ಬ್ರೇಕಿಂಗ್ ನ್ಯೂಸ್
01-03-21 03:00 pm Source: FILMIBEAT ಸಿನಿಮಾ
ಬಿಗ್ ಬಾಸ್ ಕನ್ನಡ ಎಂಟನೇ ಆವೃತ್ತಿ ಆರಂಭವಾಗಿದ್ದು, ಹದಿನೇಳು ಸ್ಪರ್ಧಿಗಳು ಈಗಾಗಲೇ ದೊಡ್ಮನೆ ಪ್ರವೇಶಿಸಿದ್ದಾರೆ. ಭಾನುವಾರ ಸಂಜೆ ಅದ್ಧೂರಿಯಾಗಿ ನಡೆದ ಓಪನಿಂಗ್ ಕಾರ್ಯಕ್ರಮದಲ್ಲಿ ಎಲ್ಲ ಸ್ಪರ್ಧಿಗಳು 'ಬಿಗ್' ಮನೆ ಸೇರಿದ್ದಾರೆ.
ಈ ಆವೃತ್ತಿಯಲ್ಲಿ ಸೋಶಿಯಲ್ ಮೀಡಿಯಾ ಸ್ಟಾರ್ಗಳು, ಕಿರುತೆರೆ ಕಲಾವಿದರು ಹಾಗೂ ಸಿನಿಮಾ ನಟರು ಹೆಚ್ಚಿದ್ದಾರೆ. ಹದಿನೇಳು ಸ್ಪರ್ಧಿಗಳು, ನೂರು ದಿನ, ಅರ್ಧಕೋಟಿ ರೂಪಾಯಿಗಾಗಿ ಪೈಪೋಟಿ ನಡೆಸಲಿದ್ದಾರೆ. ಮಾರ್ಚ್ 1 ರಿಂದ ಪ್ರತಿದಿನದ ಸಂಚಿಕೆ ಪ್ರಸಾರವಾಗಲಿದೆ. ಸೋಮವಾರ ಎಪಿಸೋಡ್ಗೂ ಮುಂಚೆ ಪ್ರೋಮೋವೊಂದು ರಿಲೀಸ್ ಆಗಿದ್ದು, ಮೊದಲ ದಿನದಲ್ಲೇ ದಿವ್ಯ ಸುರೇಶ್ ಅವರು ಮಂಜುಪಾವಗಡ ಹೃದಯ ಕದ್ದಿದ್ದಾರೆ. ಮುಂದೆ ಓದಿ...
ಮಂಜು ಹೃದಯ ಕದ್ದ ದಿವ್ಯ ಸುರೇಶ್
ಬಿಗ್ ಬಾಸ್ ಕನ್ನಡ ಏಂಟನೇ ಆವೃತ್ತಿಯ ಮೊದಲ ದಿನದ ಪ್ರೋಮೋ ಬಿಡುಗಡೆಯಾಗಿದೆ. ಈ ಪ್ರೋಮೋ ಮಂಜು ಪಾವಗಡ ಮತ್ತು ದಿವ್ಯ ಸುರೇಶ್ ನಡುವಿನ ಸಂಭಾಷಣೆಯಾಗಿದ್ದು, ದಿವ್ಯ ಮಾತಿಗೆ ಮಜಾಭಾರತ ಮಂಜು ಫಿದಾ ಆಗಿದ್ದಾರೆ.
ನಿಮಗೋಸ್ಕರ ಏನು ಬೇಕಾದರು ಮಾಡ್ತೀನಿ
ಬಿಗ್ ಬಾಸ್ ಮನೆ ಪ್ರವೇಶ ಮಾಡಿರುವ ಸ್ಪರ್ಧಿಗಳ ತಮ್ಮ ಲಗೇಜ್ಗಳನ್ನು ಪಡೆದುಕೊಂಡು ಜೋಡಿಸಿಕೊಳ್ಳುತ್ತಿದ್ದಾರೆ. ಈ ಸಮಯದಲ್ಲಿ ದಿವ್ಯ ಸುರೇಶ್ ಅವರ ಬಳಿ ಬಂದ ಮಂಜು ಪಾವಗಡ, ''ನಿಮಗೆ ಏನು ಬೇಕು ಕೇಳಿ, ನಿಮಗೋಸ್ಕರ ಏನು ಬೇಕಾದರೂ ಮಾಡ್ತೀನಿ' ಅಂದರು. ಬಳಿಕ, ''ನಿಮ್ಮ ಕೈಯಲ್ಲಿ ಕೆಲಸ ಮಾಡಿಸಿ ಕಷ್ಟ ಕೊಡಲ್ಲ, ನಿಮ್ಮ ಕೈಗಳಿಗೆ ನೋವಾದರೆ ನನ್ನ ಮನಸ್ಸಿಗೆ ನೋವಾಗುತ್ತೆ'' ಎಂದುಬಿಟ್ಟರು.
ಏನೋ ಏನೋ ಆಗಿದೆ...
''ನಿಮ್ಮ ಕೈಗಳಿಗೆ ನೋವಾದರೆ ನನ್ನ ಮನಸ್ಸಿಗೆ ನೋವಾಗುತ್ತೆ'' ಎಂದು ದಿವ್ಯ ಸುರೇಶ್ ಅವರ ಮಾತು ಮಂಜು ಪಾವಗಡ ಹೃದಯ ಸ್ಪರ್ಶಿಸಿದೆ. ಇದೇ ಸಮಯಕ್ಕೆ ಬ್ಯಾಕ್ ಗ್ರೌಂಡ್ನಲ್ಲಿ ''ಏನೋ ಏನೋ ಆಗಿದೆ'' ಹಾಡು ಬೇರೆ ಹಾಕಿಬಿಟ್ಟಿದ್ದಾರೆ. ಇದರ ಮುಂದುವರಿದ ಭಾಗವನ್ನು ಇಂದಿನ ಸಂಚಿಕೆ ರಾತ್ರಿ 9.30ಕ್ಕೆ ನೋಡಬಹುದು.

ಯಾರು ಈ ದಿವ್ಯಾ ಸುರೇಶ್?
ದಿವ್ಯ ಸುರೇಶ್ ರೂಪದರ್ಶಿ, ಸಿನಿಮಾ ನಟಿ. 2017ರಲ್ಲಿ 'ಸೌತ್ ಇಂಡಿಯಾ ಮಿಸ್' ಪಟ್ಟ ಗೆದ್ದಿದ್ದಾರೆ. 2017ರಲ್ಲಿ ರಿಲೀಸ್ ಆಗಿದ್ದ ಕನ್ನಡ ಸಿನಿಮಾ 'ಹಿಲ್ಟನ್ ಹೌಸ್' ಚಿತ್ರದ ಮೂಲಕ ದಿವ್ಯ ಸುರೇಶ್ ಸ್ಯಾಂಡಲ್ವುಡ್ ಪ್ರವೇಶಿಸಿದ್ದರು. ನರೇಂದ್ರ ಬಾಬು ನಿರ್ದೇಶಿಸಿದ್ದ ಈ ಚಿತ್ರದಲ್ಲಿ ಪ್ರಮುಖ ನಟಿಯಾಗಿ ಬಣ್ಣ ಹಚ್ಚಿದ್ದರು. 2019ರಲ್ಲಿ ತೆರೆಕಂಡ ''ಡಿಗ್ರಿ ಕಾಲೇಜ್'' ಮೂಲಕ ಟಾಲಿವುಡ್ ಇಂಡಸ್ಟ್ರಿ ಪ್ರವೇಶಿಸಿದರು.
This News Article Is A Copy Of FILMIBEAT
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 09:28 pm
HK News Desk
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm
Mangalore Minor student Suicide: ಅಪ್ರಾಪ್ತೆಗೆ...
24-06-26 02:25 pm