ಬ್ರೇಕಿಂಗ್ ನ್ಯೂಸ್
25-03-21 01:37 pm Source: FILMIBEAT ಸಿನಿಮಾ
ಗಂಗೂಬಾಯಿ ಕಾಥಿಯಾವಾಡಿ ಸಿನಿಮಾ ಸಂಬಂಧ ಮಾನಹಾನಿ ಪ್ರಕರಣಕ್ಕೆ ಸಂಬಂಧಿಸಿ ಮುಂಬೈನ ಹೆಚ್ಚುವರಿ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ನಟಿ ಅಲಿಯಾ ಭಟ್ ಮತ್ತು ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿಗೆ ಸಮನ್ಸ್ ನೀಡಿದೆ. ಅಲಿಯಾ ಭಟ್ ಮತ್ತು ಸಂಜಯ್ ಲೀಲಾ ಬನ್ಸಾಲಿ ಅವರನ್ನು ಮೇ 21ರಂದು ನ್ಯಾಯಾಲಯಕ್ಕೆ ಹಾಜರು ಪಡಿಸುವಂತೆ ಕೋರಲಾಗಿದೆ.
ಗಂಗೂಬಾಯಿ ದತ್ತು ಪುತ್ರ ಎಂದು ಹೇಳಿಕೊಳ್ಳುತ್ತಿರುವ ಬಾಬು ರಾವ್ ಷಾ ಚಿತ್ರತಂಡದ ವಿರುದ್ಧ ಮಾನಹಾನಿ ಪ್ರಕರಣ ದಾಖಲಿಸಿದ್ದರು. ಗಂಗೂಬಾಯಿ ಕಾಥಿಯಾವಾಡಿ ಚಿತ್ರವು ಹುಸೈನ್ ಜೈದಿ ಎನ್ನುವವರು ಬರೆದ 'ಮಾಫಿಯಾ ಕ್ವೀನ್ ಆಫ್ ಮುಂಬೈ' ಪುಸ್ತಕವನ್ನು ಆಧರಿಸಿ ಮಾಡಲಾಗುತ್ತಿದೆ.
ಈ ಪುಸ್ತಕದಲ್ಲಿ ಗಂಗೂಬಾಯಿ ಅವರನ್ನು ಕೆಟ್ಟದಾಗಿ ಬಿಂಬಿಸಲಾಗಿದೆ. ಅವರ ಪ್ರತಿಷ್ಠೆಗೆ ಕಳಂಕ ತರಲಾಗಿದೆ ಮತ್ತು ಸ್ವಾಭಿಮಾನದ ಹಕ್ಕನ್ನು ಉಲ್ಲಂಘಿಸಿದೆ ಎಂದು ಬಾಬು ರಾವ್ ಷಾ ಆರೋಪಿಸಿದ್ದಾರೆ. ಈ ಪುಸ್ತಕವನ್ನು ಆಧರಿಸಿ ಸಿನಿಮಾ ಮಾಡುತ್ತಿರುವ ನಿರ್ದೇಶಕ ಮತ್ತು ನಟಿಯರ ವಿರುದ್ಧ ಮಾನಹಾನಿ ಮೊಕದ್ದಮೆ ಹೂಡಿದ್ದಾರೆ.
ಈ ಮೊದಲು ಬಾಬು ರಾವ್ ಷಾ, ಪುಸ್ತಕವನ್ನು ಪ್ರಕಟಿಸದಂತೆ ಲೇಖಕರ ವಿರುದ್ಧ ಮುಂಬೈ ಸಿವಿಲ್ ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಿದ್ದರು. ಬಾಬು ರಾವ್ ತಾವೆ ಗಂಗೂಬಾಯಿ ಅವರ ದತ್ತು ಪುತ್ರ ಎಂದು ದೃಢೀಕರಿಸಲು ಯಾವುದೇ ಆಧಾರಗಳಿಲ್ಲ. ಹೇಗೆ ಆರೋಪ ಮಾಡುತ್ತಾರೆ ಎಂದು ಲೇಖಕರು ಮತ್ತು ಸಿನಿಮಾ ನಿರ್ಮಾಪಕರು ನ್ಯಾಯಾಲಯಕ್ಕೆ ಸೂಚಿಸಿದ್ದಾರೆ. ಗಂಗೂಬಾಯಿ ಕಾಥಿಯಾವಾಡಿ ಸಿನಿಮಾದಲ್ಲಿ ಅಲಿಯಾ ಭಟ್ ಗಂಗೂಬಾಯಿ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಚಿತ್ರದಲ್ಲಿ ಅಜಯ್ ದೇವಗನ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಬಹುನಿರೀಕ್ಷೆಯ ಸಿನಿಮಾ ಜುಲೈ 30ಕ್ಕೆ ತೆರೆಗೆ ಬರುತ್ತಿದೆ.
This News Article Is A Copy Of FILMIBEAT
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
02-09-26 08:31 pm
HK News Staffer
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
ವಿದೇಶದಲ್ಲಿ ವಿವಾಹವಾಗಬೇಡಿ, ಚಿನ್ನ ಖರೀದಿಸಬೇಡಿ ; ಸ...
01-09-26 12:19 pm
ನೇಪಾಳ ದುರಂತ ; ಮೃತರ ಸಂಖ್ಯೆ 903ಕ್ಕೆ ಏರಿಕೆ, ವಿದೇ...
31-08-26 01:28 pm
02-09-26 10:51 pm
HK News Desk
UT Khader, Mangalore: ಸಚಿವರ ಹೆಸರಲ್ಲಿ ಕಮಿಷನ್...
02-09-26 10:30 pm
ಗಂಗೊಳ್ಳಿಯಲ್ಲಿ ಮತ್ತೆ ದೋಣಿ ಅವಘಡ ; 6 ಮೀನುಗಾರರ ರಕ...
02-09-26 08:44 pm
ಕೆಆರ್ ಐಡಿಎಲ್ ಸಂಸ್ಥೆಗೆ ಯಾಕೆ ಗುತ್ತಿಗೆ ಕೊಡುತ್ತೀರ...
02-09-26 08:29 pm
ಆರೋಗ್ಯದ ವಿಚಾರದಲ್ಲಿ ರಾಜಿ ಇಲ್ಲ ; ಆಹಾರ ಸುರಕ್ಷತೆ...
02-09-26 07:09 pm
02-09-26 07:18 pm
HK News Staffer
ಓವರ್ಟೇಕ್ ವಿಚಾರದಲ್ಲಿ ಕಿರಿಕ್; ಕಾಲೇಜು ವಿದ್ಯಾರ್...
02-09-26 07:12 pm
ಕೇರಳಂ ಲಾಟರಿಯಲ್ಲಿ 8 ಲಕ್ಷ ರೂ. ಬಹುಮಾನದ ಆಮಿಷ ; ತೆ...
02-09-26 10:37 am
ಸಿಬಿಐ ಅಧಿಕಾರಿ ಸೋಗಿನಲ್ಲಿ ದೇಶಾದ್ಯಂತ ವಂಚನಾ ಜಾಲ ;...
01-09-26 07:30 pm
ಧಾರವಾಡ ; ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡ...
01-09-26 02:58 pm