ಬ್ರೇಕಿಂಗ್ ನ್ಯೂಸ್
11-03-21 03:29 pm Source: FILMIBEAT ಸಿನಿಮಾ
ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ರಾಬರ್ಟ್ ಸಿನಿಮಾ ಇಂದು (ಮಾರ್ಚ್ 11) ಕರ್ನಾಟಕ ಮತ್ತು ಬೇರೆ ಬೇರೆ ರಾಜ್ಯಗಳಲ್ಲಿ ಅದ್ದೂರಿಯಾಗಿ ರಿಲೀಸ್ ಆಗಿದೆ. ಬೆಳ್ಳಂಬೆಳಗ್ಗೆ ಅಭಿಮಾನಿಗಳು ಚಿತ್ರಮಂದಿರದ ಮುಂದೆ ಕ್ಯೂ ನಿಂತು ರಾಬರ್ಟ್ ನೋಡಿ ಸಂಭ್ರಮಿಸುತ್ತಿದ್ದಾರೆ.
ದೊಡ್ಡ ಮಟ್ಟದಲ್ಲಿ ಬಿಡುಗಡೆಯಾಗಿರುವ ರಾಬರ್ಟ್ ಸಿನಿಮಾಗೆ ಎಲ್ಲಾ ಕಡೆಯಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಕನ್ನಡದ ಜೊತೆಗೆ ತೆಲುಗಿನಲ್ಲೂ ದೊಡ್ಡ ಮಟ್ಟದಲ್ಲಿ ತೆರೆಗೆ ಬಂದಿರುವ ರಾಬರ್ಟ್ ಚಿತ್ರಕ್ಕೆ ಅಭಿಮಾನಿಗಳು ಮಾತ್ರವಲ್ಲದೇ ಸಿನಿ ಗಣ್ಯರು ಸಹ ಶುಭಾಶಯ ತಿಳಿಸುತ್ತಿದ್ದಾರೆ. ಟ್ವಿಟ್ಟರ್ ವಿಮರ್ಶೆ: ರಾಬರ್ಟ್ ಚಿಂದಿ, ಉಮಾಪತಿ ಗಿಫ್ಟ್ ಇದು, ತರುಣ್ಗೆ ಕ್ರೆಡಿಟ್ ಈಗಾಗಲೇ ಅನೇಕ ನಿರ್ದೇಶಕರು ಮತ್ತು ಕಲಾವಿದರು ರಾಬರ್ಟ್ ತಂಡಕ್ಕೆ ವಿಶ್ ಮಾಡಿದ್ದಾರೆ.
ಇದೀಗ ಕೆಜಿಎಫ್ ನಿರ್ದೇಶಕ ಪ್ರಶಾಂತ್ ನೀಲ್ ಸಹ ರಾಬರ್ಟ್ ತಂಡಕ್ಕೆ ಶುಭ ಕೋರಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ಪ್ರಶಾಂತ್ ನೀಲ್, 'ರಾಬರ್ಟ್ ತಂಡಕ್ಕೆ ಒಳ್ಳೆಯದಾಗಲಿ. ದರ್ಶನ್ ಸರ್ ಅವರಿಗೆ ಅಭಿನಂದನೆಗಳು. ತರುಣ್ ಸುಧೀರ್ ಮತ್ತು ಉಮಾಪತಿ ಅವರಿಗೂ ಅಭಿನಂದನೆಗಳು. ರಾಬರ್ಟ್ ಗ್ರ್ಯಾಂಡ್ ಆಗಿ ತೆರೆಗೆ ಬಂದಿದೆ. ಇಂದು ಎರಡು ದೊಡ್ಡ ಹಬ್ಬ' ಎಂದು ಟ್ವೀಟ್ ಮಾಡಿದ್ದಾರೆ.
ಪ್ರಶಾಂತ್ ನೀಲ್ ಟ್ವೀಟ್ ಮಾಡುತ್ತಿದ್ದಂತೆ ಅಭಿಮಾನಿಗಳು ಕೆಜಿಎಫ್-2 ಅಪ್ ಡೇಟ್ ಕೇಳಿ ಕಾಮೆಂಟ್ ಮಾಡುತ್ತಿದ್ದಾರೆ. ಮಾರ್ಚ್ 13ಕ್ಕೆ ಕೆಜಿಎಫ್-2 ಸಿನಿಮಾದ ಬಗ್ಗೆ ಮಾಹಿತಿ ನೀಡಿ ಎಂದು ಕೇಳಿಕೊಳ್ಳುತ್ತಿದ್ದಾರೆ. ಇನ್ನು ರಾಬರ್ಟ್ ಸಿನಿಮಾದ ಮೊದಲ ಪ್ರದರ್ಶನ ಈಗಾಗಲೇ ಮುಕ್ತಾಯವಾಗಿದೆ.
ಬೆಳ್ಳಂಬೆಳಗ್ಗೆ ಸಿನಿಮಾ ನೋಡಿದ ಅಭಿಮಾನಿಗಳು ಉತ್ತಮ ಪ್ರತಿಕ್ರಿಯೆ ನೀಡಿದ್ದಾರೆ. ಕರ್ನಾಟಕದಲ್ಲಿ ಅತೀ ಹೆಚ್ಚು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗುವ ಮೂಲಕ ದಾಖಲೆ ನಿರ್ಮಿಸಿದೆ.
This News Article Is A Copy Of FILMIBEAT
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
12-07-26 02:16 pm
HK News Staffer
ಬೆಂಗಳೂರಿನಲ್ಲಿ ಬೆಚ್ಚಿಬೀಳಿಸಿದ ತ್ರಿವಳಿ ಕೊಲೆ ; ತಾ...
11-07-26 08:40 pm
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm
ಮಂಗಳೂರು- ವಿಟ್ಲ ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಯ...
11-07-26 04:28 pm
ಮಾಜಿ ಸಾರಿಗೆ ಅಧಿಕಾರಿ ಮನೆಯಲ್ಲಿ ಕುಬೇರನ ಖಜಾನೆ ! ಗ...
10-07-26 10:14 pm