ಬ್ರೇಕಿಂಗ್ ನ್ಯೂಸ್
12-03-21 11:39 am Source: FILMIBEAT ಸಿನಿಮಾ
ತೆಲುಗಿನ ಪವರ್ ಸ್ಟಾರ್ ಪವನ್ ಕಲ್ಯಾಣ್ ನಟನೆಯ ಪ್ಯಾನ್ ಇಂಡಿಯಾ ಸಿನಿಮಾದ ಶೀರ್ಷಿಕೆ ಮತ್ತು ಮೊದಲ ನೋಟ ಬಿಡುಗಡೆಯಾಗಿದೆ. ಬಹುನಿರೀಕ್ಷೆಯ ಸಿನಿಮಾಗೆ 'ಹರಿ ಹರ ವೀರ ಮಲ್ಲು' ಎಂದು ಹೆಸರಿಡಲಾಗಿದೆ. ಶಿವರಾತ್ರಿ ಹಬ್ಬದ ವಿಶೇಷವಾಗಿ ಸಿನಿಮಾತಂಡ ಚಿತ್ರದ ಶೀರ್ಷಿಕೆ ಬಿಡುಗೆ ಮತ್ತು ಮೊದಲ ನೋಟ ಹಂಚಿಕೊಳ್ಳುವ ಮೂಲಕ ಅಭಿಮಾನಿಗಳ ಸಂಭ್ರಮವನ್ನು ಹೆಚ್ಚಿಸಿದ್ದಾರೆ.
ನಿರ್ದೇಶಕ ಕ್ರಿಶ್ ಮತ್ತು ಪವನ್ ಕಲ್ಯಾಣ್ ಪ್ಯಾನ್ ಇಂಡಿಯಾ ಸಿನಿಮಾ ಕಳೆದ ವರ್ಷದಿಂದ ಸಿಕ್ಕಾಪಟ್ಟೆ ಸದ್ದು ಮಾಡುತ್ತಿತ್ತು. ಆದರೆ ಸಿನಿಮಾದ ಬಗ್ಗೆ ಯಾವುದೇ ಮಾಹಿತಿ ಬಿಟ್ಟುಕೊಡದೆ ಅಭಿಮಾನಿಗಳಲ್ಲಿ ಕುತೂಹಲ ಹೆಚ್ಚಿಸಿದ್ದರು. ಇದೀಗ ಹರಿ ಹರ ವೀರ ಮಲ್ಲು ಆಗಿ ಕಾಣಿಸಿಕೊಳ್ಳುವ ಮೂಲಕ ಅಭಿಮಾನಿಗಳಿಗೆ ಅಚ್ಚರಿ ಮೂಡಿಸಿದ್ದಾರೆ. ಪವನ್ ಕಲ್ಯಾಣ್ ಪ್ಯಾನ್
ಇಂಡಿಯಾ ಸಿನಿಮಾಗೆ ನಾಯಕಿ ಫಿಕ್ಸ್: ಯಾರದು? ಹರಿ ಹರ ಮಲ್ಲು ಸಿನಿಮಾದ ಚಿತ್ರೀಕರಣ ಪ್ರಾರಂಭವಾಗಿ ತಿಂಗಳ ಮೇಲಾಗಿದೆ. ಇತ್ತೀಚಿಗಷ್ಟೆ ಪವನ್ ಕಲ್ಯಾಣ್ ಚಿತ್ರೀಕರಣ ಸೆಟ್ ನಿಂದ ಒಂದಿಷ್ಟು ಫೋಟೋಗಳನ್ನು ಹಂಚಿಕೊಂಡಿದ್ದರು. 17ನೇ ಶತಮಾನದ ವಾಸ್ತುಶಿಲ್ಪ ಹೋಲುವ ಸೆಟ್ ಗಳನ್ನು ನಿರ್ಮಿಸಲಾಗಿದ್ದು, ಚಿತ್ರೀಕರಣ ಮಾಡಲಾಗುತ್ತಿದೆ.
ಈ ಐತಿಹಾಸಿಕ ಸಿನಿಮಾದ ಮೇಲೆ ಅಭಿಮಾನಿಗಳ ನಿರೀಕ್ಷೆ ಮತ್ತು ಕುತೂಹಲ ಹೆಚ್ಚಾಗಿದೆ. ಚಿತ್ರದಲ್ಲಿ ಪವನ್ ಕಲ್ಯಾಣ್ ಗೆ ನಾಯಕಿಯಾಗಿ ನಿಧಿ ಅಗರ್ವಾಲ್ ಕಾಣಿಸಿಕೊಳ್ಳುತ್ತಿದ್ದಾರೆ. ಈ ಬಗ್ಗೆ ಸ್ವತಃ ನಿಧಿ ಅಗರ್ವಾಲ್ ಬಹಿರಂಗ ಪಡಿಸಿದ್ದರು. 'ನಾನು ಪವನ್ ಕಲ್ಯಾಣ್ ಜೊತೆ ಸಿನಿಮಾ ಮಾಡುತ್ತಿದ್ದೇನೆ. ನನ್ನ ಕನಸು ನನಸಾಗಿದೆ. ಇದು ನನ್ನ 9ನೇ ಸಿನಿಮಾ. ಇದನ್ನ ನಾನು ಗೋಲ್ಡನ್ ಸಿನಿಮಾವಾಗಿ ನೋಡುತ್ತೇನೆ' ಎಂದು ಹೇಳುವ ಮೂಲಕ ಪವನ್ ಕಲ್ಯಾಣ್ ಜೊತೆ ನಟಿಸುತ್ತಿರುವ ಮಾಹಿತಿ ಬಿಚ್ಚಿಟ್ಟಿದ್ದರು.
ಸದ್ಯ 40ರಷ್ಟು ಚಿತ್ರೀಕರಣ ಮುಗಿಸಿರುವ ಸಿನಿಮಾತಂಡ ಜುಲೈನಲ್ಲಿ ಚಿತ್ರೀಕರಣ ಮುಗಿಸುವ ನಿರ್ಧಾರ ಮಾಡಿದ್ದಾರೆ. ಇನ್ನು ಚಿತ್ರದ ವಿ ಎಫ್ ಎಕ್ಸ್ ಕೆಲಗಳು ಜಾಸ್ತಿ ಇರುವ ಕಾರಣ ಪೋಸ್ಟ್ ಪ್ರೊಡಕ್ಷನ್ ಕೆಲಸಕ್ಕೆ ಹೆಚ್ಚು ಸಮಯ ತೆಗೆದುಕೊಳ್ಳಲಿದೆ. ಹಾಲಿವುಡ್ ನ ಖ್ಯಾತ ಗ್ರಾಫಿಕ್ಸ್ ಡಿಸೈನರ್ಸ್ ಹರಿ ಹರ ಮಲ್ಲು ಸಿನಿಮಾಗೆ ಗ್ರಾಫಿಕ್ಸ್ ಕೆಲಸ ಮಾಡುತ್ತಿದ್ದಾರೆ.
This News Article Is A Copy Of FILMIBEAT
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
12-07-26 02:16 pm
HK News Staffer
ಬೆಂಗಳೂರಿನಲ್ಲಿ ಬೆಚ್ಚಿಬೀಳಿಸಿದ ತ್ರಿವಳಿ ಕೊಲೆ ; ತಾ...
11-07-26 08:40 pm
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm
ಮಂಗಳೂರು- ವಿಟ್ಲ ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಯ...
11-07-26 04:28 pm
ಮಾಜಿ ಸಾರಿಗೆ ಅಧಿಕಾರಿ ಮನೆಯಲ್ಲಿ ಕುಬೇರನ ಖಜಾನೆ ! ಗ...
10-07-26 10:14 pm