ಬ್ರೇಕಿಂಗ್ ನ್ಯೂಸ್
20-03-21 03:24 pm Source: FILMIBEAT ಸಿನಿಮಾ
ಬಾಲಿವುಡ್ ನ ಖ್ಯಾತ ನಟಿಯರಲ್ಲಿ ಒಬ್ಬರಾಗಿರುವ ಅಲಿಯಾ ಭಟ್ ಸದ್ಯ ಹಿಂದಿ ಜೊತೆಗೆ ತೆಲುಗು ಸಿನಿಮಾದಲ್ಲೂ ಬ್ಯುಸಿಯಾಗಿದ್ದಾರೆ. ಅಲಿಯಾ ರಾಜಮೌಳಿ ನಿರ್ದೇಶನದ ಆರ್ ಆರ್ ಆರ್ ಸಿನಿಮಾದಲ್ಲಿ ಬಣ್ಣ ಹಚ್ಚುವ ಮೂಲಕ ಮೊದಲ ಬಾರಿಗೆ ತೆಲುಗು ಚಿತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈಗಾಗಲೇ ಅಲಿಯಾ ಆರ್ ಆರ್ ಆರ್ ಸಿನಿಮಾದ ಚಿತ್ರೀಕರಣದಲ್ಲಿ ಭಾಗಿಯಾಗಿದ್ದು, ಮೊದಲ ಭಾಗದ ಚಿತ್ರೀಕರಣ ಮುಗಿಸಿದ್ದಾರೆ. ಅಂದಹಾಗೆ ಬಾಲಿವುಡ್ ಸುಂದರಿ ರಾಜಮೌಳಿ ಸಿನಿಮಾದಲ್ಲಿ ಅಲಿಯಾ ಸೀತಾ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.
'RRR' ಸಿನಿಮಾದ 'ಸೀತಾ' ಅಲಿಯಾ ಭಟ್ ಮೊದಲ ನೋಟ ಬಿಡುಗಡೆ ಇತ್ತೀಚಿಗಷ್ಟೆ ಅಲಿಯಾ ಫಸ್ಟ್ ಲುಕ್ ಬಿಡುಗಡೆಯಾಗಿದ್ದು, ಸೀತಾ ಪಾತ್ರಕ್ಕೆ ಅಭಿಮಾನಿಗಳಿಂದ ಭಾರಿ ಮೆಚ್ಚುಗೆ ವ್ಯಕ್ತವಾಗಿದೆ. ಸೀತಾ ಪಾತ್ರಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾದ ಕಾರಣ ಪಾತ್ರದ ಗಾತ್ರವನ್ನು ಹೆಚ್ಚಿಸಲು ಮುಂದಾಗಿದ್ದಾರೆ. ಈ ಮೊದಲು ಸೀತಾ ಪಾತ್ರದ ಅವಧಿ ತುಂಬಾ ಕಡಿಮೆ ಇತ್ತು. ಆದರೀಗ ಸೀತಾ ಪಾತ್ರವನ್ನು ಹೆಚ್ಚಿಸಲು ರಾಜಮೌಳಿ ಸಜ್ಜಾಗಿದ್ದಾರಂತೆ.
ಇದೀಗ ಅಲಿಯಾ ಮತ್ತೆ ಎರಡನೇ ಭಾಗದ ಚಿತ್ರೀಕರಣಕ್ಕೆ ಹೈದರಾಬಾದ್ ಗೆ ಬರುತ್ತಿದ್ದಾರೆ. ಈ ಬಾರಿಯ ಚಿತ್ರೀಕರಣದಲ್ಲಿ ಅಲಿಯಾ ಪಾತ್ರವನ್ನು ಹೆಚ್ಚಾಗಿ ಚಿತ್ರೀಕರಣ ಮಾಡಲಾಗುತ್ತಿದೆಯಂತೆ. ಅಲಿಯಾ ಸದ್ಯದಲ್ಲೇ ಬಹುನಿರೀಕ್ಷೆಯ ಗಂಗೂಬಾಯಿ ಕಥಿಯಾವಾಡಿ ಸಿನಿಮಾದ ಚಿತ್ರೀಕರಣ ಮುಗಿಸಲಿದ್ದಾರೆ. ಚಿತ್ರೀಕರಣ ಮುಗಿಯುತ್ತಿದ್ದಂತೆ ಆರ್ ಆರ್ ಆರ್ ಸಿನಿಮಾದ ಚಿತ್ರೀಕರಣದಲ್ಲಿ ಭಾಗಿಯಾಗಲಿದ್ದಾರೆ. ಚಿತ್ರದಲ್ಲಿ ಅಲಿಯಾ, ರಾಮ್ ಚರಣ್ ಗೆ ನಾಯಕಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ.
ರಾಮ್ ಚರಣ್, ಅಲ್ಲೂರಿ ಸೀತಾರಾಮ ರಾಜು ಪಾತ್ರದಲ್ಲಿ ನಟಿಸುತ್ತಿದ್ದಾರೆ. ಜೂ ಎನ್ ಟಿ ಆರ್, ಕೊಮರಾಮ್ ಭೀಮ್ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈಗಾಗಲೇ ರಾಮ್ ಚರಣ್ ಮತ್ತು ಜೂ.ಎನ್ ಟಿ ಆರ್ ಪಾತ್ರದ ಟೀಸರ್ ಬಿಡುಗಡೆಯಾಗಿದ್ದು, ಅಭಿಮಾನಿಗಳಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕೊನೆಯ ಹಂತದಲ್ಲಿರುವ ಆರ್ ಆರ್ ಆರ್ ಸಿನಿಮಾ ಸದ್ಯದಲ್ಲೇ ಚಿತ್ರೀಕರಣ ಮುಗಿಸಿ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ನಿರತವಾಗಲಿದೆ. ಬಹುನಿರೀಕ್ಷೆಯ ಸಿನಿಮಾ ಅಕ್ಟೋಬರ್ 13ಕ್ಕೆ ತೆರೆಗೆಬರುತ್ತಿದೆ.
This News Article Is A Copy Of FILMIBEAT
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am