ಬ್ರೇಕಿಂಗ್ ನ್ಯೂಸ್
15-03-21 11:26 am source: FILMIBEAT ಸಿನಿಮಾ
ನಟಿ ಗೀತಾ ಬಸ್ರಾ ಮತ್ತು ಭಾರತದ ಮಾಜಿ ಸ್ಪಿನ್ನರ್ ಹರ್ಭಜನ್ ಸಿಂಗ್ ಕುಟುಂಬದಲ್ಲಿ ಸಂತಸ ಮನೆ ಮಾಡಿದೆ. ಈ ಸ್ಟಾರ್ ದಂಪತಿ ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಈ ಸಂಭ್ರಮದ ವಿಚಾರವನ್ನು ಹರ್ಭನ್ ಮತ್ತು ಗೀತಾ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
ಮೊದಲ ಮಗಳು ಹಿನಾಯಾ ಜೊತೆ ಗೀತಾ ಮತ್ತು ಹರ್ಭನ್ ಇಬ್ಬರು ಕ್ಯಾಮರಾಗೆ ಪೋಸ್ ನೀಡಿರುವ ಫೋಟೋವನ್ನು ಶೇರ್ ಮಾಡಿ, ಮತ್ತೊಂದು ಮಗುವಿನ ಸ್ವಾಗತಕ್ಕೆ ಸಜ್ಜಾಗಿರುವುದಾಗಿ ಹೇಳಿದ್ದಾರೆ. ಮಗಳು ಹಿನಾಯಾ ಕೈಯಲ್ಲಿ ಕಪ್ಪು ಬಣ್ಣದ ಟೀ ಶರ್ಟ್ ಹಿಡಿದಿದ್ದು, ಅದರ ಮೇಲೆ ಶೀಘ್ರದಲ್ಲೇ ಸಹೋದರಿ ಆಗಲಿದ್ದೇನೆ ಎಂದು ಬರೆಯಲಾಗಿದೆ. ಎರಡನೇ ಮಗುವಿಗೆ ಜನ್ಮ ನೀಡಿದ ನಟಿ ಕರೀನಾ ಕಪೂರ್ ಹರ್ಭಜನ್ ಸಿಂಗ್ ಕುಟುಂಬದ ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ. ನಟಿ ಗೀತಾ ಬಸ್ರಾ ಒಂದಿಷ್ಟು ಫೋಟೋಗಳನ್ನು ಹಂಚಿಕೊಂಡಿದ್ದು, ಜುಲೈನಲ್ಲಿ ಎರಡನೇ ಮಗು ಆಗಮನವಾಗಲಿದೆ ಎಂದು ಬರೆದುಕೊಂಡಿದ್ದಾರೆ.
ಹರ್ಭಜನ್ ಮತ್ತು ಗೀತಾ 2015 ಅಕ್ಟೋಬರ್ 29ರಂದು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. 5 ವರ್ಷಗಳಿಂದ ಒಬ್ಬರನ್ನೊಬ್ಬರು ಪ್ರೀತಿಸುತ್ತಿದ್ದ ಈ ಜೋಡಿ ಬಳಿಕ ಪತಿ-ಪತ್ನಿಯರಾಗಿದ್ದಾರೆ. ಪಂಜಾಬ್ನ ಜಲಂಧರ್ನಲ್ಲಿ ನಡೆದ ಇಬ್ಬರ ಮದುವೆ ಸಮಾರಂಭದಲ್ಲಿ ಅನೇಕ ಗಣ್ಯರು ಭಾಗಿಯಾಗಿದ್ದರು.
ಹರ್ಭಜನ್ ಸಿಂಗ್ ಸದ್ಯ ಕ್ರಿಕೆಟ್ನಿಂದ ಸಿನಿಮಾರಂಗದ ಕಡೆ ಮುಖ ಮಾಡಿದ್ದಾರೆ. ತಮಿಳು ಸಿನಿಮಾದಲ್ಲಿ ನಟಿಸುವ ಮೂಲಕ ಮೊದಲ ಬಾರಿಗೆ ಬಣ್ಣದ ಲೋಕದಲ್ಲಿ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದಾರೆ. ಸದ್ಯ ಫ್ರೆಂಡ್ ಶಿಪ್ ಸಿನಿಮಾ ರಿಲೀಸ್ ಎದುರು ನೋಡುತ್ತಿದ್ದಾರೆ.
This News Article Is A Copy Of FILMIBEAT
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am