ಬ್ರೇಕಿಂಗ್ ನ್ಯೂಸ್
26-03-21 11:05 am Source: FILMIBEAT ಸಿನಿಮಾ
ಇತ್ತೀಚೆಗೆ ಬಿಡುಗಡೆ ಆದ ತೆಲುಗು ಸಿನಿಮಾದಲ್ಲಿ ಸ್ವಾತಂತ್ರ್ಯ ವೀರರಿಗೆ ಅವಮಾನ ಮಾಡಲಾಗಿದೆ. ಕೂಡಲೇ ಸಿನಿಮಾವನ್ನು ಬ್ಯಾನ್ ಮಾಡಬೇಕು ಎಂದು ತೆಲಂಗಾಣ ಶಿವಸೇನಾ ರಾಜ್ಯ ಘಟಕ ಒತ್ತಾಯಿಸಿದೆ.
ನವೀನ್ ಪೋಲಿಶೆಟ್ಟಿ ನಟಿಸಿರುವ 'ಜಾತಿರತ್ನಾಲು' ಸಿನಿಮಾದ ವಿರುದ್ಧ ತೆಲಂಗಾಣ ಶಿವಸೇನಾ ಆಕ್ರೋಶಗೊಂಡಿದ್ದು, ಸಿನಿಮಾವನ್ನು ಬ್ಯಾನ್ ಮಾಡಬೇಕು, ನಿರ್ದೇಶಕ, ನಟ, ನಿರ್ಮಾಪಕ, ಸಂಭಾಷಣೆ ಬರೆದವರ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಪೊಲೀಸರಿಗೆ ದೂರು ಸಹ ಸಲ್ಲಿಸಲಾಗಿದೆ.
'ಜಾತಿರತ್ನಾಲು' ಸಿನಿಮಾದ ದೃಶ್ಯವೊಂದರಲ್ಲಿ ಮೂವರು ಮುಖ್ಯ ನಟರು ಜೈಲು ಸೇರುತ್ತಾರೆ. ಜೈಲಿನಲ್ಲಿ ನಡೆವ ಹಾಸ್ಯ ಸನ್ನಿವೇಶವೊಂದರಲ್ಲಿ ನಾಯಕ ನವೀನ್ ಪೋಲಿಶೆಟ್ಟಿ ಪಾತ್ರವು ಸ್ವಾತಂತ್ರ್ಯ ಸಂಗ್ರಾಮದ ಸಮಯದಲ್ಲಿ ಹಾಡಲಾಗಿದ್ದ ರಾಮ್ಪ್ರಸಾದ್ ಬಿಸ್ಮಿಲ್ ಬರೆದಿರುವ 'ಸರ್ಫರೋಶಿ ಕೀ ತಮನ್ನಾ ಅಬ್ ಹಮಾರೆ ದಿಲ್ ಮೆ ಹೇ' ಹಾಡನ್ನು ತಿರುಚಿ ಹಾಡುತ್ತಾನೆ.
'ಸರ್ಫರೋಶಿ ಕೀ ತಮನ್ಹಾ, ಸಮಂತಾ, ರಶ್ಮಿಕಾ ತೀನೋ ಸಾಥ್ ಮೆ ಹೇ' ಎಂದು ಹಾಡನ್ನು ತಿರುಚಿ ಹಾಡಲಾಗಿದೆ. ಇದು ಶಿವಸೇನಾ ಸದಸ್ಯರನ್ನು ಕೆರಳಿಸಿದೆ. ಸಿನಿಮಾದ ವಿರುದ್ಧ ತೆಲಂಗಾಣ ಶಿವಸೇನಾ ರಾಜ್ಯ ಘಟಕದ ಕಾರ್ಯದರ್ಶಿ ಭೂಮ ಗಂಗಾಧರ್, ಸದಸ್ಯರಾದ ಶ್ರೀನಿವಾಸ ಆಚಾರಿ, ಕಂಜರಾಲ ಶ್ರೀಧರ್ ಆಚಾರಿ, ರಿತೇಶ್, ಸುರೇಶ್ ಮತ್ತು ವೇಣು ಅವರುಗಳು ಕಾಂಚಿಗುಡ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ. 'ಸಿನಿಮಾದ ನಿರ್ದೇಶಕ, ನಿರ್ಮಾಪಕ, ಸಂಗೀತ ನಿರ್ದೇಶಕ ಈಗಿನ ಯುವಸಮುದಾಯಕ್ಕೆ ಕೆಟ್ಟ ಸಂದೇಶ ನೀಡುತ್ತಿದ್ದಾರೆ ಹಾಗಾಗಿ ಅವರ ವಿರುದ್ಧ ಕ್ರಮಕ್ಕೆ ಆಗ್ರಹಿಸುತ್ತಿದ್ದೇವೆ' ಎಂದಿದ್ದಾರೆ ದೂರು ನೀಡಿದ ತೆಲಂಗಾಣ ಶಿವಸೇನಾ ಸದಸ್ಯರು.
ನವೀನ್ ಪೋಲಿಶೆಟ್ಟಿ, ರಾಹುಲ್ ರಾಮಕೃಷ್ಣ, ಪ್ರಿಯದರ್ಶನ್, ಫಾರಿಯಾ ಅಬ್ದುಲ್ಲಾ, ಬ್ರಹ್ಮಾನಂದಂ ಇನ್ನೂ ಹಲವರು ನಟಿಸಿರುವ 'ಜಾತಿರತ್ನಾಲು' ಹಾಸ್ಯ ಸಿನಿಮಾವನ್ನು ಮಾರ್ಚ್ 11 ರಂದು ಬಿಡುಗಡೆ ಆಗಿದ್ದು ಸಖತ್ ಹಿಟ್ ಆಗಿದೆ. ಸಿನಿಮಾವನ್ನು ಅನುದೀಪ್ ಕೆವಿ ನಿರ್ದೇಶನ ಮಾಡಿದ್ದಾರೆ
This News Article Is A Copy Of FILMIBEAT
29-10-25 09:12 pm
Bangalore Correspondent
ಬ್ರಿಟಿಷರ ಕಾಲದ ಸ್ಲೋಚ್ ಮಾದರಿ ಕ್ಯಾಪ್ ಬದಲು ; ಅರಸು...
28-10-25 10:03 pm
ಶಾಸಕಾಂಗ ನಾಯಕರ ಆಯ್ಕೆ ವೇಳೆ 2.5 ವರ್ಷ ಎಂದು ತಿಳಿಸಿ...
28-10-25 07:18 pm
ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
28-10-25 10:23 pm
HK News Desk
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
30-10-25 11:28 am
Udupi Correspondent
ಮಂಗಳೂರಿನಲ್ಲಿ ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡ...
29-10-25 10:47 pm
ಕೊಳಲನ್ನೂದುತ್ತ ಈಜಿನಲ್ಲಿ ವಿಶ್ವದಾಖಲೆ ; ಅಲೋಶಿಯಸ್...
29-10-25 06:55 pm
ಸುಳ್ಳು ಕೇಸು ಹಾಕುತ್ತಿದ್ದಾರೆಂದು ಮನವಿ ಕೊಡಲು ಬಂದವ...
29-10-25 03:57 pm
ಭ್ರಷ್ಟಾಚಾರ ಆರೋಪಕ್ಕೆ ಉತ್ತರಿಸಲು ಸ್ಪೀಕರ್ ಖಾದರ್ ನ...
29-10-25 03:16 pm
29-10-25 10:43 pm
Mangalore Correspondent
ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm
ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm
ಕೇರಳ ಮೂಲದ ಗಲ್ಫ್ ಉದ್ಯಮಿಗೆ ಹನಿಟ್ರ್ಯಾಪ್ ; ಬಂಧನಕ್...
28-10-25 10:48 pm