ಬ್ರೇಕಿಂಗ್ ನ್ಯೂಸ್
20-03-21 03:24 pm Source: FILMIBEAT ಸಿನಿಮಾ
ಬಾಲಿವುಡ್ ನ ಖ್ಯಾತ ನಟಿಯರಲ್ಲಿ ಒಬ್ಬರಾಗಿರುವ ಅಲಿಯಾ ಭಟ್ ಸದ್ಯ ಹಿಂದಿ ಜೊತೆಗೆ ತೆಲುಗು ಸಿನಿಮಾದಲ್ಲೂ ಬ್ಯುಸಿಯಾಗಿದ್ದಾರೆ. ಅಲಿಯಾ ರಾಜಮೌಳಿ ನಿರ್ದೇಶನದ ಆರ್ ಆರ್ ಆರ್ ಸಿನಿಮಾದಲ್ಲಿ ಬಣ್ಣ ಹಚ್ಚುವ ಮೂಲಕ ಮೊದಲ ಬಾರಿಗೆ ತೆಲುಗು ಚಿತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈಗಾಗಲೇ ಅಲಿಯಾ ಆರ್ ಆರ್ ಆರ್ ಸಿನಿಮಾದ ಚಿತ್ರೀಕರಣದಲ್ಲಿ ಭಾಗಿಯಾಗಿದ್ದು, ಮೊದಲ ಭಾಗದ ಚಿತ್ರೀಕರಣ ಮುಗಿಸಿದ್ದಾರೆ. ಅಂದಹಾಗೆ ಬಾಲಿವುಡ್ ಸುಂದರಿ ರಾಜಮೌಳಿ ಸಿನಿಮಾದಲ್ಲಿ ಅಲಿಯಾ ಸೀತಾ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.
'RRR' ಸಿನಿಮಾದ 'ಸೀತಾ' ಅಲಿಯಾ ಭಟ್ ಮೊದಲ ನೋಟ ಬಿಡುಗಡೆ ಇತ್ತೀಚಿಗಷ್ಟೆ ಅಲಿಯಾ ಫಸ್ಟ್ ಲುಕ್ ಬಿಡುಗಡೆಯಾಗಿದ್ದು, ಸೀತಾ ಪಾತ್ರಕ್ಕೆ ಅಭಿಮಾನಿಗಳಿಂದ ಭಾರಿ ಮೆಚ್ಚುಗೆ ವ್ಯಕ್ತವಾಗಿದೆ. ಸೀತಾ ಪಾತ್ರಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾದ ಕಾರಣ ಪಾತ್ರದ ಗಾತ್ರವನ್ನು ಹೆಚ್ಚಿಸಲು ಮುಂದಾಗಿದ್ದಾರೆ. ಈ ಮೊದಲು ಸೀತಾ ಪಾತ್ರದ ಅವಧಿ ತುಂಬಾ ಕಡಿಮೆ ಇತ್ತು. ಆದರೀಗ ಸೀತಾ ಪಾತ್ರವನ್ನು ಹೆಚ್ಚಿಸಲು ರಾಜಮೌಳಿ ಸಜ್ಜಾಗಿದ್ದಾರಂತೆ.
ಇದೀಗ ಅಲಿಯಾ ಮತ್ತೆ ಎರಡನೇ ಭಾಗದ ಚಿತ್ರೀಕರಣಕ್ಕೆ ಹೈದರಾಬಾದ್ ಗೆ ಬರುತ್ತಿದ್ದಾರೆ. ಈ ಬಾರಿಯ ಚಿತ್ರೀಕರಣದಲ್ಲಿ ಅಲಿಯಾ ಪಾತ್ರವನ್ನು ಹೆಚ್ಚಾಗಿ ಚಿತ್ರೀಕರಣ ಮಾಡಲಾಗುತ್ತಿದೆಯಂತೆ. ಅಲಿಯಾ ಸದ್ಯದಲ್ಲೇ ಬಹುನಿರೀಕ್ಷೆಯ ಗಂಗೂಬಾಯಿ ಕಥಿಯಾವಾಡಿ ಸಿನಿಮಾದ ಚಿತ್ರೀಕರಣ ಮುಗಿಸಲಿದ್ದಾರೆ. ಚಿತ್ರೀಕರಣ ಮುಗಿಯುತ್ತಿದ್ದಂತೆ ಆರ್ ಆರ್ ಆರ್ ಸಿನಿಮಾದ ಚಿತ್ರೀಕರಣದಲ್ಲಿ ಭಾಗಿಯಾಗಲಿದ್ದಾರೆ. ಚಿತ್ರದಲ್ಲಿ ಅಲಿಯಾ, ರಾಮ್ ಚರಣ್ ಗೆ ನಾಯಕಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ.
ರಾಮ್ ಚರಣ್, ಅಲ್ಲೂರಿ ಸೀತಾರಾಮ ರಾಜು ಪಾತ್ರದಲ್ಲಿ ನಟಿಸುತ್ತಿದ್ದಾರೆ. ಜೂ ಎನ್ ಟಿ ಆರ್, ಕೊಮರಾಮ್ ಭೀಮ್ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈಗಾಗಲೇ ರಾಮ್ ಚರಣ್ ಮತ್ತು ಜೂ.ಎನ್ ಟಿ ಆರ್ ಪಾತ್ರದ ಟೀಸರ್ ಬಿಡುಗಡೆಯಾಗಿದ್ದು, ಅಭಿಮಾನಿಗಳಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕೊನೆಯ ಹಂತದಲ್ಲಿರುವ ಆರ್ ಆರ್ ಆರ್ ಸಿನಿಮಾ ಸದ್ಯದಲ್ಲೇ ಚಿತ್ರೀಕರಣ ಮುಗಿಸಿ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ನಿರತವಾಗಲಿದೆ. ಬಹುನಿರೀಕ್ಷೆಯ ಸಿನಿಮಾ ಅಕ್ಟೋಬರ್ 13ಕ್ಕೆ ತೆರೆಗೆಬರುತ್ತಿದೆ.
This News Article Is A Copy Of FILMIBEAT
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
02-09-26 08:31 pm
HK News Staffer
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
ವಿದೇಶದಲ್ಲಿ ವಿವಾಹವಾಗಬೇಡಿ, ಚಿನ್ನ ಖರೀದಿಸಬೇಡಿ ; ಸ...
01-09-26 12:19 pm
ನೇಪಾಳ ದುರಂತ ; ಮೃತರ ಸಂಖ್ಯೆ 903ಕ್ಕೆ ಏರಿಕೆ, ವಿದೇ...
31-08-26 01:28 pm
02-09-26 10:51 pm
HK News Desk
UT Khader, Mangalore: ಸಚಿವರ ಹೆಸರಲ್ಲಿ ಕಮಿಷನ್...
02-09-26 10:30 pm
ಗಂಗೊಳ್ಳಿಯಲ್ಲಿ ಮತ್ತೆ ದೋಣಿ ಅವಘಡ ; 6 ಮೀನುಗಾರರ ರಕ...
02-09-26 08:44 pm
ಕೆಆರ್ ಐಡಿಎಲ್ ಸಂಸ್ಥೆಗೆ ಯಾಕೆ ಗುತ್ತಿಗೆ ಕೊಡುತ್ತೀರ...
02-09-26 08:29 pm
ಆರೋಗ್ಯದ ವಿಚಾರದಲ್ಲಿ ರಾಜಿ ಇಲ್ಲ ; ಆಹಾರ ಸುರಕ್ಷತೆ...
02-09-26 07:09 pm
02-09-26 07:18 pm
HK News Staffer
ಓವರ್ಟೇಕ್ ವಿಚಾರದಲ್ಲಿ ಕಿರಿಕ್; ಕಾಲೇಜು ವಿದ್ಯಾರ್...
02-09-26 07:12 pm
ಕೇರಳಂ ಲಾಟರಿಯಲ್ಲಿ 8 ಲಕ್ಷ ರೂ. ಬಹುಮಾನದ ಆಮಿಷ ; ತೆ...
02-09-26 10:37 am
ಸಿಬಿಐ ಅಧಿಕಾರಿ ಸೋಗಿನಲ್ಲಿ ದೇಶಾದ್ಯಂತ ವಂಚನಾ ಜಾಲ ;...
01-09-26 07:30 pm
ಧಾರವಾಡ ; ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡ...
01-09-26 02:58 pm