ಬ್ರೇಕಿಂಗ್ ನ್ಯೂಸ್
14-03-21 02:14 pm Source: FILMIBEAT ಸಿನಿಮಾ
ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ರಾಬರ್ಟ್ ಸಿನಿಮಾ ಬಾಕ್ಸ್ ಆಫೀಸ್ನಲ್ಲಿ ದಾಖಲೆಯ ಗಳಿಕೆ ಮಾಡಿದೆ. ಕರ್ನಾಟಕ ಮತ್ತು ತೆಲುಗು ರಾಜ್ಯಗಳಲ್ಲಿ ಅದ್ದೂರಿಯಾಗಿ ತೆರೆಕಂಡಿದ್ದ ಸಿನಿಮಾ ಮೊದಲ ದಿನ ಒಟ್ಟು 20 ಕೋಟಿಗೂ ಅಧಿಕ ಹಣ ಗಳಿಕೆ ಮಾಡಿತ್ತು. ರಾಬರ್ಟ್ ವಿಜಯಯಾತ್ರೆ ಮುಂದುವರೆದಿದ್ದು, ಎರಡನೇ ದಿನ ಸಹ ದಾಖಲೆಯ ಹಣ ಬಾಚಿಕೊಂಡಿದೆ.
ಕೋಟಿ ಕೋಟಿ ಕಲೆಕ್ಷನ್ ಮಾಡುತ್ತಿರುವ ರಾಬರ್ಟ್ 3ನೇ ದಿನದ ಗಳಿಕೆ ಸಹ ಅಚ್ಚರಿ ಮೂಡಿಸಿದೆ. ರಾಬರ್ಟ್ ಪೈರಸಿ: 'ಬಿಗ್ ಬ್ರದರ್ಸ್' ವಿರುದ್ಧ ಉಮಾಪತಿ ಶ್ರೀನಿವಾಸ್ ಗುಡುಗು ರಾಬರ್ಟ್ 3ನೇ ದಿನವೂ ಬಹುತೇಕ ಚಿತ್ರಮಂದಿರಗಳಲ್ಲಿ ಹೌಸ್ ಫುಲ್ ಪ್ರದರ್ಶನ ಕಂಡಿದೆ. ಮೂರನೇ ದಿನ ರಾಬರ್ಟ್ 14.10 ಕೋಟಿ ರೂ. ಗಳಿಕೆ ಮಾಡುವ ಮೂಲಕ ದಾಖಲೆ ಮಾಡಿದೆ.
ಕನ್ನಡ ಸಿನಿಮಾವೊಂದು ಅದರಲ್ಲೂ ಕೊರೊನಾ ಬಳಿಕ ಇಷ್ಟು ದೊಡ್ಡ ಮಟ್ಟದ ಕಲೆಕ್ಷನ್ ನೋಡಿ ಸ್ಯಾಂಡಲ್ ವುಡ್ ಬೆರಗಾಗಿದೆ. ಮೂರು ದಿನಗಳಲ್ಲಿ ರಾಬರ್ಟ್ ಒಟ್ಟು ಗಳಿಸಿದ್ದೆಷ್ಟು, ಜಿಲ್ಲಾವಾರು ಕಲೆಕ್ಷನ್ ಎಷ್ಟು? ಎನ್ನುವ ವಿವರ ಇಲ್ಲಿದೆ.
3ನೇ ದಿನ 14.10 ಕೋಟಿ ರೂ. ಗಳಿಕೆ
ರಾಬರ್ಟ್ ಸಿನಿಮಾ 3ನೇ ದಿನವೂ ಭರ್ಜರಿ ಕಮಾಯಿ ಮಾಡಿದೆ. ಈಗಾಗಲೇ ಕೋಟಿ ಕೋಟಿ ಜೇಬಿಗಿಳಿಸಿರುವ ನಿರ್ಮಾಪಕರಿಗೆ 3ನೇ ದಿನದ ಗಳಿಕೆ ಸಹ ಭರ್ಜರಿಯಾಗಿ ಸಿಕ್ಕಿದೆ. ಕರ್ನಾಟಕದಲ್ಲಿ ರಾಬರ್ಟ್ 14.10 ಕೋಟಿ ರೂ. ಗಳಿಕೆ ಮಾಡಿದೆ.
ಜಿಲ್ಲಾವಾರು ಕಲೆಕ್ಷನ್
ಬೆಂಗಳೂರು, ಕೋಲಾರ ಮತ್ತು ತುಮಕೂರು ಹಾಗೂ ಸೌತ್ ಕೆನರಾ ಭಾಗರದಲ್ಲಿ ಒಟ್ಟು 6 ಕೋಟಿ ರೂ. ಕಲೆಕ್ಷನ್ ಆಗಿದೆ. ಇನ್ನು ಮೈಸೂರು, ಮಂಡ್ಯ, ಹಾಸನ್ ಭಾಗದಲ್ಲಿ 2.5 ಕೋಟಿ ರೂ. ಗಳಿಸಿದೆ. ಚಿತ್ರದುರ್ಗ ಮತ್ತು ದಾವಣಗೆರೆಯಲ್ಲಿ 1.10 ಕೋಟಿ ರೂ., ಶಿವಮೊಗ್ಗದಲ್ಲಿ 1ಲಕ್ಷ, ಹೈದರಾಬಾದ್ ಕರ್ನಾಟಕ 2 ಕೋಟಿ ಮತ್ತು ಬಾಂಬೆ ಕರ್ನಾಟಕ ಭಾಗದಲ್ಲಿ 2 ಕೋಟಿ ರೂ. ಕಲೆಕ್ಷನ್ ಆಗಿದೆ.
ರಾಬರ್ಟ್ ಇದುವರೆಗಿನ ಗಳಿಕೆ ಎಷ್ಟು?
ರಾಬರ್ಟ್ ಸಿನಿಮಾ ರಿಲೀಸ್ ಆಗಿ 3ದಿನಗಳಾಗಿದ್ದು, ಕರ್ನಾಕಟದಲ್ಲಿ ಉತ್ತಮ ಕಲೆಕ್ಷನ್ ಮಾಡಿದೆ. ಇದುವರೆಗೂ ರಾಬರ್ಟ್ 44.12 ಕೋಟಿ ರೂ. ಗಳಿಕೆ ಮಾಡಿದ್ದು, ಕನ್ನಡದಲ್ಲಿ ಅತಿ ವೇಗದಲ್ಲಿ ಇಷ್ಟು ಮೊತ್ತದ ಕಲೆಕ್ಷನ್ ಮಾಡಿರುವ ಮೊದಲ ಸಿನಿಮಾ ಇದಾಗಿದೆ. ವೀಕೆಂಡ್ ಬಂದಿರುವುದರಿಂದ ಇವತ್ತಿನ ಕಲೆಕ್ಷನ್ ಕೂಡ ಕುತೂಹಲ ಮೂಡಿಸಿದ್ದು, ನಾಲ್ಕು ದಿನಗಳಲ್ಲೇ 50 ಕೋಟಿ ಕ್ಲಬ್ ಸೇರುವ ಮೂಲಕ ದಾಖಲೆ ನಿರ್ಮಿಸಲಿದೆ.
ಆಂಧ್ರ-ತೆಲಂಗಾಣದ ಲೆಕ್ಕ
ರಾಬರ್ಟ್ ಸಿನಿಮಾ ಕರ್ನಾಟಕದ ಜೊತೆಗೆ ಆಂಧ್ರ ಮತ್ತು ತೆಲಂಗಾಣದಲ್ಲೂ ಅದ್ದೂರಿಯಾಗಿ ತೆರೆಗೆ ಬಂದಿದೆ. ದರ್ಶನ್ ಸಿನಿಮಾ ತೆಲುಗಿನಲ್ಲಿ ಇಷ್ಟು ದೊಡ್ಡ ಮಟ್ಟದಲ್ಲಿ ಬಿಡುಗಡೆಯಾಗಿರುವುದು ಇದೇ ಮೊದಲು. ಆಂಧ್ರ ಮತ್ತು ತೆಲಂಗಾಣದಲ್ಲಿ ಮೊದಲ ದಿನದ ಕಲೆಕ್ಷನ್ ಉತ್ತಮವಾಗಿತ್ತು. ಆದರೆ ನಂತರದ ದಿನಗಳ ಕಲೆಕ್ಷನ್ ರಿಪೋರ್ಟ್ ಬಹಿರಂಗವಾಗಿಲ್ಲ. ತೆಲುಗಿನಲ್ಲೂ ಭರ್ಜರಿ ಕಲೆಕ್ಷನ್ ಆಗಿರುವ ಸಾಧ್ಯತೆ ಇದೆ.
This News Article Is A Copy Of FILMIBEAT
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
09-09-25 11:09 pm
HK News Desk
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
09-09-25 10:47 pm
Mangalore Correspondent
Mangalore Accident, Kulur, NHAI: ಕುಳೂರು ರಸ್ತೆ...
09-09-25 08:01 pm
YouTuber Munaf, SIT, Dharmasthala Case: ಎಸ್ಐಟ...
09-09-25 05:59 pm
Mangalore, NHAI, Padmaraj: ಇನ್ನೆಷ್ಟು ಜೀವ ಬಲಿಯ...
09-09-25 05:14 pm
MLA Vedavyas Kamath, Mangalore, Yakshangana:...
09-09-25 04:47 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm