ಬ್ರೇಕಿಂಗ್ ನ್ಯೂಸ್
04-03-21 11:41 am Source: FILMIBEAT ಸಿನಿಮಾ
ಬಿಗ್ಬಾಸ್ ಮನೆ ದಿನದಿಂದ ದಿನಕ್ಕೆ ಬಿಸಿ ಏರುತ್ತಿದೆ. ಮೊದಲ ಎರಡು ದಿನ ಹಾಸ್ಯ-ನಗು ತುಂಬಿಕೊಂಡಿದ್ದ ಮನೆಯಲ್ಲಿ ಸಣ್ಣದಾಗಿ ಮನಸ್ತಾಪ, ಕೋಪ, ದೂರು, ಜಗಳಗಳು ಏಳುತ್ತಿವೆ.
ನಿನ್ನೆಯ (ಬುಧವಾರ) ಎಪಿಸೋಡ್ನಲ್ಲಿ ಪ್ರಶಾಂತ್ ಸಂಬರ್ಗಿ ಹಾಗೂ ಬ್ರೋ ಗೌಡನ ನಡುವೆ ಈಗಾಗಲೇ ಜಗಳವಾಗಿದ್ದನ್ನು ಪ್ರೇಕ್ಷಕರು ನೋಡಿದ್ದಾರೆ. ಗುರುವಾರದ ರಾತ್ರಿಯ ಎಪಿಸೋಡ್ನಲ್ಲಿ ಇನ್ನೂ ಭಾರಿ ದೊಡ್ಡ ಜಗಳವೇ ನಡೆಯಲಿದೆ.
ಹೌದು, ಇಬ್ಬರು ಮಹಿಳಾ ಸ್ಪರ್ಧಿಗಳು ಪರಸ್ಪರ ಕುಸ್ತಿಗೆ ಬಿದ್ದಿದ್ದಾರೆ ಆದರೆ ಇದು ಯಾವುದೇ ಜಗಳ ಕಾರಣಕ್ಕೆ ಅಲ್ಲ ಬದಲಿಗೆ ಟಾಸ್ಕ್ನ ಕಾರಣಕ್ಕೆ. ಇಬ್ಬರು ಮಹಿಳಾ ಸ್ಪರ್ಧಿಗಳು ಪರಸ್ಪರ ಕಿತ್ತಾಡುತ್ತಿರುವ ಪ್ರೋಮೊ ಅನ್ನು ಈಗಾಗಲೇ ಬಿಡುಗಡೆ ಮಾಡಲಾಗಿದ್ದು, ಕುತೂಹಲ ದುಪ್ಪಟ್ಟಾಗಿದೆ.
ಕಿತ್ತಾಡಿದ ಧನುಶ್ರಿ-ದಿವ್ಯಾ ಸುರೇಶ್
ಸ್ಪರ್ಧಿಗಳಾದ ದಿವ್ಯಾ ಸುರೇಶ್ ಹಾಗೂ ಟಿಕ್ಟಾಕ್ ಸ್ಟಾರ್ ಧನುಶ್ರಿ ಅವರು ಟಾಸ್ಕ್ನಲ್ಲಿ ಗೆಲ್ಲಲು ಆಟವೊಂದನ್ನು ಆಡುತ್ತಿದ್ದು, ಆಟದಲ್ಲಿ ಪರಸ್ಪರ ಕಿತ್ತಾಡುತ್ತಿದ್ದಾರೆ. ಈ ಕಿತ್ತಾಟ ಬಹು ತೀವ್ರವಾಗಿಯೇ ಇದೆ. ಇಬ್ಬರೂ ಸ್ಪರ್ಧಿಗಳು ಒಬ್ಬರನ್ನೊಬ್ಬರು ಎಳೆದಾಡಿ-ತಳ್ಳಾಡಿ ಹಿಡಿದು ಬೀಳಿಸಿ ಆಟದಲ್ಲಿ ಗೆಲ್ಲುವ ಪ್ರಯತ್ನ
ಬಿಗ್ಬಾಸ್ ಕೊಟ್ಟಿದ್ದಾರೆ ಅವಕಾಶ
ಧನುಶ್ರಿ ಈಗಾಗಲೇ ನಾಮಿನೇಟ್ ಆಗಿದ್ದು, ಗೀತಾ ಭಟ್ ಅವರ ಮೇಲೆ ಆಟದಲ್ಲಿ ಸೋತು ಸೇಫ್ ಜೋನ್ಗೆ ಹೋಗಲು ಇದ್ದ ಒಂದು ಅವಕಾಶವನ್ನು ಕಳೆದುಕೊಂಡಿದ್ದಾರೆ. ಆದರೆ ಬಿಗ್ಬಾಸ್ ಕೊಟ್ಟಿರುವ ಮತ್ತೊಂದು ಅವಕಾಶದಲ್ಲಿ ದಿವ್ಯಾ ಸುರೇಶ್ ಎದುರು ಆಡಿದ್ದಾರೆ ಧನುಶ್ರಿ.
ಚೆಂಡಿಗಾಗಿ ಧನುಶ್ರಿ-ದಿವ್ಯಾ ಸುರೇಶ್ ಕಿತ್ತಾಟ
ಕೋರ್ಟ್ನ ಮಧ್ಯದಲ್ಲಿರುವ ಚೆಂಡನ್ನು ಇಬ್ಬರು ಸ್ಪರ್ಧಿಗಳು ಬೇಗನೇ ಎತ್ತಿಕೊಂಡು ಎದುರಾಳಿ ಅಂಗಳದಲ್ಲಿರುವ ಬಾಸ್ಕೆಟ್ಗೆ ಹಾಕುವ ಟಾಸ್ಕ್ ಅನ್ನು ಬಿಗ್ಬಾಸ್ ನೀಡಿದ್ದಾರೆ. ಬಾಸ್ಕೆಟ್ ಬಾಲ್ ಆಟದ ಮಾದರಿಯಲ್ಲಿಯೇ ಈರುವ ಆಟವನ್ನು ಧನುಶ್ರಿ ಹಾಗೂ ದಿವ್ಯಾ ಇಬ್ಬರೂ ಬಹಳ ಬಲಪ್ರಯೋಗಿಸಿ ಆಡುತ್ತಿರುವುದು ಪ್ರೋಮೋ ನಲ್ಲಿ ಗೊತ್ತಾಗುತ್ತಿದೆ.

ಗಾಯಗೊಂಡ ದಿವ್ಯಾ ಸುರೇಶ್
ಪ್ರೊಮೋದಲ್ಲಿ ಕಾಣುತ್ತಿರುವಂತೆ ಈ ಆಟದಲ್ಲಿ ದಿವ್ಯಾಗೆ ದೊಡ್ಡ ಪೆಟ್ಟೇ ಆಗಿದೆ. ದಿವ್ಯಾ ಅವರ ಕಾಲಿಗೆ ಏಟಾಗಿ ರಕ್ತ ಹರಿದಿದೆ. ಮನೆಯ ಇತರ ಸ್ಪರ್ಧಿಗಳು ದಿವ್ಯಾ ಅವರ ಶುಶ್ರೂಶೆಯಲ್ಲಿ ತೊಡಗಿದ್ದಾರೆ. ಆಟದ ಅಂತ್ಯದ ಫಲಿತಾಂಶ ಏನಾಯಿತು. ಧನುಶ್ರಿ ಸೇಫ್ ಆದರಾ ಅಥವಾ ದಿವ್ಯಾ ಸೇಫ್ ಆದರಾ ಎಂಬುದು ಗುರುವಾರ ರಾತ್ರಿ ಎಪಿಸೋಡ್ನಲ್ಲಿ ಗೊತ್ತಾಗಲಿದೆ.
This News Article Is A Copy Of FILMIBEAT
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
10-08-26 11:00 pm
HK News Desk
ನಿವೃತ್ತ ಸರ್ಕಾರಿ ನೌಕರರಿಗೆ ಗುಡ್ನ್ಯೂಸ್ ; ‘ಸಂಧ್ಯ...
08-08-26 12:17 pm
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
10-08-26 08:49 pm
HK News Staffer
Leopard Bajpe, Mangalore: ಬಜ್ಪೆಯಲ್ಲಿ ಮನೆ ಅಂಗಳ...
10-08-26 07:22 pm
ಬಾರ್ ಮುಂದೆ ತಲವಾರು ಝಳಪಿಸಿ ದಾಂಧಲೆ ; ಪುಡಿ ರೌಡಿ ಶ...
10-08-26 11:09 am
ಪೊಲೀಸ್ ಕಮಿಷನರ್ ಕಚೇರಿಯಲ್ಲಿದ್ದುಕೊಂಡೇ ನಾಲ್ಕು ಪಟ್...
09-08-26 04:47 pm
ಪಾಕ್ ಗೂಢಚಾರಿಣಿ ಮಹಿಳೆಯ ಹನಿಟ್ರ್ಯಾಪ್ ; ರಹಸ್ಯ ಮಾಹ...
09-08-26 04:07 pm