ಬ್ರೇಕಿಂಗ್ ನ್ಯೂಸ್
22-03-21 11:57 am Source: FILMIBEAT ಸಿನಿಮಾ
ಕೊರೊನಾ ಲಾಕ್ಡೌನ್ ನಂತರ ನಟ ಸೋನು ಸೂದ್ ಎಂಬ 'ಖಳನಟ'ನ ಮಾನವೀಯ ಮುಖ ದೇಶಕ್ಕೆ ಪರಿಚಯವಾಯ್ತು. ಕೊರೊನಾ ಲಾಕ್ಡೌನ್ ಸಮಯದಲ್ಲಿ ಕಾರ್ಮಿಕರು, ಬಡವರ ಪಾಲಿಗೆ ದೇವರಂತೆ ಒದಗಿಬಂದ ಸೋನು ಸೂದ್, ಲಾಕ್ಡೌನ್ನಿಂದಾಗಿ ಬೇರೆ-ಬೇರೆ ರಾಜ್ಯಗಳಲ್ಲಿ ಸಿಲುಕಿಕೊಂಡಿದ್ದ ಸಾವಿರಾರು ಮಂದಿಯನ್ನು ತಮ್ಮದೇ ಖರ್ಚಿನ ಮೂಲಕ ಅವರವರ ಮನೆಗಳಿಗೆ ತಲುಪಿಸುವ ಕಾರ್ಯ ಮಾಡಿದರು. ಕೊರೊನಾ ಸಮಯದಲ್ಲಿ ಸೋನು ಸೂದ್ ಮಾಡಿದ ಕಾರ್ಯ ದೇಶವ್ಯಾಪಿ ಪ್ರಶಂಸೆಗೆ ಪ್ರಾಪ್ತಿಯಾಯಿತು. ಖಳನಟನ ಪಾತ್ರಗಳಲ್ಲಿ ನಟಿಸುತ್ತಿದ್ದ ಸೋನು ಸೂದ್ ನಿಜಜೀವನದಲ್ಲಿ 'ಹೀರೋ' ಎಂಬುದು ಮನದಟ್ಟಾಯಿತು.
ಇದೀಗ ಜನಪ್ರಿಯ ವಿಮಾನಯಾನ ಸಂಸ್ಥೆ ಸ್ಪೈಸ್ ಜೆಟ್ ಸೋನು ಸೂದ್ಗೆ ಗೌರವ ಸೂಚಿಸಲೆಂದು, ತನ್ನ ವಿಮಾನದ ಮೇಲೆ ದೊಡ್ಡದಾಗಿ ಸೋನು ಸೂದ್ರ ಚಿತ್ರವನ್ನು ಪ್ರಕಟಿಸಿದೆ. ಜೊತೆಗೆ 'ಸಂರಕ್ಷಕ ಸೋನು ಸೂದ್ಗೆ ಸೆಲ್ಯೂಟ್' ಎಂದು ದೊಡ್ಡ ಅಕ್ಷರಗಳಲ್ಲಿ ಬರೆದಿದ್ದಾರೆ. ಚಿತ್ರಗಳನ್ನು ಟ್ವಿಟ್ಟರ್ನಲ್ಲಿ ಹಂಚಿಕೊಂಡಿರುವ ಸೋನು ಸೂದ್,
'ಪಂಜಾಬ್ನ ಮೋಗಾ ದಿಂದ ಮುಂಬೈಗೆ ರಿಸರ್ವ್ ಇಲ್ಲದ ಟಿಕೆಟ್ನಲ್ಲಿ ಪ್ರಯಾಣಿಸುತ್ತಿದ್ದಿದ್ದು ಇನ್ನೂ ನೆನಪಿದೆ. ಈ ಪ್ರೀತಿಗೆ ಕಾರಣರಾದ ಎಲ್ಲರಿಗೂ ಧನ್ಯವಾದ. ನನ್ನ ಪೋಷಕರನ್ನು ನಾನು ಹೆಚ್ಚು ಮಿಸ್ ಮಾಡಿಕೊಳ್ಳುತ್ತಿದ್ದೇನೆ' ಎಂದು ಬರೆದುಕೊಂಡಿದ್ದಾರೆ ಸೋನು.
ಕೊರೊನಾ ಲಾಕ್ಡೌನ್ ಸಮಯದಲ್ಲಿ ಸೋನು ಸೂದ್ ಅವರ ರೈಲ್ವೆ ಪಾಸ್ನ ಚಿತ್ರವೊಂದು ವೈರಲ್ ಆಗಿತ್ತು. ರೈಲಿನಲ್ಲಿ ಓಡಾಡಲು ಕಷ್ಟಪಡುತ್ತಿದ್ದ ಸೋನು ಸೂದ್ ಇಂದು ಸಾವಿರಾರು ಜನರನ್ನು ವಿಮಾನಗಳ ಮೂಲಕ ಮನೆಗಳಿಗೆ ಕಳಿಸುತ್ತಿದ್ದಾರೆ ಎಂಬ ವಾಕ್ಯಗಳೊಂದಿಗೆ ಆ ಚಿತ್ರ ಸಖತ್ ವೈರಲ್ ಆಗಿತ್ತು. ಮುಂಬೈನ ಲೋಕಲ್ ರೈಲಿನಲ್ಲಿ ಪಾಸ್ ಪಡೆದು ಓಡಾಡುತ್ತಿದ್ದ ಸೋನು ಸೂದ್ ಚಿತ್ರ ಇಂದು ವಿಮಾನದ ಮೇಲೆ ಮದ್ರಿತವಾಗಿದೆ.
This News Article Is A Copy Of FILMIBEAT
05-02-26 05:52 pm
HK News Desk
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
05-02-26 11:03 pm
Mangalore Correspondent
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
Nantoor Accident, Protest: ನಂತೂರಿನಲ್ಲಿ ಬಸ್ಸಿನ...
05-02-26 06:20 pm
Accident in Mangalore, Nantoor: ನಂತೂರಿನಲ್ಲಿ ಭ...
04-02-26 10:15 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm