ಬ್ರೇಕಿಂಗ್ ನ್ಯೂಸ್
26-03-21 11:05 am Source: FILMIBEAT ಸಿನಿಮಾ
ಇತ್ತೀಚೆಗೆ ಬಿಡುಗಡೆ ಆದ ತೆಲುಗು ಸಿನಿಮಾದಲ್ಲಿ ಸ್ವಾತಂತ್ರ್ಯ ವೀರರಿಗೆ ಅವಮಾನ ಮಾಡಲಾಗಿದೆ. ಕೂಡಲೇ ಸಿನಿಮಾವನ್ನು ಬ್ಯಾನ್ ಮಾಡಬೇಕು ಎಂದು ತೆಲಂಗಾಣ ಶಿವಸೇನಾ ರಾಜ್ಯ ಘಟಕ ಒತ್ತಾಯಿಸಿದೆ.
ನವೀನ್ ಪೋಲಿಶೆಟ್ಟಿ ನಟಿಸಿರುವ 'ಜಾತಿರತ್ನಾಲು' ಸಿನಿಮಾದ ವಿರುದ್ಧ ತೆಲಂಗಾಣ ಶಿವಸೇನಾ ಆಕ್ರೋಶಗೊಂಡಿದ್ದು, ಸಿನಿಮಾವನ್ನು ಬ್ಯಾನ್ ಮಾಡಬೇಕು, ನಿರ್ದೇಶಕ, ನಟ, ನಿರ್ಮಾಪಕ, ಸಂಭಾಷಣೆ ಬರೆದವರ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಪೊಲೀಸರಿಗೆ ದೂರು ಸಹ ಸಲ್ಲಿಸಲಾಗಿದೆ.
'ಜಾತಿರತ್ನಾಲು' ಸಿನಿಮಾದ ದೃಶ್ಯವೊಂದರಲ್ಲಿ ಮೂವರು ಮುಖ್ಯ ನಟರು ಜೈಲು ಸೇರುತ್ತಾರೆ. ಜೈಲಿನಲ್ಲಿ ನಡೆವ ಹಾಸ್ಯ ಸನ್ನಿವೇಶವೊಂದರಲ್ಲಿ ನಾಯಕ ನವೀನ್ ಪೋಲಿಶೆಟ್ಟಿ ಪಾತ್ರವು ಸ್ವಾತಂತ್ರ್ಯ ಸಂಗ್ರಾಮದ ಸಮಯದಲ್ಲಿ ಹಾಡಲಾಗಿದ್ದ ರಾಮ್ಪ್ರಸಾದ್ ಬಿಸ್ಮಿಲ್ ಬರೆದಿರುವ 'ಸರ್ಫರೋಶಿ ಕೀ ತಮನ್ನಾ ಅಬ್ ಹಮಾರೆ ದಿಲ್ ಮೆ ಹೇ' ಹಾಡನ್ನು ತಿರುಚಿ ಹಾಡುತ್ತಾನೆ.
'ಸರ್ಫರೋಶಿ ಕೀ ತಮನ್ಹಾ, ಸಮಂತಾ, ರಶ್ಮಿಕಾ ತೀನೋ ಸಾಥ್ ಮೆ ಹೇ' ಎಂದು ಹಾಡನ್ನು ತಿರುಚಿ ಹಾಡಲಾಗಿದೆ. ಇದು ಶಿವಸೇನಾ ಸದಸ್ಯರನ್ನು ಕೆರಳಿಸಿದೆ. ಸಿನಿಮಾದ ವಿರುದ್ಧ ತೆಲಂಗಾಣ ಶಿವಸೇನಾ ರಾಜ್ಯ ಘಟಕದ ಕಾರ್ಯದರ್ಶಿ ಭೂಮ ಗಂಗಾಧರ್, ಸದಸ್ಯರಾದ ಶ್ರೀನಿವಾಸ ಆಚಾರಿ, ಕಂಜರಾಲ ಶ್ರೀಧರ್ ಆಚಾರಿ, ರಿತೇಶ್, ಸುರೇಶ್ ಮತ್ತು ವೇಣು ಅವರುಗಳು ಕಾಂಚಿಗುಡ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ. 'ಸಿನಿಮಾದ ನಿರ್ದೇಶಕ, ನಿರ್ಮಾಪಕ, ಸಂಗೀತ ನಿರ್ದೇಶಕ ಈಗಿನ ಯುವಸಮುದಾಯಕ್ಕೆ ಕೆಟ್ಟ ಸಂದೇಶ ನೀಡುತ್ತಿದ್ದಾರೆ ಹಾಗಾಗಿ ಅವರ ವಿರುದ್ಧ ಕ್ರಮಕ್ಕೆ ಆಗ್ರಹಿಸುತ್ತಿದ್ದೇವೆ' ಎಂದಿದ್ದಾರೆ ದೂರು ನೀಡಿದ ತೆಲಂಗಾಣ ಶಿವಸೇನಾ ಸದಸ್ಯರು.
ನವೀನ್ ಪೋಲಿಶೆಟ್ಟಿ, ರಾಹುಲ್ ರಾಮಕೃಷ್ಣ, ಪ್ರಿಯದರ್ಶನ್, ಫಾರಿಯಾ ಅಬ್ದುಲ್ಲಾ, ಬ್ರಹ್ಮಾನಂದಂ ಇನ್ನೂ ಹಲವರು ನಟಿಸಿರುವ 'ಜಾತಿರತ್ನಾಲು' ಹಾಸ್ಯ ಸಿನಿಮಾವನ್ನು ಮಾರ್ಚ್ 11 ರಂದು ಬಿಡುಗಡೆ ಆಗಿದ್ದು ಸಖತ್ ಹಿಟ್ ಆಗಿದೆ. ಸಿನಿಮಾವನ್ನು ಅನುದೀಪ್ ಕೆವಿ ನಿರ್ದೇಶನ ಮಾಡಿದ್ದಾರೆ
This News Article Is A Copy Of FILMIBEAT
13-12-25 10:47 pm
HK News Desk
ಕುರ್ಚಿ ಗುದ್ದಾಟ ; ಪರಮೇಶ್ವರ್ ಸಿಎಂ ಆಗಲೆಂದು ಹಾರೈಸ...
13-12-25 08:38 pm
BJP MLA Subhash Guttedar: ಅಳಂದ ಮತಗಳವು ಪ್ರಕರಣ...
13-12-25 04:00 pm
Pet Parrot, Bangalore Youth Death: 2 ಲಕ್ಷ ರೂ....
12-12-25 08:47 pm
Yatnal, Dk Shivakumar, Vijayendra: ಡಿಕೆ ಸಿಎಂ,...
12-12-25 07:47 pm
13-12-25 08:34 pm
HK News Desk
ಕಾರ್ತಿಗೈ ದೀಪೋತ್ಸವ ವಿವಾದ ; ಮಸೀದಿಯವರೇ ಆಕ್ಷೇಪಿಸಿ...
12-12-25 11:00 pm
ಮೋದಿ ಉತ್ತರಾಧಿಕಾರಿ ಯಾರು ? ಆರೆಸ್ಸೆಸ್ ನಿರ್ಧರಿಸುತ...
11-12-25 04:24 pm
ಮಂಗಳೂರು ಏರ್ಪೋರ್ಟ್ಗೆ ವಿದೇಶಿ ನೇರ ವಿಮಾನ ವ್ಯವಸ್...
11-12-25 02:09 pm
ತಮಿಳುನಾಡಿನಲ್ಲಿ ಕಾರ್ತಿಗೈ ದೀಪಕ್ಕೆ ಹೈಕೋರ್ಟ್ ಅನುಮ...
10-12-25 11:13 pm
13-12-25 11:02 pm
Mangalore Correspondent
ಕೆಂಜಾರು ಬಳಿ ಗೋವುಗಳನ್ನು ಕಡಿದು ಹತ್ಯೆ ; ಪೊದೆಯಲ್ಲ...
13-12-25 04:36 pm
ಸತತ ನಾಲ್ಕು ಗಂಟೆ ಸ್ಕೇಟಿಂಗ್ ನಲ್ಲಿ ಶಾಸ್ತ್ರೀಯ ನೃತ...
12-12-25 10:28 pm
ದೈವ ನರ್ತನದ ಬಗ್ಗೆ ನಮಗೆ ಸಂಶಯಗಳಿಲ್ಲ, ಗ್ರಾಮ ದೈವಕ್...
12-12-25 07:32 pm
ಆಯುಷ್ ಇಲಾಖೆಯಲ್ಲಿ ಅವಧಿ ಮೀರಿದ ಔಷಧ ಪೂರೈಕೆ ; ಅಧಿಕ...
12-12-25 02:02 pm
13-12-25 12:51 pm
HK News Desk
ಹಣ್ಣಿನ ವ್ಯಾಪಾರಿಯನ್ನು ಅಡ್ಡಗಟ್ಟಿ 19 ಸಾವಿರ ನಗದು...
12-12-25 01:58 pm
Hassan Crime, Murder: ಸ್ನೇಹಿತನನ್ನು ಪಾರ್ಟಿಗೆ ಕ...
11-12-25 09:53 pm
Bangalore Crime, Blackmail, Suicide: ಬೆತ್ತಲೆ...
11-12-25 07:49 pm
Imprisonment in Malpe Case: ಮಲ್ಪೆಯಲ್ಲಿ ನೆಲೆಸಿ...
10-12-25 10:14 pm