ಬ್ರೇಕಿಂಗ್ ನ್ಯೂಸ್
18-03-21 01:03 pm Source: FILMIBEAT ಸಿನಿಮಾ
ಸಣ್ಣ ಪಾತ್ರ ಮಾಡಿದವರಿಗೂ ದೊಡ್ಡ ಹೆಸರು ತಂದುಕೊಟ್ಟ ಸಿನಿಮಾ 'ಕೆಜಿಎಫ್'. ನಟಿಸಿದವರಿಗೆ ಮಾತ್ರವಲ್ಲ ತಂತ್ರಜ್ಞರಿಗೆ, ತೆರೆ ಹಿಂದೆ ಕೆಲಸ ಮಾಡಿದವರಿಗೂ ದೊಡ್ಡ ಹೆಸರನ್ನು ಗಳಿಸಿಕೊಟ್ಟಿದೆ ಕೆಜಿಎಫ್. ಕೆಜಿಎಫ್ ಸಿನಿಮಾದ ಹಿಂದಿ ಡಬ್ನಲ್ಲಿ 'ಗಲಿ-ಗಲಿ' ಹಾಡಿಗೆ ಸೊಂಟ ಬಳುಕಿಸಿದ್ದ ನಟಿ ಮೌನಿ ರಾಯ್ ಆ ನಂತರ ಕನ್ನಡ ಪ್ರೇಕ್ಷಕರಿಗೂ ಹತ್ತಿರವಾದರು.
ಇದೀಗ ಈ ನಟಿ ಮದುವೆ ಆಗುತ್ತಿದ್ದಾರೆ. 'ನಾಗಿನ್' ಧಾರಾವಾಹಿಯಿಂದಲೂ ಸಖತ್ ಖ್ಯಾತಿ ಗಳಿಸಿರುವ ಈ ನಟಿ ಸೂರಜ್ ನಂಬಿಯಾರ್ ಎಂಬುವರೊಂದಿಗೆ ಕೆಲವ ವರ್ಷಗಳಿಂದ ಪ್ರೀತಿಯಲ್ಲಿದ್ದರು. ಇದೀಗ ಈ ಇಬ್ಬರೂ ವಿವಾಹವಾಗಲಿದ್ದಾರೆ. ಮೌನಿ ರಾಯ್ ಪೋಷಕರು ಹಾಗೂ ಸೂರಜ್ ನಂಬೂದಿರಿ ಪೋಷಕರು ನಟಿ ಮಂದಿರಾ ಬೇಡಿ ಅವರ ನಿವಾಸದಲ್ಲಿ ಪರಸ್ಪರ ಒಟ್ಟಾಗಿ ಚರ್ಚೆ ನಡೆಸಿದ್ದಾರೆ.
ಈ ಭೇಟಿಗೆ ಸಂಬಂಧಿಸಿದ ಚಿತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಈ ವರ್ಷಾರಂಭದಲ್ಲಿ ಮೌನಿ ರಾಯ್ ಅವರು ಸೂರಜ್ ನಂಬಿಯಾರ್ ಅವರ ಕುಟುಂಬದೊಂದಿಗೆ ದುಬೈ ನಲ್ಲಿ ಹೊಸ ವರ್ಷಾಚರಣೆ ಮಾಡಿದ್ದರು. ಆ ವಿಡಿಯೋ ಸಹ ವೈರಲ್ ಆಗಿತ್ತು. ಆಗಲೇ ಮೌನಿ ಹಾಗೂ ಸೂರಜ್ ವಿವಾಹವಾಗುತ್ತಾರೆ ಎನ್ನಲಾಗಿತ್ತು.
ಇದೀಗ ಮಂದಿರಾ ಬೇಡಿ ಮನೆಯಲ್ಲಿ ಪರಸ್ಪರ ಭೇಟಿಯಾಗಿದ್ದ ಈ ಯುವ ಜೋಡಿಯ ಪೋಷಕರು ವಿವಾಹ ಕಾರ್ಯಕ್ರಮದ ಬಗ್ಗೆ ಚರ್ಚಿಸಿದ್ದಾರೆ ಎನ್ನಲಾಗಿದೆ. ಇನ್ನು ನಟಿ ಮೌನಿ ರಾಯ್ ಹಲವಾರು ಟಿವಿ ಧಾರಾವಾಹಿ, ರಿಯಾಲಿಟಿ ಶೋ ಹಾಗೂ ಬಿಗ್ಬಾಸ್ ನಲ್ಲಿಯೂ ಅತಿಥಿಯಾಗಿ ಭಾಗವಹಿಸಿದ್ದಾರೆ.
ನಾಗಿನ್ ಗೂ ಮೊದಲು 'ದೇವೋಂಕಿ ದೇವ್ ಮಹಾದೇವ್' ಧಾರಾವಾಹಿಯಲ್ಲಿ ಸತಿ ಪಾತ್ರದಲ್ಲಿ ನಟಿಸಿದ್ದರು. ಇದೀಗ ಅಮಿತಾಬ್, ರಣಬೀರ್ ಕಪೂರ್, ಆಲಿಯಾ ನಟನೆಯ 'ಬ್ರಹ್ಮಾಸ್ತ್ರ' ಸಿನಿಮಾದಲ್ಲಿ ನಟಿಸುತ್ತಿದ್ದಾರೆ ಮೌನಿ ರಾಯ್.
This News Article Is A Copy Of FILMIBEAT
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
12-07-26 02:16 pm
HK News Staffer
ಬೆಂಗಳೂರಿನಲ್ಲಿ ಬೆಚ್ಚಿಬೀಳಿಸಿದ ತ್ರಿವಳಿ ಕೊಲೆ ; ತಾ...
11-07-26 08:40 pm
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm
ಮಂಗಳೂರು- ವಿಟ್ಲ ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಯ...
11-07-26 04:28 pm
ಮಾಜಿ ಸಾರಿಗೆ ಅಧಿಕಾರಿ ಮನೆಯಲ್ಲಿ ಕುಬೇರನ ಖಜಾನೆ ! ಗ...
10-07-26 10:14 pm