ಬ್ರೇಕಿಂಗ್ ನ್ಯೂಸ್
24-03-21 11:17 am Source: FILMIBEAT ಸಿನಿಮಾ
ಇತ್ತೀಚಿಗಷ್ಟೆ ಸ್ಯಾಂಡಲ್ ವುಡ್ ಡಿ ಬಾಸ್ ದರ್ಶನ್ ಗುರು ರಾಯರ ಸನ್ನಿಧಿ ಮಂತ್ರಾಲಯಕ್ಕೆ ಭೇಟಿ ನೀಡಿದ್ದರು. ರಾಬರ್ಟ್ ಸಕ್ಸಸ್ ಬಳಿಕ ರಾಯರ ದರ್ಶನ ಮಾಡಿ ದರ್ಶನ್ ಧನ್ಯರಾಗಿದ್ದರು. ಇದೀಗ ಚಂದನವನದ ನಟಿ ಹರಿಪ್ರಿಯಾ ಮಂತ್ರಾಲಯಕ್ಕೆ ಭೇಟಿ ನೀಡಿದ್ದಾರೆ.
ಹರಿಪ್ರಿಯಾ ಮಂತ್ರಾಲಯದಲ್ಲಿರುವ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ರಾಘವೇಂದ್ರ ಸ್ವಾಮಿ ಹುಟ್ಟುಹಬ್ಬದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ನಟಿ ಹರಿಪ್ರಿಯಾ ಅವರಿಗೆ ಮಠದ ಸ್ವಾಮಿಜಿ ಶ್ರೀ ಸುಬುಧೇಂದ್ರ ತೀರ್ಥರು ಸನ್ಮಾನ ಮಾಡಿ ಗೌರವಿಸಿದ್ದಾರೆ.
ಜರಿ ಸೀರೆ ಧರಿಸಿ ಮಂತ್ರಾಲಯದಲ್ಲಿ ಕಾಣಿಸಿಕೊಂಡಿರುವ ನಟಿ ಹರಿಪ್ರಿಯಾ ಅವರ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಒಂದಿಷ್ಟು ಸುಂದರ ಫೋಟೋಗಳನ್ನು ಹಂಚಿಕೊಂಡಿರುವ ಹರಿಪ್ರಿಯಾ, 'ಮಂತ್ರಾಲಯದ ಶ್ರೀ ಸುಬುಧೇಂದ್ರ ಸ್ವಾಮಿ ಅವರಿಂದ ಸನ್ಮಾನ ಸ್ವೀಕರಿಸಿದ್ದು ಅಪಾರ ಹೆಮ್ಮೆ ಇದೆ. ರಾಘವೇಂದ್ರ ಸ್ವಾಮಿಯ ಜನ್ಮ ದಿನದಂದು ಗೌರವ ಸಿಕ್ಕಿರುವುದು ಇನ್ನಷ್ಟು ವಿಶೇಷ. ಮಂತ್ರಾಲಯ ನನ್ನನ್ನು ವಿಸ್ಮಯಗೊಳಿಸುವುದನ್ನು ಎಂದಿಗೂ ಕಮ್ಮಿಯಾಗಿಲ್ಲ. ವಿಶೇಷವಾಗಿ ಅವರ ಆತಿಥ್ಯ ಮತ್ತು ಅಲ್ಲಿನ ಅದ್ಭುತ ವೈಬ್ಸ್' ಎಂದು ಬರೆದುಕೊಂಡಿದ್ದಾರೆ.

ಹರಿಪ್ರಿಯಾ ಸದ್ಯ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಈಗಾಗಲೇ ನೀನಾಸಂ ಸತೀಶ್ ನಾಯಕನಾಗಿ ನಟಿಸುತ್ತಿರುವ ಪೆಟ್ರೋಮ್ಯಾಕ್ಸ್ ಸಿನಿಮಾದ ಚಿತ್ರೀಕರಣ ಮುಗಿಸಿರುವ ನಟಿ, ಬೆಲ್ ಬಾಟಂ-2ನಲ್ಲಿ ನಟಿಸುತ್ತಿದ್ದಾರೆ. ಇತ್ತೀಚಿಗಷ್ಟೆ ರಿಯಲ್ ಸ್ಟಾರ್ ಉಪೇಂದ್ರ ನಟನೆಯ ಹೊಸ ಸಿನಿಮಾಗೆ ನಾಯಕಿಯಾಗಿ ಆಯ್ಕೆಯಾಗಿದ್ದಾರೆ ಎನ್ನುವ ಸುದ್ದಿ ವೈರಲ್ ಆಗಿತ್ತು. ಇನ್ನು ಮೂರ್ನಾಲ್ಕು ಸಿನಿಮಾಗಳಲ್ಲಿ ಹರಿಪ್ರಿಯಾ ನಟಿಸುತ್ತಿದ್ದಾರೆ.
This News Article Is A Copy Of FILMIBEAT
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
02-09-26 08:31 pm
HK News Staffer
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
ವಿದೇಶದಲ್ಲಿ ವಿವಾಹವಾಗಬೇಡಿ, ಚಿನ್ನ ಖರೀದಿಸಬೇಡಿ ; ಸ...
01-09-26 12:19 pm
ನೇಪಾಳ ದುರಂತ ; ಮೃತರ ಸಂಖ್ಯೆ 903ಕ್ಕೆ ಏರಿಕೆ, ವಿದೇ...
31-08-26 01:28 pm
02-09-26 10:51 pm
HK News Desk
UT Khader, Mangalore: ಸಚಿವರ ಹೆಸರಲ್ಲಿ ಕಮಿಷನ್...
02-09-26 10:30 pm
ಗಂಗೊಳ್ಳಿಯಲ್ಲಿ ಮತ್ತೆ ದೋಣಿ ಅವಘಡ ; 6 ಮೀನುಗಾರರ ರಕ...
02-09-26 08:44 pm
ಕೆಆರ್ ಐಡಿಎಲ್ ಸಂಸ್ಥೆಗೆ ಯಾಕೆ ಗುತ್ತಿಗೆ ಕೊಡುತ್ತೀರ...
02-09-26 08:29 pm
ಆರೋಗ್ಯದ ವಿಚಾರದಲ್ಲಿ ರಾಜಿ ಇಲ್ಲ ; ಆಹಾರ ಸುರಕ್ಷತೆ...
02-09-26 07:09 pm
02-09-26 07:18 pm
HK News Staffer
ಓವರ್ಟೇಕ್ ವಿಚಾರದಲ್ಲಿ ಕಿರಿಕ್; ಕಾಲೇಜು ವಿದ್ಯಾರ್...
02-09-26 07:12 pm
ಕೇರಳಂ ಲಾಟರಿಯಲ್ಲಿ 8 ಲಕ್ಷ ರೂ. ಬಹುಮಾನದ ಆಮಿಷ ; ತೆ...
02-09-26 10:37 am
ಸಿಬಿಐ ಅಧಿಕಾರಿ ಸೋಗಿನಲ್ಲಿ ದೇಶಾದ್ಯಂತ ವಂಚನಾ ಜಾಲ ;...
01-09-26 07:30 pm
ಧಾರವಾಡ ; ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡ...
01-09-26 02:58 pm