ಬ್ರೇಕಿಂಗ್ ನ್ಯೂಸ್
27-02-21 05:09 pm Source: FILMIBEAT ಸಿನಿಮಾ
ರಿಯಲ್ ಸ್ಟಾರ್ ಉಪೇಂದ್ರ ಸದ್ಯ ತೆಲುಗಿನ ಗನಿ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ವರುಣ್ ತೇಜ್ ನಟನೆಯ ಸಿನಿಮಾ ಇದಾಗಿದ್ದು, ಇತ್ತೀಚಿಗಷ್ಟೆ ಗನಿ ಸಿನಿಮಾದ ಟೀಸರ್ ರಿಲೀಸ್ ಆಗಿದೆ. ಚಿತ್ರದಲ್ಲಿ ವರುಣ್ ತೇಜ್ ಬಾಕ್ಸರ್ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ.
ಉಪೇಂದ್ರ ಸದ್ಯ ಹೈದಬಾದ್ ನಲ್ಲಿ ಚಿತ್ರೀಕರಣದಲ್ಲಿದ್ದಾರೆ. ಈ ಸಿನಿಮಾದ ಚಿತ್ರೀಕರಣ ಮುಗಿಸಿ ರಿಯಲ್ ಸ್ಟಾರ್ ಬಹುನಿರೀಕ್ಷೆಯ ಕಬ್ಜ ಸಿನಿಮಾ ಸೇರಿಕೊಳ್ಳಲಿದ್ದಾರೆ. ಆರ್ ಚಂದ್ರು ನಿರ್ದೇಶನದಲ್ಲಿ ಮೂಡಿಬರುತ್ತಿರುವ ಪ್ಯಾನ್ ಇಂಡಿಯಾ ಸಿನಿಮಾ ಇದಾಗಿದ್ದು, ಈಗಾಗಲೇ ಸಾಕಷ್ಟು ಚಿತ್ರೀಕರಣ ಮಾಡಿ ಮುಗಿಸಿದೆ ಸಿನಿಮಾತಂಡ.
ವರುಣ್ ತೇಜ ಜೊತೆ ತೆಲುಗು ಸಿನಿಮಾದ ಚಿತ್ರೀಕರಣ ಆರಂಭಿಸಿದ ಉಪೇಂದ್ರ.
ಸದ್ಯ ಮಾರ್ಚ್ 3ರಿಂದ ಮತ್ತೆ ಚಿತ್ರೀಕರಣ ಪ್ರಾರಂಭ ಮಾಡುತ್ತಿದೆ ಸಿನಿಮಾತಂಡ. ಚಿತ್ರದ ಜೈಲು ದೃಶ್ಯವನ್ನು ಸೆರೆಹಿಡಿಯಲು ಸಿನಿಮಾತಂಡ ಎಲ್ಲಾ ಸಿದ್ಧತೆ ಮಾಡಿಕೊಂಡಿದೆ. ಈಗಾಗಲೇ ಸೆಟ್ ನಿರ್ಮಾಣ ಮಾಡಲಾಗಿದ್ದು, ಕಲಾ ನಿರ್ದೇಶಕ ಶಿವ ಕುಮಾರ್ ಸೆಟ್ ಡಿಸೈನ್ ಮಾಡಿದ್ದಾರೆ.

ಅಂದಹಾಗೆ ಕಬ್ಜ ಸಿನಿಮಾ ಈ ಭಾಗದ ಚಿತ್ರೀಕರಣ ಸುಮಾರು 2 ತಿಂಗಳು ನಡೆಯಲಿದೆಯಂತೆ. ಆಕ್ಷನ್ ದೃಶ್ಯ ಮತ್ತು ಟಾಕಿ ಭಾಗವನ್ನು ಸುಮಾರು 2 ತಿಂಗಳು ಚಿತ್ರೀಕರಣ ಮಾಡಲು ಸಿನಿಮಾತಂಡ ನಿರ್ಧರಿಸಿದೆ ಎನ್ನಲಾಗಿದೆ. ಚಿತ್ರದಲ್ಲಿ ಕಬೀರ್ ದುಹಾನ್ ಸಿಂಗ್, ಕೋಟಾ ಶ್ರೀನಿವಾಸ್ ಸೇರಿದಂತೆ ಸಾಕಷ್ಟು ಕಲಾವಿದರು ಸೇರಿಕೊಳ್ಳುತ್ತಿದ್ದಾರೆ.
ಕಬ್ಜ ಭೂಗತ ಲೋಕದ ಕತೆಯಾಗಿದ್ದು ಸಾಕಷ್ಟು ನಿರೀಕ್ಷೆ ಹುಟ್ಟುಹಾಕಿದೆ. ಚಿತ್ರದ ಮತ್ತೊಂದು ಹೈಲೆಟ್ ಎಂದರೆ ಕಿಚ್ಚ ಸುದೀಪ್. ಚಿತ್ರದಲ್ಲಿ ಸುದೀಪ್ ಭಾರ್ಗವ ಭಕ್ಷಿ ಎನ್ನುವ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈಗಾಗಲೇ ಸುದೀಪ್ ಫಸ್ಟ್ ಲುಕ್ ರಿಲೀಸ್ ಆಗಿದ್ದು, ಅಭಿಮಾನಿಗಳ ಮನಗೆದ್ದಿದೆ. ಚಿತ್ರಕ್ಕೆ ರವಿ ಬಸ್ರೂರ್ ಸಂಗೀತ ಸಂಯೋಜನೆ ಮಾಡಿದ್ದಾರೆ.
ಬಹುನಿರೀಕ್ಷೆಯ ಕನ್ನಡ ಸಿನಿಮಾ ಕಬ್ಜ ತಮಿಳು, ತೆಲುಗು, ಮಲಯಾಳಂ, ಹಿಂದಿ ಸೇರಿದಂತೆ ಇನ್ನೂ ಸಾಕಷ್ಟು ಭಾಷೆಲ್ಲಿ ತೆರೆಗೆ ಬರುತ್ತಿದೆ. ಈ ಸಿನಿಮಾ ಈ ವರ್ಷದ ಕೊನೆಯಲ್ಲಿ ಅಥವಾ ಮುಂದಿನ ವರ್ಷ ತೆರೆಗೆ ಬರುವ ಸಾಧ್ಯತೆ ಇದೆ.
This News Article Is A Copy Of FILMIBEAT
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 09:28 pm
HK News Desk
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm
Mangalore Minor student Suicide: ಅಪ್ರಾಪ್ತೆಗೆ...
24-06-26 02:25 pm