್ ವಾಯು ಪ್ರದೇಶದಲ್ಲಿ ಭಾರತದ ವಿಮಾನಗಳಿಗೆ ನಿರ್ಬಂ...
30-04-25 06:59 pm
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
06-05-25 04:02 pm
Mangalore Correspondent
Suhas Shetty Murder, Mangalore, Police: ಅಹಿತಕ...
06-05-25 12:32 pm
Mangalore Police, Sharan Pumpwell: ದಕ್ಷಿಣ ಕನ್...
05-05-25 10:59 pm
Suhas Shetty murder, MP Brijesh Chowta, Param...
05-05-25 10:43 pm
Mangalore Suhas Shetty murder, BJP Umanath Ko...
05-05-25 07:15 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm