ಬ್ರೇಕಿಂಗ್ ನ್ಯೂಸ್
07-03-21 03:34 pm Source: FILMIBEAT ಸಿನಿಮಾ
ಸ್ಯಾಂಡಲ್ ವುಡ್ ಪ್ರಿನ್ಸೆಸ್ ಗೆ ಇಂದು ಹುಟ್ಟುಹಬ್ಬದ ಸಂಭ್ರಮ. 37ನೇ ವಸಂತಕ್ಕೆ ಕಾಲಿಡುತ್ತಿರುವ ಸಡಗರದಲ್ಲಿದ್ದಾರೆ ನಟಿ ರಾಧಿಕಾ ಪಂಡಿತ್. ಈ ಸಂಭ್ರಮ-ಸಡಗರದಲ್ಲಿ ತಮ್ಮೆಲ್ಲ ಪ್ರೀತಿಯ ಅಭಿಮಾನಿಗಳಿಗೆ ರಾಧಿಕಾ ಪಂಡಿತ್ ಒಂದು ಪತ್ರ ಬರೆದಿದ್ದಾರೆ.
ರಾಧಿಕಾ ಪಂಡಿತ್ ಬರೆದಿರುವ ಪತ್ರದಲ್ಲಿ ಏನಿದೆ.?
''ನಮಸ್ಕಾರ ಎಲ್ಲರಿಗೂ..
ಪ್ರತಿ ವರ್ಷ ಬೇರೆ ಜಾಗಗಳಿಂದ ಬೇರೆ ಊರಿನಿಂದ ನನ್ನ ಹುಟ್ಟಿದ ಹಬ್ಬ ಆಚರಣೆ ಮಾಡಲು ಭೇಟಿ ಮಾಡಲು ಬರುತ್ತಿದ್ದೀರಿ. ಕಳೆದ ಎರಡು ವರ್ಷಗಳಿಂದ ಇದು ಸಾಧ್ಯವಾಗಲಿಲ್ಲ. ಕೊರೊನಾ ಎಲ್ಲೆಡೆ ಇರುವುದರಿಂದ ನಮ್ಮ ನಿಮ್ಮೆಲ್ಲರ ಆರೋಗ್ಯದ ದೃಷ್ಟಿಯಿಂದ ನಿಮ್ಮನ್ನು ಭೇಟಿ ಮಾಡಲು ಸಾಧ್ಯವಾಗುತ್ತಿಲ್ಲವೆಂದು ತುಂಬಾ ಕಾಡುತ್ತಿದೆ. ಈ ಬಾರಿ ಯಾವುದೇ ಆಚರಣೆ ಮನೆಯ ಬಳಿ ಇರುವುದಿಲ್ಲ. ದಯವಿಟ್ಟು ಯಾರೂ ಬೇಜಾರಾಗಬೇಡಿ. ಆದರೂ ನಿಮ್ಮ ಎಲ್ಲಾ ಸೋಷಿಯಲ್ ಮೀಡಿಯಾ ಮೆಸೇಜ್ ನೋಡುತ್ತಿದ್ದೇನೆ. ಸಾಧ್ಯವಾದಷ್ಟು ರಿಪ್ಲೈ ಕೊಡುತ್ತೇನೆ. ಮತ್ತು ಎಲ್ಲಾ ಪ್ರೀತಿಗೂ ಧನ್ಯವಾದ ಹೇಳಲು ಇಷ್ಟಪಡುತ್ತೇನೆ - ನಿಮ್ಮ ರಾಧಿಕಾ ಪಂಡಿತ್'' ಎಂದು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.
ಪ್ರತಿ ವರ್ಷ ಆಚರಣೆ
ಜನ್ಮದಿನದ ಸಡಗರವನ್ನು ರಾಧಿಕಾ ಪಂಡಿತ್ ಪ್ರತಿ ವರ್ಷ ಅಭಿಮಾನಿಗಳ ಜೊತೆಗೆ ಸೆಲೆಬ್ರೇಟ್ ಮಾಡುತ್ತಿದ್ದರು. ಅಭಿಮಾನಿಗಳು ತರುತ್ತಿದ್ದ ಕೇಕ್ ಕಟ್ ಮಾಡುವ ಮೂಲಕ ಖುಷಿ ಪಡುತ್ತಿದ್ದರು ರಾಧಿಕಾ ಪಂಡಿತ್. ಆದ್ರೀಗ ಕೋವಿಡ್ ಇರುವ ಕಾರಣ ಅಭಿಮಾನಿಗಳ ಜೊತೆಗಿನ ಬರ್ತಡೇ ಸೆಲೆಬ್ರೇಷನ್ ಗೆ ರಾಧಿಕಾ ಪಂಡಿತ್ ಬ್ರೇಕ್ ಹಾಕಿದ್ದಾರೆ.
ಫ್ಯಾಮಿಲಿ ಜೊತೆಗೆ ಬರ್ತಡೇ
ಪತಿ ರಾಕಿಂಗ್ ಸ್ಟಾರ್ ಯಶ್, ಪುತ್ರ ಯಥರ್ವ್, ಪುತ್ರಿ ಆಯ್ರಾ ಹಾಗೂ ತಂದೆ-ತಾಯಿ ಜೊತೆಗೆ ಈ ಬಾರಿ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಾರೆ ರಾಧಿಕಾ ಪಂಡಿತ್.
ಅಂದ್ಹಾಗೆ, ಪುಟಾಣಿ ಮಕ್ಕಳ ಆರೈಕೆಯಲ್ಲೇ ಬ್ಯುಸಿಯಾಗಿರುವ ರಾಧಿಕಾ ಪಂಡಿತ್ ಯಾವ ಚಿತ್ರವನ್ನೂ ಸದ್ಯಕ್ಕೆ ಒಪ್ಪಿಕೊಂಡಿಲ್ಲ. 'ಆದಿಲಕ್ಷ್ಮಿ ಪುರಾಣ' ಚಿತ್ರದ ಬಳಿಕ ಯಾವುದೇ ಚಿತ್ರಕ್ಕೆ ರಾಧಿಕಾ ಪಂಡಿತ್ ಗ್ರೀನ್ ಸಿಗ್ನಲ್ ಕೊಟ್ಟಿಲ್ಲ.
This News Article Is A Copy Of FILMIBEAT
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
09-09-25 11:09 pm
HK News Desk
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
09-09-25 10:47 pm
Mangalore Correspondent
Mangalore Accident, Kulur, NHAI: ಕುಳೂರು ರಸ್ತೆ...
09-09-25 08:01 pm
YouTuber Munaf, SIT, Dharmasthala Case: ಎಸ್ಐಟ...
09-09-25 05:59 pm
Mangalore, NHAI, Padmaraj: ಇನ್ನೆಷ್ಟು ಜೀವ ಬಲಿಯ...
09-09-25 05:14 pm
MLA Vedavyas Kamath, Mangalore, Yakshangana:...
09-09-25 04:47 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm