ಬ್ರೇಕಿಂಗ್ ನ್ಯೂಸ್
22-03-21 02:55 pm Source: FILMIBEAT ಸಿನಿಮಾ
ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಭಿನಯದಲ್ಲಿ ತೆರೆಕಂಡಿದ್ದ ಪೊಗರು ಸಿನಿಮಾ ಬಾಕ್ಸ್ ಆಫೀಸ್ನಲ್ಲಿ ಸಖತ್ ಸದ್ದು ಮಾಡಿದೆ. ಕನ್ನಡ, ತೆಲುಗು ಹಾಗೂ ತಮಿಳು ಭಾಷೆಯಲ್ಲಿ ಬಿಡುಗಡೆಯಾಗಿದ್ದ ಭರ್ಜರಿ ಗಳಿಕೆ ಕಂಡಿತ್ತು. ಆರು ದಿನಕ್ಕೆ ಪೊಗರು ಸಿನಿಮಾ 48 ಕೋಟಿ ಬಾಚಿಕೊಂಡಿತ್ತು ಎಂದು ಸ್ವತಃ ನಿರ್ಮಾಪಕ ಗಂಗಾಧರ್ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದರು.
ಸುಮಾರು ಮೂರುವರೆ ವರ್ಷದ ಬಳಿಕ ತೆರೆಗೆ ಬಂದಿದ್ದ ಧ್ರುವ ಸರ್ಜಾ ಸಿನಿಮಾ ಕೊರೊನಾ ಭೀತಿಯಲ್ಲೂ ಅಬ್ಬರಿಸಿತ್ತು. ಚಿತ್ರಮಂದಿರಕ್ಕೆ ಜನ ಬರ್ತಾರೋ ಬರಲ್ಲೋ ಎಂಬ ಆತಂಕವನ್ನು ದೂರ ಮಾಡಿ ಹೌಸ್ಫುಲ್ ಪ್ರದರ್ಶನ ಕಂಡಿತ್ತು. ಹೀಗೆ, ಸೌತ್ ಸಿನಿಮಾ ಇಂಡಸ್ಟ್ರಿಯಲ್ಲಿ ದಾಖಲೆಗಳನ್ನು ಸೃಷ್ಟಿಸಿದ ಪೊಗರು ಸಿನಿಮಾ ಈಗ ಕಿರುತೆರೆಯಲ್ಲಿ ಪ್ರಸಾರವಾಗುತ್ತಿದೆ. ಬಿಡುಗಡೆಯಾದ ಒಂದೇ ತಿಂಗಳಲ್ಲಿ ಪೊಗರು ಟಿವಿಯಲ್ಲಿ ಮೂಡಿಬರುತ್ತಿದೆ. ಮುಂದೆ ಓದಿ...
ಹಿಂದಿಯಲ್ಲಿ ಪೊಗರು ಪ್ರಸಾರ
ಪೊಗರು ಸಿನಿಮಾದ ಹಿಂದಿ ಅವತರಣಿಕೆ ಕಿರುತೆರೆಯಲ್ಲಿ ಪ್ರಸಾರವಾಗಲಿದೆ. ಏಪ್ರಿಲ್ ತಿಂಗಳಲ್ಲಿ ಪೊಗರು ಸಿನಿಮಾ ಟಿವಿಯಲ್ಲಿ ಮೂಡಿಬರಲಿದೆ ಎಂದು ಪ್ರೋಮೋ ಬಿಡುಗಡೆಯಾಗಿದೆ. ಕಲರ್ಸ್ ಸಿನಿಫ್ಲೆಕ್ಸ್ ಚಾನಲ್ನಲ್ಲಿ ಪೊಗರು ಹಿಂದಿ ವರ್ಷನ್ ಪ್ರಸಾರವಾಗಲಿದೆ. ಏಪ್ರಿಲ್ ತಿಂಗಳು ಎಂದು ಪ್ರಕಟಿಸಿದ್ದು, ನಿಖರವಾದ ದಿನಾಂಕ ತಿಳಿಸಿಲ್ಲ.
ದುಬಾರಿ ಬೆಲೆಗೆ ಪೊಗರು ಹಕ್ಕು ಮಾರಾಟ
ದಕ್ಷಿಣದ ಮೂರು ಭಾಷೆಗಳಲ್ಲಿ ಅದ್ಧೂರಿ ಓಪನಿಂಗ್ ಪಡೆದುಕೊಂಡಿದ್ದ ಪೊಗರು ಸಿನಿಮಾ ಗಲ್ಲಾ ಪೆಟ್ಟಿಗೆಯಲ್ಲಿ ಸದ್ದು ಮಾಡಿತು. ಆದರೆ, ವಿಮರ್ಶಾತ್ಮಕವಾಗಿ ಮಿಶ್ರಪ್ರತಿಕ್ರಿಯೆ ವ್ಯಕ್ತವಾಗಿತ್ತು. ಆದರೂ, ಹಿಂದಿಯಲ್ಲಿ ದುಬಾರಿ ಬೆಲೆ ಕೊಟ್ಟು ಡಬ್ಬಿಂಗ್ ಹಕ್ಕು ಖರೀದಿ ಮಾಡಿದ್ದರು. 7.2 ಕೋಟಿಗೆ ಪೊಗರು ಚಿತ್ರದ ಹಿಂದಿ ಡಬ್ಬಿಂಗ್ ಹಕ್ಕು ಮಾರಾಟವಾಗಿತ್ತು ಎಂಬ ಮಾಹಿತಿ ಇದೆ.

ಫೆಬ್ರವರಿ 19ರಂದು ಬಿಡುಗಡೆಯಾಗಿದ್ದ ಪೊಗರು
ಪೊಗರು ಸಿನಿಮಾ ಫೆಬ್ರವರಿ 19ರಂದು ಬಿಡುಗಡೆಯಾತ್ತು. ನಂದಕಿಶೋರ್ ನಿರ್ದೇಶಿಸಿದ್ದ ಈ ಚಿತ್ರದಲ್ಲಿ ಧ್ರುವ ಸರ್ಜಾ, ರಶ್ಮಿಕಾ ಮಂದಣ್ಣ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದರು. ಧನಂಜಯ್, ಸಂಪತ್ ರಾಜ್, ಚಿಕ್ಕಣ್ಣ, ರಾಘವೇಂದ್ರ ರಾಜ್ ಕುಮಾರ್, ಕುರಿ ಪ್ರತಾಪ್, ರವಿಶಂಕರ್, ಪವಿತ್ರ ಲೋಕೇಶ್ ಸೇರಿದಂತೆ ಹಲವು ಕಲಾವಿದರು ಕಾಣಿಸಿಕೊಂಡಿದ್ದರು. ಚಂದನ್ ಶೆಟ್ಟಿ ಸಂಗೀತ ನೀಡಿದ್ದರು.

ದುಬಾರಿ ಚಿತ್ರ ಆರಂಭಿಸಿದ ಧ್ರುವ ಸರ್ಜಾ
ಪೊಗರು ನಂತರ ಮತ್ತೆ ನಂದಕಿಶೋರ್ ಜೊತೆ ಧ್ರುವ ಸರ್ಜಾ ಸಿನಿಮಾ ಆರಂಭಿಸಿದ್ದಾರೆ. ಉದಯ್ ಮೆಹ್ತಾ ಈ ಚಿತ್ರಕ್ಕೆ ಬಂಡವಾಳ ಹಾಕುತ್ತಿದ್ದು, ಈ ಚಿತ್ರಕ್ಕೆ ದುಬಾರಿ ಎಂದು ಹೆಸರಿಡಲಾಗಿದೆ. ಚಿತ್ರದ ಸ್ಕ್ರಿಪ್ಟ್ ಕೆಲಸ ಮುಗಿಸಿ, ಮುಹೂರ್ತ ಸಹ ನಡೆದಿದೆ.
This News Article Is A Copy Of FILMIBEAT
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
12-07-26 02:16 pm
HK News Staffer
ಬೆಂಗಳೂರಿನಲ್ಲಿ ಬೆಚ್ಚಿಬೀಳಿಸಿದ ತ್ರಿವಳಿ ಕೊಲೆ ; ತಾ...
11-07-26 08:40 pm
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm
ಮಂಗಳೂರು- ವಿಟ್ಲ ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಯ...
11-07-26 04:28 pm
ಮಾಜಿ ಸಾರಿಗೆ ಅಧಿಕಾರಿ ಮನೆಯಲ್ಲಿ ಕುಬೇರನ ಖಜಾನೆ ! ಗ...
10-07-26 10:14 pm