ಬ್ರೇಕಿಂಗ್ ನ್ಯೂಸ್
03-03-21 09:08 pm Source: FILMIBEAT ಸಿನಿಮಾ
ಸುಶಾಂತ್ ಸಿಂಗ್ ರಜಪೂತ್ ಹಾಗೂ ರಿಯಾ ಚಕ್ರವರ್ತಿ ಪರಸ್ಪರ ಪ್ರೇಮದಲ್ಲಿದ್ದಾಗ ಇಬ್ಬರೂ ಒಟ್ಟಿಗೆ ಸಿನಿಮಾ ಮಾಡಲು ತಯಾರಾಗಿದ್ದರು. ಕತೆ, ನಿರ್ಮಾಪಕರೂ ಓಕೆ ಆಗಿದ್ದರು. ಆದರೆ ಸಿನಿಮಾ ಸೆಟ್ಟೇರುವ ಹೊತ್ತಿಗೆ ಲಾಕ್ಡೌನ್ ಆಯಿತು, ಆ ನಂತರ ಸುಶಾಂತ್ ಸಿಂಗ್ ಆತ್ಮಹತ್ಯೆಗೆ ಶರಣಾದರು.
ಆದರೆ ಆಗ ನಿಂತಿದ್ದ ಸುಶಾಂತ್ ಸಿಂಗ್-ರಿಯಾ ಚಕ್ರವರ್ತಿ ಸಿನಿಮಾ ಈಗ ಮತ್ತೆ ಪ್ರಾರಂಭವಾಗುತ್ತಿದೆ. ಸುಶಾಂತ್ ಸಿಂಗ್ ರಜಪೂತ್ ಬದಲಿಗೆ ಬೇರೊಬ್ಬ ನಾಯಕನನ್ನು ಹಾಕಿಕೊಂಡು ಸಿನಿಮಾ ಮಾಡುವುದಾಗಿ ಹೇಳಿದ್ದಾರೆ ನಿರ್ದೇಶಕರು.
ರಿಯಾ ಜೊತೆಗೆ ಈಗಾಗಲೇ 'ಚೆಹರೆ' ಸಿನಿಮಾ ಮಾಡಿರುವ ನಿರ್ದೇಶಕ ರೂಮಿ ಜಫ್ರಿ, ರಿಯಾ ಜೊತೆ ಮತ್ತೊಂದು ಸಿನಿಮಾ ಮಾಡುತ್ತೇನೆ ಎಂದು ಹೇಳಿದ್ದಾರೆ. ಸಿನಿಮಾದ ಕತೆಯೂ ಈಗಾಗಲೇ ತಯಾರಾಗಿದ್ದು, ನಾಯಕ-ನಾಯಕಿ ಪಾತ್ರವೂ ಸಹ ಅಂತಿಮವಾಗಿದೆಯಂತೆ.
ಸುಶಾಂತ್ ಸಿಂಗ್ ಹಾಗೂ ರಿಯಾ ಚಕ್ರವರ್ತಿ ಅವರೊಟ್ಟಿಗೆ ಲಾಕ್ಡೌನ್ ಗೂ ಮೊದಲೇ ಸಿನಿಮಾ ಯೋಜನೆ ಆಗಿತ್ತು. ಲಂಡನ್ನಲ್ಲಿ ನಡೆಯುವ ಪ್ರೇಮಕತಾ ಸಿನಿಮಾವನ್ನು ನಿರ್ಮಿಸುವ ಯೋಜನೆ ಮಾಡಿ ಇಬ್ಬರಿಗೂ ಕತೆ ಹೇಳಿ, ಅವರೂ ಸಹ ಒಪ್ಪಿಕೊಂಡಿದ್ದರು. ಆದರೆ ಈ ಲಾಕ್ಡೌನ್ ನಲ್ಲಿಯೇ ಬೇರೆಯೇ ನಡೆಯಿತು' ಎಂದಿದ್ದಾರೆ ರೂಮಿ ಜಫ್ರಿ.
ಸುಶಾಂತ್ ಸಿಂಗ್ ನಟಿಸಬೇಕಿದ್ದ ಸ್ಥಾನಕ್ಕೆ ಪ್ರತಿಭಾವಂತ ಸ್ಟಾರ್ ನಟನನ್ನೇ ಆಯ್ಕೆ ಮಾಡಿದ್ದಾರಂತೆ ರೂಮಿ. ಆದರೆ ಆ ನಾಯಕ ಯಾರು ಎಂದು ಮಾಧ್ಯಮಗಳ ಮುಂದೆ ಹೇಳಿಲ್ಲ. ಬದಲಿಗೆ ರಿಯಾ ಜೊತೆ ಕೆಲಸ ಮಾಡಲು ಆ ನಟನಿಗೆ ಬಹಳ ಇಷ್ಟವಿರುವುದಾಗಿ ಮಾತ್ರ ಹೇಳಿದ್ದಾರೆ. ನಾನು ಆ ನಟನಿಗೆ ಕತೆ ಹೇಳಿ ರಿಯಾ ಚಕ್ರವರ್ತಿ ನಾಯಕಿ ಎಂದು ಹೇಳಿದಾಗ, 'ನನಗೂ ಆಕೆಯೊಂದಿಗೆ ನಟಿಸಲು ಇಷ್ಟವಿದೆ.
ಆಕೆ ಸುಂದರ ಹಾಗೂ ಪ್ರತಿಭಾವಂತ ಹುಡುಗಿ. ಆಕೆ ಜಾಮೀನಿನ ಮೇಲಿದ್ದರೂ ನನಗೆ ಆಕೆಯೊಂದಿಗೆ ನಟಿಸಲು ಅಡ್ಡಿಯಿಲ್ಲ. ಸಂಜಯ್ ದತ್ ಸಹ ಜಾಮೀನಿನ ಮೇಲಿದ್ದಾಗ ಎಷ್ಟೋಂದು ಸಿನಿಮಾಗಳನ್ನು ಮಾಡಿದರು' ಎಂದು ಆ ನಟ ಹೇಳಿದ್ದಾರಂತೆ. ರಿಯಾ ಚಕ್ರವರ್ತಿ, ಅಮಿತಾಬ್ ಬಚ್ಚನ್, ಇಮ್ರಾನ್ ಅಶ್ಮಿ ಇನ್ನೂ ಹಲವರು ನಟಿಸಿರುವ 'ಚೆಹ್ರೆ' ಸಿನಿಮಾವು ಏಪ್ರಿಲ್ 30 ರಂದು ಬಿಡುಗಡೆ ಆಗುತ್ತಿದ್ದು, ಆ ಸಿನಿಮಾದ ಬಿಡುಗಡೆ ನಂತರ ರಿಯಾ ನಾಯಕಿಯಾಗಿರುವ ಹೊಸ ಸಿನಿಮಾ ಸೆಟ್ಟೇರಲಿದೆ. ಸಿನಿಮಾದ ನಿರ್ಮಾಣವನ್ನು ವಶು ಭಗ್ನಾನಿ ಮಾಡಲಿದ್ದಾರೆ.
This News Article Is A Copy Of FILMIBEAT
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
10-08-26 11:00 pm
HK News Desk
ನಿವೃತ್ತ ಸರ್ಕಾರಿ ನೌಕರರಿಗೆ ಗುಡ್ನ್ಯೂಸ್ ; ‘ಸಂಧ್ಯ...
08-08-26 12:17 pm
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
10-08-26 08:49 pm
HK News Staffer
Leopard Bajpe, Mangalore: ಬಜ್ಪೆಯಲ್ಲಿ ಮನೆ ಅಂಗಳ...
10-08-26 07:22 pm
ಬಾರ್ ಮುಂದೆ ತಲವಾರು ಝಳಪಿಸಿ ದಾಂಧಲೆ ; ಪುಡಿ ರೌಡಿ ಶ...
10-08-26 11:09 am
ಪೊಲೀಸ್ ಕಮಿಷನರ್ ಕಚೇರಿಯಲ್ಲಿದ್ದುಕೊಂಡೇ ನಾಲ್ಕು ಪಟ್...
09-08-26 04:47 pm
ಪಾಕ್ ಗೂಢಚಾರಿಣಿ ಮಹಿಳೆಯ ಹನಿಟ್ರ್ಯಾಪ್ ; ರಹಸ್ಯ ಮಾಹ...
09-08-26 04:07 pm