ಬ್ರೇಕಿಂಗ್ ನ್ಯೂಸ್
27-02-21 05:09 pm Source: FILMIBEAT ಸಿನಿಮಾ
ರಿಯಲ್ ಸ್ಟಾರ್ ಉಪೇಂದ್ರ ಸದ್ಯ ತೆಲುಗಿನ ಗನಿ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ವರುಣ್ ತೇಜ್ ನಟನೆಯ ಸಿನಿಮಾ ಇದಾಗಿದ್ದು, ಇತ್ತೀಚಿಗಷ್ಟೆ ಗನಿ ಸಿನಿಮಾದ ಟೀಸರ್ ರಿಲೀಸ್ ಆಗಿದೆ. ಚಿತ್ರದಲ್ಲಿ ವರುಣ್ ತೇಜ್ ಬಾಕ್ಸರ್ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ.
ಉಪೇಂದ್ರ ಸದ್ಯ ಹೈದಬಾದ್ ನಲ್ಲಿ ಚಿತ್ರೀಕರಣದಲ್ಲಿದ್ದಾರೆ. ಈ ಸಿನಿಮಾದ ಚಿತ್ರೀಕರಣ ಮುಗಿಸಿ ರಿಯಲ್ ಸ್ಟಾರ್ ಬಹುನಿರೀಕ್ಷೆಯ ಕಬ್ಜ ಸಿನಿಮಾ ಸೇರಿಕೊಳ್ಳಲಿದ್ದಾರೆ. ಆರ್ ಚಂದ್ರು ನಿರ್ದೇಶನದಲ್ಲಿ ಮೂಡಿಬರುತ್ತಿರುವ ಪ್ಯಾನ್ ಇಂಡಿಯಾ ಸಿನಿಮಾ ಇದಾಗಿದ್ದು, ಈಗಾಗಲೇ ಸಾಕಷ್ಟು ಚಿತ್ರೀಕರಣ ಮಾಡಿ ಮುಗಿಸಿದೆ ಸಿನಿಮಾತಂಡ.
ವರುಣ್ ತೇಜ ಜೊತೆ ತೆಲುಗು ಸಿನಿಮಾದ ಚಿತ್ರೀಕರಣ ಆರಂಭಿಸಿದ ಉಪೇಂದ್ರ.
ಸದ್ಯ ಮಾರ್ಚ್ 3ರಿಂದ ಮತ್ತೆ ಚಿತ್ರೀಕರಣ ಪ್ರಾರಂಭ ಮಾಡುತ್ತಿದೆ ಸಿನಿಮಾತಂಡ. ಚಿತ್ರದ ಜೈಲು ದೃಶ್ಯವನ್ನು ಸೆರೆಹಿಡಿಯಲು ಸಿನಿಮಾತಂಡ ಎಲ್ಲಾ ಸಿದ್ಧತೆ ಮಾಡಿಕೊಂಡಿದೆ. ಈಗಾಗಲೇ ಸೆಟ್ ನಿರ್ಮಾಣ ಮಾಡಲಾಗಿದ್ದು, ಕಲಾ ನಿರ್ದೇಶಕ ಶಿವ ಕುಮಾರ್ ಸೆಟ್ ಡಿಸೈನ್ ಮಾಡಿದ್ದಾರೆ.

ಅಂದಹಾಗೆ ಕಬ್ಜ ಸಿನಿಮಾ ಈ ಭಾಗದ ಚಿತ್ರೀಕರಣ ಸುಮಾರು 2 ತಿಂಗಳು ನಡೆಯಲಿದೆಯಂತೆ. ಆಕ್ಷನ್ ದೃಶ್ಯ ಮತ್ತು ಟಾಕಿ ಭಾಗವನ್ನು ಸುಮಾರು 2 ತಿಂಗಳು ಚಿತ್ರೀಕರಣ ಮಾಡಲು ಸಿನಿಮಾತಂಡ ನಿರ್ಧರಿಸಿದೆ ಎನ್ನಲಾಗಿದೆ. ಚಿತ್ರದಲ್ಲಿ ಕಬೀರ್ ದುಹಾನ್ ಸಿಂಗ್, ಕೋಟಾ ಶ್ರೀನಿವಾಸ್ ಸೇರಿದಂತೆ ಸಾಕಷ್ಟು ಕಲಾವಿದರು ಸೇರಿಕೊಳ್ಳುತ್ತಿದ್ದಾರೆ.
ಕಬ್ಜ ಭೂಗತ ಲೋಕದ ಕತೆಯಾಗಿದ್ದು ಸಾಕಷ್ಟು ನಿರೀಕ್ಷೆ ಹುಟ್ಟುಹಾಕಿದೆ. ಚಿತ್ರದ ಮತ್ತೊಂದು ಹೈಲೆಟ್ ಎಂದರೆ ಕಿಚ್ಚ ಸುದೀಪ್. ಚಿತ್ರದಲ್ಲಿ ಸುದೀಪ್ ಭಾರ್ಗವ ಭಕ್ಷಿ ಎನ್ನುವ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈಗಾಗಲೇ ಸುದೀಪ್ ಫಸ್ಟ್ ಲುಕ್ ರಿಲೀಸ್ ಆಗಿದ್ದು, ಅಭಿಮಾನಿಗಳ ಮನಗೆದ್ದಿದೆ. ಚಿತ್ರಕ್ಕೆ ರವಿ ಬಸ್ರೂರ್ ಸಂಗೀತ ಸಂಯೋಜನೆ ಮಾಡಿದ್ದಾರೆ.
ಬಹುನಿರೀಕ್ಷೆಯ ಕನ್ನಡ ಸಿನಿಮಾ ಕಬ್ಜ ತಮಿಳು, ತೆಲುಗು, ಮಲಯಾಳಂ, ಹಿಂದಿ ಸೇರಿದಂತೆ ಇನ್ನೂ ಸಾಕಷ್ಟು ಭಾಷೆಲ್ಲಿ ತೆರೆಗೆ ಬರುತ್ತಿದೆ. ಈ ಸಿನಿಮಾ ಈ ವರ್ಷದ ಕೊನೆಯಲ್ಲಿ ಅಥವಾ ಮುಂದಿನ ವರ್ಷ ತೆರೆಗೆ ಬರುವ ಸಾಧ್ಯತೆ ಇದೆ.
This News Article Is A Copy Of FILMIBEAT
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
10-08-26 11:00 pm
HK News Desk
ನಿವೃತ್ತ ಸರ್ಕಾರಿ ನೌಕರರಿಗೆ ಗುಡ್ನ್ಯೂಸ್ ; ‘ಸಂಧ್ಯ...
08-08-26 12:17 pm
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
10-08-26 08:49 pm
HK News Staffer
Leopard Bajpe, Mangalore: ಬಜ್ಪೆಯಲ್ಲಿ ಮನೆ ಅಂಗಳ...
10-08-26 07:22 pm
ಬಾರ್ ಮುಂದೆ ತಲವಾರು ಝಳಪಿಸಿ ದಾಂಧಲೆ ; ಪುಡಿ ರೌಡಿ ಶ...
10-08-26 11:09 am
ಪೊಲೀಸ್ ಕಮಿಷನರ್ ಕಚೇರಿಯಲ್ಲಿದ್ದುಕೊಂಡೇ ನಾಲ್ಕು ಪಟ್...
09-08-26 04:47 pm
ಪಾಕ್ ಗೂಢಚಾರಿಣಿ ಮಹಿಳೆಯ ಹನಿಟ್ರ್ಯಾಪ್ ; ರಹಸ್ಯ ಮಾಹ...
09-08-26 04:07 pm