ಬ್ರೇಕಿಂಗ್ ನ್ಯೂಸ್
04-03-21 05:07 pm Source: FILMIBEAT ಸಿನಿಮಾ
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯದ ಯುವರತ್ನ ಸಿನಿಮಾ ಬಿಡುಗಡೆಗೆ ಎಲ್ಲ ತಯಾರಿ ನಡೆಯುತ್ತಿದೆ.
ಏಪ್ರಿಲ್ 1ಕ್ಕೆ ಯುವರತ್ನ ಸಿನಿಮಾ ಕನ್ನಡ ಮತ್ತು ತೆಲುಗು ಭಾಷೆಯಲ್ಲಿ ರಿಲೀಸ್ ಆಗಲಿದೆ. ಪೊಗರು ಅಬ್ಬರ ನೋಡಿದ್ದಾಯಿತು, ರಾಬರ್ಟ್ ಘರ್ಜನೆ ನಡೆಯಬೇಕಿದೆ. ಡಿ ಬಾಸ್ ಎಂಟ್ರಿ ಮುಗಿದ ತಕ್ಷಣ ಚಿತ್ರಮಂದಿರಗಳಲ್ಲಿ ಪವರ್ ಸ್ಟಾರ್ ಆಗಮನವಾಗಲಿದೆ.
ಕೊರೊನಾದಿಂದ ಸುಧಾರಿಸಿಕೊಳ್ಳುತ್ತಿರುವ ಚಿತ್ರರಂಗ, ಒಬ್ಬರಿಂದ ಒಬ್ಬರಿಗೆ ತೊಂದರೆಯಾಗದಂತೆ ರಿಲೀಸ್ ದಿನಾಂಕ ನಿರ್ಧರಿಸಿದೆ. ಪ್ರತಿ ಸ್ಟಾರ್ ಸಿನಿಮಾಗಳಿಗೂ ಎರಡು ವಾರಗಳಂತೆ ಅಂತರ ಕಾಪಾಡಿಕೊಳ್ಳಲಾಗಿದೆ.
ಮಾರ್ಚ್ 11ಕ್ಕೆ ರಾಬರ್ಟ್ ಎಂಟ್ರಿ, ನಂತರ ಏಪ್ರಿಲ್ 1ಕ್ಕೆ ಯುವರತ್ನ ಬಿಡುಗಡೆಯಾಗಲಿದೆ. ಈ ನಡುವೆ ಯುವರತ್ನ ಸಿನಿಮಾದ ಪ್ರಿ-ರಿಲೀಸ್ ಕಾರ್ಯಕ್ರಮಕ್ಕೆ ಭರ್ಜರಿ ಸಿದ್ಧತೆ ಸಾಗುತ್ತಿದೆ. ಯುವರತ್ನ ಕಾರ್ಯಕ್ರಮದ ಹಿನ್ನೆಲೆ ನಿರ್ದೇಶಕ ಸಂತೋಷ್ ಆನಂದ್ ರಾಮ್ ಹಾಗೂ ತಂಡ ಇಂದು ಸಭೆ ನಡೆಸಿ ಕೆಲವು ವಿಚಾರಗಳನ್ನು ನಿರ್ಧರಿಸಿದೆ.
ಪ್ರಿ-ರಿಲೀಸ್ ಕಾರ್ಯಕ್ರಮ ಎಲ್ಲಿ ಆಯೋಜಿಸಬೇಕು, ಅದಕ್ಕೆ ಬೇಕಾದ ತಯಾರಿಗಳೇನು ಎನ್ನುವುದರ ಬಗ್ಗೆ ರೂಪುರೇಷೆಗಳು ತಯಾರಾಗುತ್ತಿದೆ. ಹೊಂಬಾಳೆ ಫಿಲಂಸ್ನ ಕಾರ್ಯಕಾರಿ ನಿರ್ಮಾಪಕ ಕಾರ್ತಿಕ್ ಗೌಡ ಸಹ ಈ ಸಭೆಯಲ್ಲಿ ಪಾಲ್ಗೊಂಡಿದ್ದರು. ಕರ್ನಾಟಕ ಹಾಗು ಆಂಧ್ರದಲ್ಲಿ ಯಾವ ರೀತಿ ಪ್ರಚಾರ ಮಾಡಬೇಕು ಎನ್ನುವುದರ ಕುರಿತು ಚರ್ಚಿಸಲಾಗಿದೆ.
ಅಂದ್ಹಾಗೆ, ಫೆಬ್ರವರಿ 26 ರಂದು ಹೈದರಾಬಾದ್ನಲ್ಲಿ ರಾಬರ್ಟ್ ಸಿನಿಮಾ ಪ್ರಿ-ರಿಲೀಸ್ ಕಾರ್ಯಕ್ರಮ ಅದ್ಧೂರಿಯಾಗಿ ನಡೆದಿದೆ. ಫೆಬ್ರವರಿ 28 ರಂದು ಹುಬ್ಬಳ್ಳಿಯಲ್ಲಿಯೂ ರಾಬರ್ಟ್ ಕನ್ನಡ ಸಿನಿಮಾದ ಪ್ರಿ-ರಿಲೀಸ್ ಕಾರ್ಯಕ್ರಮ ನೆರವೇರಿತ್ತು.
ಈಗ ಯುವರತ್ನನ ಶೋಗೆ ಸ್ಯಾಂಡಲ್ವುಡ್ ಸಜ್ಜಾಗುತ್ತಿದೆ. ಪುನೀತ್ ರಾಜ್ ಕುಮಾರ್ ನಟನೆಯ ಈ ಚಿತ್ರವನ್ನು ಹೊಂಬಾಳೆ ಫಿಲಂಸ್ ನಿರ್ಮಿಸುತ್ತಿದೆ. ಸಂತೋಷ್ ಆನಂದ್ ರಾಮ್ ನಿರ್ದೇಶಿಸಿದ್ದು, ಎಸ್ ತಮನ್ ಸಂಗೀತ ನೀಡಿದ್ದಾರೆ. ಧನಂಜಯ್, ವಸಿಷ್ಠ ಸಿಂಹ, ಪ್ರಿಯಾ ಆನಂದ್ ಸೇರಿದಂತೆ ಹಲವರು ನಟಿಸಿದ್ದಾರೆ.
This News Article Is A Copy of FILMIBEAT
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
10-08-26 11:00 pm
HK News Desk
ನಿವೃತ್ತ ಸರ್ಕಾರಿ ನೌಕರರಿಗೆ ಗುಡ್ನ್ಯೂಸ್ ; ‘ಸಂಧ್ಯ...
08-08-26 12:17 pm
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
10-08-26 08:49 pm
HK News Staffer
Leopard Bajpe, Mangalore: ಬಜ್ಪೆಯಲ್ಲಿ ಮನೆ ಅಂಗಳ...
10-08-26 07:22 pm
ಬಾರ್ ಮುಂದೆ ತಲವಾರು ಝಳಪಿಸಿ ದಾಂಧಲೆ ; ಪುಡಿ ರೌಡಿ ಶ...
10-08-26 11:09 am
ಪೊಲೀಸ್ ಕಮಿಷನರ್ ಕಚೇರಿಯಲ್ಲಿದ್ದುಕೊಂಡೇ ನಾಲ್ಕು ಪಟ್...
09-08-26 04:47 pm
ಪಾಕ್ ಗೂಢಚಾರಿಣಿ ಮಹಿಳೆಯ ಹನಿಟ್ರ್ಯಾಪ್ ; ರಹಸ್ಯ ಮಾಹ...
09-08-26 04:07 pm