ಬ್ರೇಕಿಂಗ್ ನ್ಯೂಸ್
27-02-21 11:09 am Source: FILMIBEAT ಸಿನಿಮಾ
ಚಾಲೆಂಜಿಂಗ್ ಸ್ಟಾರ್ ದರ್ಶನ್, ಶ್ರೀಮುರಳಿ, ವಿಷ್ಣುವರ್ಧನ್ ಜೊತೆ ನಟಿಸಿದ್ದ ಸ್ಯಾಂಡಲ್ ವುಡ್ ನ ಖ್ಯಾತ ನಟಿ ಮಾನ್ಯಾ ಪಾರ್ಶ್ವವಾಯುಯಿಂದ ಬಳಲುತ್ತಿದ್ದಾರೆ. ಶಾಸ್ತ್ರಿ ಸಿನಿಮಾ ಮೂಲಕ ಕನ್ನಡಿಗರ ಮನೆಗೆದ್ದಿದ್ದ ನಟಿ ಮಾನ್ಯಾ, ಸಿನಿಮಾರಂಗದಿಂದ ದೂರ ಸರಿದು ಅನೇಕ ವರ್ಷಗಳಾಗಿದೆ. ಸದ್ಯ ಅಮೆರಿಕಾದಲ್ಲಿ ವಾಸಿಸುತ್ತಿರುವ ಮಾನ್ಯಾ ಸಾಮಾಜಿಕ ಜಾಲತಾಣದಲ್ಲಿ ಸಖತ್ ಆಕ್ಟೀವ್ ಆಗಿದ್ದಾರೆ.
ಅನಾರೋಗ್ಯಕ್ಕೆ ತುತ್ತಾದ ಬಗ್ಗೆ ನಟಿ ಮಾನ್ಯಾ ಸಾಮಾಜಿಕ ಜಾಲತಾಣದಲ್ಲಿ ಬಹಿರಂಗ ಪಡಿಸಿದ್ದಾರೆ. ತನಗೆ ಕುಳಿತುಕೊಳ್ಳಲು, ಮಲಗಲು, ನಡೆಯಲು ಆಗುತ್ತಿಲ್ಲ ಎಂದು ತನ್ನ ಕಷ್ಟವನ್ನು ಹಂಚಿಕೊಂಡಿದ್ದಾರೆ. ಜೊತೆಗೆ ಮತ್ತೆ ಮಾಮೂಲಿ ಸ್ಥಿತಿಗೆ ಬರುತ್ತೇನೆ, ಮತ್ತೆ ಡಾನ್ಸ್ ಮಾಡುತ್ತೇನೆ ಎನ್ನುವ ಬರವಸೆ ನೀಡಿದ್ದಾರೆ. ತನ್ನ ನೋವಿನ ಬಗ್ಗೆ ಮಾನ್ಯಾ ಸಾಮಾಜಿಕ ಜಾಲತಾಣದಲ್ಲಿ ದೀರ್ಘವಾಗಿ ಬರೆದುಕೊಂಡಿದ್ದಾರೆ. ಮುಂದೆ ಓದಿ..

ಎಡ ಕಾಲು ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ
'ಮೂರು ವಾರಗಳ ಹಿಂದೆ ನಾನು ಗಾಯಗೊಂಡಿದ್ದೆ. ಬಳಿಕ ನನ್ನ ಎಡಭಾಗ ಪಾರ್ಶ್ವವಾಯುಗೆ ಸುತ್ತಾಯಿತು. ನನ್ನ ಎಡಗಾಲು ಸರಿಯಾಗಿ ಕಾರ್ಯನಿರ್ವಹಿಸದ ಕಾರಣ ನಾನು ತುರ್ತು ನಿಗಾಘಟಕದಲ್ಲಿ ಚಿಕಿತ್ಸೆ ಪಡೆಯಬೇಕಾಯಿತು.

ಕುಳಿತುಕೊಳ್ಳಲು, ಮಲಗಲು ಆಗುತ್ತಿಲ್ಲ
'ನನ್ನ ಬೆನ್ನಿಗೆ ಸ್ಟೀರಾಯ್ಡ್ ಚುಚ್ಚುಮದ್ದು ನೀಡಲಾಗಿದೆ. ಕೋವಿಡ್ ಕಾರಣದಿಂದ ಯಾರಿಗೂ ಪ್ರವೇಶ ನೀಡುತ್ತಿಲ್ಲ. ನಾನು ಒಬ್ಬೊಂಟಿಯಾಗಿದ್ದೀನಿ. ನಾನು ಬೇಗನೆ ಗುಣಮುಖಳಾಗುತ್ತೇನೆ ಎಂದು ಭಾವಿಸುದ್ದೇನೆ. ಮೂರು ವಾರಗಳಿಂದ ನನಗೆ ಕುಳಿತುಕೊಳ್ಳಲು, ನಡೆಯಲು, ಮಲಗಲು ಆಗುತ್ತಿಲ್ಲ. ಆದರೆ ಮತ್ತೆ ನಾನು ಮೊದಲಿನ ಸ್ಥಿತಿಗೆ ಬರಲು ಪ್ರಯತ್ನಿಸುತ್ತಿದೀನಿ.'

ಮಾಮೂಲಿ ಸ್ಥಿತಿಗೆ ಬರುತ್ತೇನೆ ಎಂದ ಮಾನ್ಯಾ
'ನಾನು ಮತ್ತೆ ಡಾನ್ಸ್ ಮಾಡಲು ಸಾಧ್ಯವಿಲ್ಲ ಎಂದು ಭಾವಿಸಿದ್ದೆ. ಆದರೆ ವೈದ್ಯರು ನಿಧಾನವಾಗಿ ಚೇತರಿಸಿಕೊಂಡ ಬಳಿಕ ಮತ್ತೆ ಡಾನ್ಸ್ ಮಾಡಬಹುದು ಎಂದು ಹೇಳಿದ್ದಾರೆ. ನಾನು ನಿಧಾನವಾಗಿ ಗುಣಮುಖಳಾಗುತ್ತಿದ್ದೀನಿ ಇದಕ್ಕೆ ದೇವರಿಗೆ ಧನ್ಯವಾದ ತಿಳಿಸುತ್ತೇನೆ' ಎಂದು ದೀರ್ಘವಾಗಿ ಬರೆದುಕೊಂಡಿದ್ದಾರೆ.

ಮತ್ತೆ ಡಾನ್ಸ್ ಮಾಡುತ್ತೇನೆ-ಮಾನ್ಯಾ
'ನಿಮ್ಮನ್ನು ನೀವು ಯಾವತ್ತು ಬಿಟ್ಟುಕೊಡಬೇಡಿ. ಪ್ರತಿಯೊಂದು ಚಿಕ್ಕ ವಿಚಾರಕ್ಕೂ ಹೋರಾಟ ಮಾಡಿ. ನಿಮ್ಮನ್ನು ಬಲಪಡಿಸುತ್ತದೆ ಎಂದು ನಾನು ಭರವಸೆ ನೀಡುತ್ತೇನೆ. ಆ ಸಮಯದಲ್ಲಿ ನಾನು ತುಂಬಾ ನೊಂದಿದ್ದೆ. ತುಂಬಾ ಅತ್ತಿದ್ದೇನೆ. ಆದರೆ ಗೆದ್ದು ಬರುತ್ತೇನೆ. ಮತ್ತೆ ನಾನು ಡಾನ್ಸ್ ಮಾಡುತ್ತೇನೆ' ಎಂದು ಬರೆದುಕೊಂಡಿದ್ದಾರೆ.
This News Article is a Copy of FILMIBEAT
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
10-08-26 11:00 pm
HK News Desk
ನಿವೃತ್ತ ಸರ್ಕಾರಿ ನೌಕರರಿಗೆ ಗುಡ್ನ್ಯೂಸ್ ; ‘ಸಂಧ್ಯ...
08-08-26 12:17 pm
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
10-08-26 08:49 pm
HK News Staffer
Leopard Bajpe, Mangalore: ಬಜ್ಪೆಯಲ್ಲಿ ಮನೆ ಅಂಗಳ...
10-08-26 07:22 pm
ಬಾರ್ ಮುಂದೆ ತಲವಾರು ಝಳಪಿಸಿ ದಾಂಧಲೆ ; ಪುಡಿ ರೌಡಿ ಶ...
10-08-26 11:09 am
ಪೊಲೀಸ್ ಕಮಿಷನರ್ ಕಚೇರಿಯಲ್ಲಿದ್ದುಕೊಂಡೇ ನಾಲ್ಕು ಪಟ್...
09-08-26 04:47 pm
ಪಾಕ್ ಗೂಢಚಾರಿಣಿ ಮಹಿಳೆಯ ಹನಿಟ್ರ್ಯಾಪ್ ; ರಹಸ್ಯ ಮಾಹ...
09-08-26 04:07 pm