ಬ್ರೇಕಿಂಗ್ ನ್ಯೂಸ್
27-02-21 05:09 pm Source: FILMIBEAT ಸಿನಿಮಾ
ರಿಯಲ್ ಸ್ಟಾರ್ ಉಪೇಂದ್ರ ಸದ್ಯ ತೆಲುಗಿನ ಗನಿ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ವರುಣ್ ತೇಜ್ ನಟನೆಯ ಸಿನಿಮಾ ಇದಾಗಿದ್ದು, ಇತ್ತೀಚಿಗಷ್ಟೆ ಗನಿ ಸಿನಿಮಾದ ಟೀಸರ್ ರಿಲೀಸ್ ಆಗಿದೆ. ಚಿತ್ರದಲ್ಲಿ ವರುಣ್ ತೇಜ್ ಬಾಕ್ಸರ್ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ.
ಉಪೇಂದ್ರ ಸದ್ಯ ಹೈದಬಾದ್ ನಲ್ಲಿ ಚಿತ್ರೀಕರಣದಲ್ಲಿದ್ದಾರೆ. ಈ ಸಿನಿಮಾದ ಚಿತ್ರೀಕರಣ ಮುಗಿಸಿ ರಿಯಲ್ ಸ್ಟಾರ್ ಬಹುನಿರೀಕ್ಷೆಯ ಕಬ್ಜ ಸಿನಿಮಾ ಸೇರಿಕೊಳ್ಳಲಿದ್ದಾರೆ. ಆರ್ ಚಂದ್ರು ನಿರ್ದೇಶನದಲ್ಲಿ ಮೂಡಿಬರುತ್ತಿರುವ ಪ್ಯಾನ್ ಇಂಡಿಯಾ ಸಿನಿಮಾ ಇದಾಗಿದ್ದು, ಈಗಾಗಲೇ ಸಾಕಷ್ಟು ಚಿತ್ರೀಕರಣ ಮಾಡಿ ಮುಗಿಸಿದೆ ಸಿನಿಮಾತಂಡ.
ವರುಣ್ ತೇಜ ಜೊತೆ ತೆಲುಗು ಸಿನಿಮಾದ ಚಿತ್ರೀಕರಣ ಆರಂಭಿಸಿದ ಉಪೇಂದ್ರ.
ಸದ್ಯ ಮಾರ್ಚ್ 3ರಿಂದ ಮತ್ತೆ ಚಿತ್ರೀಕರಣ ಪ್ರಾರಂಭ ಮಾಡುತ್ತಿದೆ ಸಿನಿಮಾತಂಡ. ಚಿತ್ರದ ಜೈಲು ದೃಶ್ಯವನ್ನು ಸೆರೆಹಿಡಿಯಲು ಸಿನಿಮಾತಂಡ ಎಲ್ಲಾ ಸಿದ್ಧತೆ ಮಾಡಿಕೊಂಡಿದೆ. ಈಗಾಗಲೇ ಸೆಟ್ ನಿರ್ಮಾಣ ಮಾಡಲಾಗಿದ್ದು, ಕಲಾ ನಿರ್ದೇಶಕ ಶಿವ ಕುಮಾರ್ ಸೆಟ್ ಡಿಸೈನ್ ಮಾಡಿದ್ದಾರೆ.

ಅಂದಹಾಗೆ ಕಬ್ಜ ಸಿನಿಮಾ ಈ ಭಾಗದ ಚಿತ್ರೀಕರಣ ಸುಮಾರು 2 ತಿಂಗಳು ನಡೆಯಲಿದೆಯಂತೆ. ಆಕ್ಷನ್ ದೃಶ್ಯ ಮತ್ತು ಟಾಕಿ ಭಾಗವನ್ನು ಸುಮಾರು 2 ತಿಂಗಳು ಚಿತ್ರೀಕರಣ ಮಾಡಲು ಸಿನಿಮಾತಂಡ ನಿರ್ಧರಿಸಿದೆ ಎನ್ನಲಾಗಿದೆ. ಚಿತ್ರದಲ್ಲಿ ಕಬೀರ್ ದುಹಾನ್ ಸಿಂಗ್, ಕೋಟಾ ಶ್ರೀನಿವಾಸ್ ಸೇರಿದಂತೆ ಸಾಕಷ್ಟು ಕಲಾವಿದರು ಸೇರಿಕೊಳ್ಳುತ್ತಿದ್ದಾರೆ.
ಕಬ್ಜ ಭೂಗತ ಲೋಕದ ಕತೆಯಾಗಿದ್ದು ಸಾಕಷ್ಟು ನಿರೀಕ್ಷೆ ಹುಟ್ಟುಹಾಕಿದೆ. ಚಿತ್ರದ ಮತ್ತೊಂದು ಹೈಲೆಟ್ ಎಂದರೆ ಕಿಚ್ಚ ಸುದೀಪ್. ಚಿತ್ರದಲ್ಲಿ ಸುದೀಪ್ ಭಾರ್ಗವ ಭಕ್ಷಿ ಎನ್ನುವ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈಗಾಗಲೇ ಸುದೀಪ್ ಫಸ್ಟ್ ಲುಕ್ ರಿಲೀಸ್ ಆಗಿದ್ದು, ಅಭಿಮಾನಿಗಳ ಮನಗೆದ್ದಿದೆ. ಚಿತ್ರಕ್ಕೆ ರವಿ ಬಸ್ರೂರ್ ಸಂಗೀತ ಸಂಯೋಜನೆ ಮಾಡಿದ್ದಾರೆ.
ಬಹುನಿರೀಕ್ಷೆಯ ಕನ್ನಡ ಸಿನಿಮಾ ಕಬ್ಜ ತಮಿಳು, ತೆಲುಗು, ಮಲಯಾಳಂ, ಹಿಂದಿ ಸೇರಿದಂತೆ ಇನ್ನೂ ಸಾಕಷ್ಟು ಭಾಷೆಲ್ಲಿ ತೆರೆಗೆ ಬರುತ್ತಿದೆ. ಈ ಸಿನಿಮಾ ಈ ವರ್ಷದ ಕೊನೆಯಲ್ಲಿ ಅಥವಾ ಮುಂದಿನ ವರ್ಷ ತೆರೆಗೆ ಬರುವ ಸಾಧ್ಯತೆ ಇದೆ.
This News Article Is A Copy Of FILMIBEAT
30-10-25 11:00 pm
Bangalore Correspondent
ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ನ.5ರಂದು ಮತ್ತೊಂದ...
30-10-25 06:22 pm
ಸಿದ್ದರಾಮಯ್ಯ ಅವರೇ ಐದು ವರ್ಷಗಳಿಗೆ ಮುಖ್ಯಮಂತ್ರಿಯೆಂ...
30-10-25 04:34 pm
ಬೆಂಗಳೂರು ; ಕಾರಿನ ಮಿರ್ರ್ಗೆ ಬೈಕ್ ಟಚ್ ಆಗಿದ್ದ...
29-10-25 09:12 pm
30-10-25 03:20 pm
HK News Desk
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
30-10-25 11:16 pm
Mangalore Correspondent
ಧರ್ಮಸ್ಥಳ ಪ್ರಕರಣ ; ಮಹೇಶ್ ಶೆಟ್ಟಿ ತಿಮರೋಡಿ ತಂಡಕ್ಕ...
30-10-25 08:06 pm
ರಸ್ತೆ ಗುಂಡಿ ಮುಚ್ಚಿಸಲು ಹಣವಿಲ್ಲದ ಸರ್ಕಾರಕ್ಕೆ ಶಾಸ...
30-10-25 07:28 pm
ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮದುವೆಗೆ ಬರುತ್ತಿದ್ದ ಟೆ...
30-10-25 03:23 pm
ನವೆಂಬರ್ 28ರಂದು ಉಡುಪಿ ಶ್ರೀಕೃಷ್ಣ ಮಠಕ್ಕೆ ಪ್ರಧಾನಿ...
30-10-25 11:28 am
29-10-25 10:43 pm
Mangalore Correspondent
ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm
ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm
ಕೇರಳ ಮೂಲದ ಗಲ್ಫ್ ಉದ್ಯಮಿಗೆ ಹನಿಟ್ರ್ಯಾಪ್ ; ಬಂಧನಕ್...
28-10-25 10:48 pm