ಬ್ರೇಕಿಂಗ್ ನ್ಯೂಸ್
30-03-21 03:43 pm Source: FILMIBEAT ಸಿನಿಮಾ
ಟಾಲಿವುಡ್ ಪವರ್ ಸ್ಟಾರ್ ಪವನ್ ಕಲ್ಯಾಣ್ ನಟನೆಯ ವಕೀಲ್ ಸಾಬ್ ಚಿತ್ರದ ಟ್ರೈಲರ್ ನೋಡಲು ಸೇರಿದ್ದ ಅಸಂಖ್ಯಾತ ಅಭಿಮಾನಿಗಳ ನಡುವೆ ನೂಕುನುಗ್ಗಲು ಉಂಟಾಗಿ ಭಾರಿ ಗದ್ದಲ ಸಂಭವಿಸಿದೆ. ವಿಶಾಖಪಟ್ಟಣಂನ ಸಂಗಮ್ ಶರತ್ ಚಿತ್ರಮಂದಿರದಲ್ಲಿ ಈ ಘಟನೆ ನಡೆದಿದೆ. ಟ್ರೈಲರ್ ರಿಲೀಸ್ ಆಗುತ್ತಿದ್ದಂತೆ ಪವನ್ ಕಲ್ಯಾಣ್ ನೋಡಲು ಅಭಿಮಾನಿಗಳು ಒಮ್ಮೆಗೆ ಚಿತ್ರಮಂದಿರದ ಒಳಗೆ ನುಗ್ಗಿದ್ದಾರೆ.
ಈ ಸಮಯದಲ್ಲೇ ತಳ್ಳಾಟ, ನೂಕಾಟ ನಡೆದು ಚಿತ್ರಮಂದಿರದ ಗಾಜಿನ ಗೋಡೆ ಪುಡಿಪುಡಿ ಆಗಿದೆ. ಮಾರ್ಚ್ 29 ಸಂಜೆ 4 ಗಂಟೆಗೆ ಟ್ರೈಲರ್ ಲಾಂಚ್ ಆಗಿದ್ದು, ಈ ವೇಳೆ ನೂಕುನುಗ್ಗಲು ನಡೆದಿದೆ. ಟ್ರೈಲರ್ಗಾಗಿ ಅಭಿಮಾನಿಗಳು ಬೆಳಗ್ಗೆಯಿಂದ ಚಿತ್ರಮಂದಿರದ ಮುಂದೆ ಕ್ಯುನಿಂತಿದ್ದರು. ಪವನ್ ಕಲ್ಯಾಣ್ ಫೋಟೋಗೆ ಪೂಜೆ ಮಾಡಿ ಸಂಭ್ರಮಿಸಿದ್ದಾರೆ.
ಬಳಿಕ 4ಗಂಟೆೆಗೆ ಟ್ರೈಲರ್ ವೀಕ್ಷಣೆಗೆ ಚಿತ್ರಮಂದಿರದ ಒಳಗೆ ನುಗ್ಗಲು ಒಮ್ಮೆಗೆ ಮುಗಿಬಿದ್ದಿದ್ದಾರೆ. ಗಾಜು ಒಡೆದು ಪುಡಿಪುಡಿ ಆದರೂ ಲೆಕ್ಕಿಸದೆ ಅಭಿಮಾನಿಗಳು ಪವನ್ ಕಲ್ಯಾಣ್ ನೋಡಲು ಮುನ್ನುಗ್ಗಿದ್ದಾರೆ. ಹೋಳಿ ಹಬ್ಬದ ಪ್ರಯುಕ್ತ ಚಿತ್ರತಂಡ ವಕೀಲ್ ಸಾಬ್ ಟ್ರೈಲರ್ ರಿಲೀಸ್ ಮಾಡಲು ಸಿನಿಮಾ ಪ್ಲಾನ್ ಮಾಡಿ, ಬಿಡುಗಡೆ ಮಾಡಿದೆ.
ಸಿನಿಮಾ ಜೊತೆಗೆ ರಾಜಕೀಯದಲ್ಲೂ ಸಕ್ರಿಯರಾಗಿರುವ ಪವನ್ ಕಲ್ಯಾಣ್ ಎರಡು ವರ್ಷಗಳ ಬಳಿಕ ತೆರೆಮೇಲೆ ಬರ್ತಿದ್ದಾರೆ. ಈಗಾಗಲೇ ಚಿತ್ರೀಕರಣ ಮುಗಿಸಿರುವ ವಕೀಲ್ ಸಾಬ್ ಸದ್ಯದಲ್ಲೇ ತೆರೆಗೆ ಬರಲಿದೆ. ಅಂದಹಾಗೆ ವಕೀಲ್ ಸಾಬ್ ಹಿಂದಿಯ ಅಮಿತಾಬ್ ಬಚ್ಚನ್ ನಟನೆಯ ಪಿಂಕ್ ಸಿನಿಮಾದ ರಿಮೇಕ್.
This News Article Is A Copy Of FILMIBEAT
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
02-09-26 08:31 pm
HK News Staffer
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
ವಿದೇಶದಲ್ಲಿ ವಿವಾಹವಾಗಬೇಡಿ, ಚಿನ್ನ ಖರೀದಿಸಬೇಡಿ ; ಸ...
01-09-26 12:19 pm
ನೇಪಾಳ ದುರಂತ ; ಮೃತರ ಸಂಖ್ಯೆ 903ಕ್ಕೆ ಏರಿಕೆ, ವಿದೇ...
31-08-26 01:28 pm
02-09-26 10:51 pm
HK News Desk
UT Khader, Mangalore: ಸಚಿವರ ಹೆಸರಲ್ಲಿ ಕಮಿಷನ್...
02-09-26 10:30 pm
ಗಂಗೊಳ್ಳಿಯಲ್ಲಿ ಮತ್ತೆ ದೋಣಿ ಅವಘಡ ; 6 ಮೀನುಗಾರರ ರಕ...
02-09-26 08:44 pm
ಕೆಆರ್ ಐಡಿಎಲ್ ಸಂಸ್ಥೆಗೆ ಯಾಕೆ ಗುತ್ತಿಗೆ ಕೊಡುತ್ತೀರ...
02-09-26 08:29 pm
ಆರೋಗ್ಯದ ವಿಚಾರದಲ್ಲಿ ರಾಜಿ ಇಲ್ಲ ; ಆಹಾರ ಸುರಕ್ಷತೆ...
02-09-26 07:09 pm
02-09-26 07:18 pm
HK News Staffer
ಓವರ್ಟೇಕ್ ವಿಚಾರದಲ್ಲಿ ಕಿರಿಕ್; ಕಾಲೇಜು ವಿದ್ಯಾರ್...
02-09-26 07:12 pm
ಕೇರಳಂ ಲಾಟರಿಯಲ್ಲಿ 8 ಲಕ್ಷ ರೂ. ಬಹುಮಾನದ ಆಮಿಷ ; ತೆ...
02-09-26 10:37 am
ಸಿಬಿಐ ಅಧಿಕಾರಿ ಸೋಗಿನಲ್ಲಿ ದೇಶಾದ್ಯಂತ ವಂಚನಾ ಜಾಲ ;...
01-09-26 07:30 pm
ಧಾರವಾಡ ; ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡ...
01-09-26 02:58 pm