ಬ್ರೇಕಿಂಗ್ ನ್ಯೂಸ್
26-03-21 11:05 am Source: FILMIBEAT ಸಿನಿಮಾ
ಇತ್ತೀಚೆಗೆ ಬಿಡುಗಡೆ ಆದ ತೆಲುಗು ಸಿನಿಮಾದಲ್ಲಿ ಸ್ವಾತಂತ್ರ್ಯ ವೀರರಿಗೆ ಅವಮಾನ ಮಾಡಲಾಗಿದೆ. ಕೂಡಲೇ ಸಿನಿಮಾವನ್ನು ಬ್ಯಾನ್ ಮಾಡಬೇಕು ಎಂದು ತೆಲಂಗಾಣ ಶಿವಸೇನಾ ರಾಜ್ಯ ಘಟಕ ಒತ್ತಾಯಿಸಿದೆ.
ನವೀನ್ ಪೋಲಿಶೆಟ್ಟಿ ನಟಿಸಿರುವ 'ಜಾತಿರತ್ನಾಲು' ಸಿನಿಮಾದ ವಿರುದ್ಧ ತೆಲಂಗಾಣ ಶಿವಸೇನಾ ಆಕ್ರೋಶಗೊಂಡಿದ್ದು, ಸಿನಿಮಾವನ್ನು ಬ್ಯಾನ್ ಮಾಡಬೇಕು, ನಿರ್ದೇಶಕ, ನಟ, ನಿರ್ಮಾಪಕ, ಸಂಭಾಷಣೆ ಬರೆದವರ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಪೊಲೀಸರಿಗೆ ದೂರು ಸಹ ಸಲ್ಲಿಸಲಾಗಿದೆ.
'ಜಾತಿರತ್ನಾಲು' ಸಿನಿಮಾದ ದೃಶ್ಯವೊಂದರಲ್ಲಿ ಮೂವರು ಮುಖ್ಯ ನಟರು ಜೈಲು ಸೇರುತ್ತಾರೆ. ಜೈಲಿನಲ್ಲಿ ನಡೆವ ಹಾಸ್ಯ ಸನ್ನಿವೇಶವೊಂದರಲ್ಲಿ ನಾಯಕ ನವೀನ್ ಪೋಲಿಶೆಟ್ಟಿ ಪಾತ್ರವು ಸ್ವಾತಂತ್ರ್ಯ ಸಂಗ್ರಾಮದ ಸಮಯದಲ್ಲಿ ಹಾಡಲಾಗಿದ್ದ ರಾಮ್ಪ್ರಸಾದ್ ಬಿಸ್ಮಿಲ್ ಬರೆದಿರುವ 'ಸರ್ಫರೋಶಿ ಕೀ ತಮನ್ನಾ ಅಬ್ ಹಮಾರೆ ದಿಲ್ ಮೆ ಹೇ' ಹಾಡನ್ನು ತಿರುಚಿ ಹಾಡುತ್ತಾನೆ.
'ಸರ್ಫರೋಶಿ ಕೀ ತಮನ್ಹಾ, ಸಮಂತಾ, ರಶ್ಮಿಕಾ ತೀನೋ ಸಾಥ್ ಮೆ ಹೇ' ಎಂದು ಹಾಡನ್ನು ತಿರುಚಿ ಹಾಡಲಾಗಿದೆ. ಇದು ಶಿವಸೇನಾ ಸದಸ್ಯರನ್ನು ಕೆರಳಿಸಿದೆ. ಸಿನಿಮಾದ ವಿರುದ್ಧ ತೆಲಂಗಾಣ ಶಿವಸೇನಾ ರಾಜ್ಯ ಘಟಕದ ಕಾರ್ಯದರ್ಶಿ ಭೂಮ ಗಂಗಾಧರ್, ಸದಸ್ಯರಾದ ಶ್ರೀನಿವಾಸ ಆಚಾರಿ, ಕಂಜರಾಲ ಶ್ರೀಧರ್ ಆಚಾರಿ, ರಿತೇಶ್, ಸುರೇಶ್ ಮತ್ತು ವೇಣು ಅವರುಗಳು ಕಾಂಚಿಗುಡ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ. 'ಸಿನಿಮಾದ ನಿರ್ದೇಶಕ, ನಿರ್ಮಾಪಕ, ಸಂಗೀತ ನಿರ್ದೇಶಕ ಈಗಿನ ಯುವಸಮುದಾಯಕ್ಕೆ ಕೆಟ್ಟ ಸಂದೇಶ ನೀಡುತ್ತಿದ್ದಾರೆ ಹಾಗಾಗಿ ಅವರ ವಿರುದ್ಧ ಕ್ರಮಕ್ಕೆ ಆಗ್ರಹಿಸುತ್ತಿದ್ದೇವೆ' ಎಂದಿದ್ದಾರೆ ದೂರು ನೀಡಿದ ತೆಲಂಗಾಣ ಶಿವಸೇನಾ ಸದಸ್ಯರು.
ನವೀನ್ ಪೋಲಿಶೆಟ್ಟಿ, ರಾಹುಲ್ ರಾಮಕೃಷ್ಣ, ಪ್ರಿಯದರ್ಶನ್, ಫಾರಿಯಾ ಅಬ್ದುಲ್ಲಾ, ಬ್ರಹ್ಮಾನಂದಂ ಇನ್ನೂ ಹಲವರು ನಟಿಸಿರುವ 'ಜಾತಿರತ್ನಾಲು' ಹಾಸ್ಯ ಸಿನಿಮಾವನ್ನು ಮಾರ್ಚ್ 11 ರಂದು ಬಿಡುಗಡೆ ಆಗಿದ್ದು ಸಖತ್ ಹಿಟ್ ಆಗಿದೆ. ಸಿನಿಮಾವನ್ನು ಅನುದೀಪ್ ಕೆವಿ ನಿರ್ದೇಶನ ಮಾಡಿದ್ದಾರೆ
This News Article Is A Copy Of FILMIBEAT
05-02-26 05:52 pm
HK News Desk
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
05-02-26 11:03 pm
Mangalore Correspondent
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
Nantoor Accident, Protest: ನಂತೂರಿನಲ್ಲಿ ಬಸ್ಸಿನ...
05-02-26 06:20 pm
Accident in Mangalore, Nantoor: ನಂತೂರಿನಲ್ಲಿ ಭ...
04-02-26 10:15 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm