ಬ್ರೇಕಿಂಗ್ ನ್ಯೂಸ್
26-03-21 11:05 am Source: FILMIBEAT ಸಿನಿಮಾ
ಇತ್ತೀಚೆಗೆ ಬಿಡುಗಡೆ ಆದ ತೆಲುಗು ಸಿನಿಮಾದಲ್ಲಿ ಸ್ವಾತಂತ್ರ್ಯ ವೀರರಿಗೆ ಅವಮಾನ ಮಾಡಲಾಗಿದೆ. ಕೂಡಲೇ ಸಿನಿಮಾವನ್ನು ಬ್ಯಾನ್ ಮಾಡಬೇಕು ಎಂದು ತೆಲಂಗಾಣ ಶಿವಸೇನಾ ರಾಜ್ಯ ಘಟಕ ಒತ್ತಾಯಿಸಿದೆ.
ನವೀನ್ ಪೋಲಿಶೆಟ್ಟಿ ನಟಿಸಿರುವ 'ಜಾತಿರತ್ನಾಲು' ಸಿನಿಮಾದ ವಿರುದ್ಧ ತೆಲಂಗಾಣ ಶಿವಸೇನಾ ಆಕ್ರೋಶಗೊಂಡಿದ್ದು, ಸಿನಿಮಾವನ್ನು ಬ್ಯಾನ್ ಮಾಡಬೇಕು, ನಿರ್ದೇಶಕ, ನಟ, ನಿರ್ಮಾಪಕ, ಸಂಭಾಷಣೆ ಬರೆದವರ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಪೊಲೀಸರಿಗೆ ದೂರು ಸಹ ಸಲ್ಲಿಸಲಾಗಿದೆ.
'ಜಾತಿರತ್ನಾಲು' ಸಿನಿಮಾದ ದೃಶ್ಯವೊಂದರಲ್ಲಿ ಮೂವರು ಮುಖ್ಯ ನಟರು ಜೈಲು ಸೇರುತ್ತಾರೆ. ಜೈಲಿನಲ್ಲಿ ನಡೆವ ಹಾಸ್ಯ ಸನ್ನಿವೇಶವೊಂದರಲ್ಲಿ ನಾಯಕ ನವೀನ್ ಪೋಲಿಶೆಟ್ಟಿ ಪಾತ್ರವು ಸ್ವಾತಂತ್ರ್ಯ ಸಂಗ್ರಾಮದ ಸಮಯದಲ್ಲಿ ಹಾಡಲಾಗಿದ್ದ ರಾಮ್ಪ್ರಸಾದ್ ಬಿಸ್ಮಿಲ್ ಬರೆದಿರುವ 'ಸರ್ಫರೋಶಿ ಕೀ ತಮನ್ನಾ ಅಬ್ ಹಮಾರೆ ದಿಲ್ ಮೆ ಹೇ' ಹಾಡನ್ನು ತಿರುಚಿ ಹಾಡುತ್ತಾನೆ.
'ಸರ್ಫರೋಶಿ ಕೀ ತಮನ್ಹಾ, ಸಮಂತಾ, ರಶ್ಮಿಕಾ ತೀನೋ ಸಾಥ್ ಮೆ ಹೇ' ಎಂದು ಹಾಡನ್ನು ತಿರುಚಿ ಹಾಡಲಾಗಿದೆ. ಇದು ಶಿವಸೇನಾ ಸದಸ್ಯರನ್ನು ಕೆರಳಿಸಿದೆ. ಸಿನಿಮಾದ ವಿರುದ್ಧ ತೆಲಂಗಾಣ ಶಿವಸೇನಾ ರಾಜ್ಯ ಘಟಕದ ಕಾರ್ಯದರ್ಶಿ ಭೂಮ ಗಂಗಾಧರ್, ಸದಸ್ಯರಾದ ಶ್ರೀನಿವಾಸ ಆಚಾರಿ, ಕಂಜರಾಲ ಶ್ರೀಧರ್ ಆಚಾರಿ, ರಿತೇಶ್, ಸುರೇಶ್ ಮತ್ತು ವೇಣು ಅವರುಗಳು ಕಾಂಚಿಗುಡ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ. 'ಸಿನಿಮಾದ ನಿರ್ದೇಶಕ, ನಿರ್ಮಾಪಕ, ಸಂಗೀತ ನಿರ್ದೇಶಕ ಈಗಿನ ಯುವಸಮುದಾಯಕ್ಕೆ ಕೆಟ್ಟ ಸಂದೇಶ ನೀಡುತ್ತಿದ್ದಾರೆ ಹಾಗಾಗಿ ಅವರ ವಿರುದ್ಧ ಕ್ರಮಕ್ಕೆ ಆಗ್ರಹಿಸುತ್ತಿದ್ದೇವೆ' ಎಂದಿದ್ದಾರೆ ದೂರು ನೀಡಿದ ತೆಲಂಗಾಣ ಶಿವಸೇನಾ ಸದಸ್ಯರು.
ನವೀನ್ ಪೋಲಿಶೆಟ್ಟಿ, ರಾಹುಲ್ ರಾಮಕೃಷ್ಣ, ಪ್ರಿಯದರ್ಶನ್, ಫಾರಿಯಾ ಅಬ್ದುಲ್ಲಾ, ಬ್ರಹ್ಮಾನಂದಂ ಇನ್ನೂ ಹಲವರು ನಟಿಸಿರುವ 'ಜಾತಿರತ್ನಾಲು' ಹಾಸ್ಯ ಸಿನಿಮಾವನ್ನು ಮಾರ್ಚ್ 11 ರಂದು ಬಿಡುಗಡೆ ಆಗಿದ್ದು ಸಖತ್ ಹಿಟ್ ಆಗಿದೆ. ಸಿನಿಮಾವನ್ನು ಅನುದೀಪ್ ಕೆವಿ ನಿರ್ದೇಶನ ಮಾಡಿದ್ದಾರೆ
This News Article Is A Copy Of FILMIBEAT
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
02-09-26 08:31 pm
HK News Staffer
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
ವಿದೇಶದಲ್ಲಿ ವಿವಾಹವಾಗಬೇಡಿ, ಚಿನ್ನ ಖರೀದಿಸಬೇಡಿ ; ಸ...
01-09-26 12:19 pm
ನೇಪಾಳ ದುರಂತ ; ಮೃತರ ಸಂಖ್ಯೆ 903ಕ್ಕೆ ಏರಿಕೆ, ವಿದೇ...
31-08-26 01:28 pm
02-09-26 10:51 pm
HK News Desk
UT Khader, Mangalore: ಸಚಿವರ ಹೆಸರಲ್ಲಿ ಕಮಿಷನ್...
02-09-26 10:30 pm
ಗಂಗೊಳ್ಳಿಯಲ್ಲಿ ಮತ್ತೆ ದೋಣಿ ಅವಘಡ ; 6 ಮೀನುಗಾರರ ರಕ...
02-09-26 08:44 pm
ಕೆಆರ್ ಐಡಿಎಲ್ ಸಂಸ್ಥೆಗೆ ಯಾಕೆ ಗುತ್ತಿಗೆ ಕೊಡುತ್ತೀರ...
02-09-26 08:29 pm
ಆರೋಗ್ಯದ ವಿಚಾರದಲ್ಲಿ ರಾಜಿ ಇಲ್ಲ ; ಆಹಾರ ಸುರಕ್ಷತೆ...
02-09-26 07:09 pm
02-09-26 07:18 pm
HK News Staffer
ಓವರ್ಟೇಕ್ ವಿಚಾರದಲ್ಲಿ ಕಿರಿಕ್; ಕಾಲೇಜು ವಿದ್ಯಾರ್...
02-09-26 07:12 pm
ಕೇರಳಂ ಲಾಟರಿಯಲ್ಲಿ 8 ಲಕ್ಷ ರೂ. ಬಹುಮಾನದ ಆಮಿಷ ; ತೆ...
02-09-26 10:37 am
ಸಿಬಿಐ ಅಧಿಕಾರಿ ಸೋಗಿನಲ್ಲಿ ದೇಶಾದ್ಯಂತ ವಂಚನಾ ಜಾಲ ;...
01-09-26 07:30 pm
ಧಾರವಾಡ ; ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡ...
01-09-26 02:58 pm