ಬ್ರೇಕಿಂಗ್ ನ್ಯೂಸ್
31-07-20 03:26 pm Headline Karnataka News Network ಸಿನಿಮಾ
ಮುಂಬೈ: ಬಾಲಿವುಡ್ ನಟನ ಮಗಳ ಖಾಸಗಿ ಫೋಟೋಗಳನ್ನು ಇಟ್ಟುಕೊಂಡು ಹಣಕ್ಕಾಗಿ ಬ್ಲ್ಯಾಕ್ಮೇಲ್ ಮಾಡುತ್ತಿದ್ದ ಯುವಕನನ್ನು ಮುಂಬೈ ಕ್ರೈಂ ಬ್ರ್ಯಾಂಚ್ ಪೊಲೀಸರು ಬಂಧಿಸಿದ್ದಾರೆ.
ಆರೋಪಿಯನ್ನು ಮುಂಬೈನ ಮಲಾಡ್ ನಿವಾಸಿ ಕುಮೇಲ್ ಹನೀಫ್ ಪಟಾನಿ (25) ಎಂದು ಗುರುತಿಸಲಾಗಿದೆ. ಒಂದು ವೇಳೆ ಹಣ ಕೊಡದಿದ್ದರೆ ಖಾಸಗಿ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಅಪ್ಲೋಡ್ ಮಾಡುವುದಾಗಿ ಬೆದರಿಕೆ ಹಾಕುತ್ತಿದ್ದನು. ಇದೀಗ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಕೆಲವು ದಿನಗಳ ಹಿಂದೆ ಬಾಲಿವುಡ್ ನಟಿಯ ಮಗಳಿಗೆ ಆರೋಪಿ ಇನ್ಸ್ಟಾಗ್ರಾಂನಲ್ಲಿ ಮೆಸೇಜ್ ಮಾಡಿದ್ದನು. ಕಾಲೇಜು ದಿನಗಳಿಂದ ನೀನು ನನಗೆ ಗೊತ್ತು. ನಿನ್ನ ಕೆಲವು ಖಾಸಗಿ ಫೋಟೋಗಳು ನನ್ನ ಬಳಿ ಇವೆ. ಹೀಗಾಗಿ ನಾನು ಕೇಳಿದಷ್ಟು ಹಣ ಕೊಡಬೇಕು. ಒಂದು ವೇಳೆ ಹಣ ಕೊಡದಿದ್ದರೆ ನಿನ್ನ ಖಾಸಗಿ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಅಪ್ಲೋಡ್ ಮಾಡುವುದಾಗಿ ಬೆದರಿಕೆ ಹಾಕಿದ್ದನು.
ಅಲ್ಲದೇ ಆರೋಪಿ ಮೆಸೇಜ್ ಮಾಡಿದ ನಂತರ ತಾನು ಯಾರೆಂದು ಗೊತ್ತಾಗಬಾರದೆಂದು ತಕ್ಷಣ ಅವುಗಳನ್ನು ಡಿಲೀಟ್ ಮಾಡಿದ್ದಾನೆ. ಸ್ವಲ್ಪ ದಿನದ ನಂತರ ನಟನ ಮಗಳಿಗೆ ಫೋನ್ ಮಾಡಿ ಹಣಕ್ಕಾಗಿ ಬ್ಲ್ಯಾಕ್ಮೇಲ್ ಮಾಡಿದ್ದಾನೆ. ಕೊನೆಗೆ ಆರೋಪಿಯ ಬೆದರಿಕೆಗೆ ಹೆದರಿ ನಟನ ಮಗಳು 15,000 ರಿಂದ 20,000 ರೂಪಾಯಿ ನೀಡಿದ್ದಾರೆ. ಆದರೆ ಆರೋಪಿ ಮತ್ತೆ ಹೆಚ್ಚಿನ ಹಣಕ್ಕಾಗಿ ಬೇಡಿಕೆ ಇಟ್ಟಿದ್ದಾನೆ. ಆಗ ಆಕೆ ತನ್ನ ಪೋಷಕರಿಗೆ ಈ ಬಗ್ಗೆ ತಿಳಿಸಿದ್ದಾರೆ ಎಂದು ಇನ್ಸ್ಪೆಕ್ಟರ್ ಹೇಳಿದ್ದಾರೆ.
ಪೋಷಕರು ಬಂಗೂರ್ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ನಂತರ ಆರೋಪಿ ಪಟಾನಿ ವಿರುದ್ಧ ಐಪಿಸಿ ಸೆಕ್ಷನ್ ಮತ್ತು ಐಟಿ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಆರೋಪಿಯ ಸಹೋದರಿ ಮತ್ತು ಬಾಲಿವುಡ್ ನಟನ ಮಗಳು ಒಂದೇ ಕಾಲೇಜಿನಲ್ಲಿ ವ್ಯಾಸಂಗ ಮಾಡಿದ್ದು, ಇಬ್ಬರು ಸ್ನೇಹಿತರು ಕೂಡ ಆಗಿದ್ದರು. ಆದರೂ ಆರೋಪಿ ಈ ರೀತಿ ಹಣಕ್ಕಾಗಿ ನಟನ ಮಗಳಿಗೆ ಬ್ಲ್ಯಾಕ್ಮೇಲೆ ಮಾಡಿದ್ದಾನೆ ಎಂದು ವಿಚಾರಣೆ ವೇಳೆ ತಿಳಿದು ಬಂದಿದೆ.
07-08-26 10:42 pm
HK News Desk
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
ತಂದೆಯನ್ನು ವೃದ್ಧಾಶ್ರಮಕ್ಕೆ ಸೇರಿಸಿ ಸಾವಿಗೂ ಬಾರದ ಪ...
06-08-26 03:49 pm
ಕಲಬುರಗಿಯಲ್ಲಿ SIR ಪರಿಷ್ಕರಣೆ ಶಾಕ್ ; 5.36 ಲಕ್ಷ...
06-08-26 02:19 pm
'ಮಂತ್ರಿ ಸ್ಥಾನಕ್ಕೆ ಕೋಟಿ ಕೋಟಿ ಡೀಲ್?' ಮಾಜಿ ಸಚಿವರ...
05-08-26 10:56 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
08-08-26 12:17 pm
HK News Staffer
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
BC Road Accident, Mangalore: ಬಿಸಿ ರೋಡ್ ಬಳಿ ಟಿ...
06-08-26 11:03 pm
08-08-26 06:04 pm
HK News Staffer
ಧರ್ಮಸ್ಥಳಕ್ಕೆ ತೆರಳುತ್ತಿದ್ದ ಪ್ರವಾಸಿಗರ ಕಾರು ರಸ್ತ...
08-08-26 12:10 pm
Udupi David Dsouza Murder, Arrest: ಉಡುಪಿ ಡೇವಿ...
08-08-26 11:39 am
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಎನ್ ಟಿಎ ಸಂಸ್ಥೆಯ...
07-08-26 10:37 pm
ಮುಡಿಪು ಬಳಿ ಹಾಡಹಗಲೇ ಒಂಟಿ ವೃದ್ಧೆಯ ಮೇಲೆ ಹಲ್ಲೆ ನಡ...
07-08-26 09:23 pm