ಬ್ರೇಕಿಂಗ್ ನ್ಯೂಸ್
31-07-20 03:26 pm Headline Karnataka News Network ಸಿನಿಮಾ
ಮುಂಬೈ: ಬಾಲಿವುಡ್ ನಟನ ಮಗಳ ಖಾಸಗಿ ಫೋಟೋಗಳನ್ನು ಇಟ್ಟುಕೊಂಡು ಹಣಕ್ಕಾಗಿ ಬ್ಲ್ಯಾಕ್ಮೇಲ್ ಮಾಡುತ್ತಿದ್ದ ಯುವಕನನ್ನು ಮುಂಬೈ ಕ್ರೈಂ ಬ್ರ್ಯಾಂಚ್ ಪೊಲೀಸರು ಬಂಧಿಸಿದ್ದಾರೆ.
ಆರೋಪಿಯನ್ನು ಮುಂಬೈನ ಮಲಾಡ್ ನಿವಾಸಿ ಕುಮೇಲ್ ಹನೀಫ್ ಪಟಾನಿ (25) ಎಂದು ಗುರುತಿಸಲಾಗಿದೆ. ಒಂದು ವೇಳೆ ಹಣ ಕೊಡದಿದ್ದರೆ ಖಾಸಗಿ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಅಪ್ಲೋಡ್ ಮಾಡುವುದಾಗಿ ಬೆದರಿಕೆ ಹಾಕುತ್ತಿದ್ದನು. ಇದೀಗ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಕೆಲವು ದಿನಗಳ ಹಿಂದೆ ಬಾಲಿವುಡ್ ನಟಿಯ ಮಗಳಿಗೆ ಆರೋಪಿ ಇನ್ಸ್ಟಾಗ್ರಾಂನಲ್ಲಿ ಮೆಸೇಜ್ ಮಾಡಿದ್ದನು. ಕಾಲೇಜು ದಿನಗಳಿಂದ ನೀನು ನನಗೆ ಗೊತ್ತು. ನಿನ್ನ ಕೆಲವು ಖಾಸಗಿ ಫೋಟೋಗಳು ನನ್ನ ಬಳಿ ಇವೆ. ಹೀಗಾಗಿ ನಾನು ಕೇಳಿದಷ್ಟು ಹಣ ಕೊಡಬೇಕು. ಒಂದು ವೇಳೆ ಹಣ ಕೊಡದಿದ್ದರೆ ನಿನ್ನ ಖಾಸಗಿ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಅಪ್ಲೋಡ್ ಮಾಡುವುದಾಗಿ ಬೆದರಿಕೆ ಹಾಕಿದ್ದನು.
ಅಲ್ಲದೇ ಆರೋಪಿ ಮೆಸೇಜ್ ಮಾಡಿದ ನಂತರ ತಾನು ಯಾರೆಂದು ಗೊತ್ತಾಗಬಾರದೆಂದು ತಕ್ಷಣ ಅವುಗಳನ್ನು ಡಿಲೀಟ್ ಮಾಡಿದ್ದಾನೆ. ಸ್ವಲ್ಪ ದಿನದ ನಂತರ ನಟನ ಮಗಳಿಗೆ ಫೋನ್ ಮಾಡಿ ಹಣಕ್ಕಾಗಿ ಬ್ಲ್ಯಾಕ್ಮೇಲ್ ಮಾಡಿದ್ದಾನೆ. ಕೊನೆಗೆ ಆರೋಪಿಯ ಬೆದರಿಕೆಗೆ ಹೆದರಿ ನಟನ ಮಗಳು 15,000 ರಿಂದ 20,000 ರೂಪಾಯಿ ನೀಡಿದ್ದಾರೆ. ಆದರೆ ಆರೋಪಿ ಮತ್ತೆ ಹೆಚ್ಚಿನ ಹಣಕ್ಕಾಗಿ ಬೇಡಿಕೆ ಇಟ್ಟಿದ್ದಾನೆ. ಆಗ ಆಕೆ ತನ್ನ ಪೋಷಕರಿಗೆ ಈ ಬಗ್ಗೆ ತಿಳಿಸಿದ್ದಾರೆ ಎಂದು ಇನ್ಸ್ಪೆಕ್ಟರ್ ಹೇಳಿದ್ದಾರೆ.
ಪೋಷಕರು ಬಂಗೂರ್ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ನಂತರ ಆರೋಪಿ ಪಟಾನಿ ವಿರುದ್ಧ ಐಪಿಸಿ ಸೆಕ್ಷನ್ ಮತ್ತು ಐಟಿ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಆರೋಪಿಯ ಸಹೋದರಿ ಮತ್ತು ಬಾಲಿವುಡ್ ನಟನ ಮಗಳು ಒಂದೇ ಕಾಲೇಜಿನಲ್ಲಿ ವ್ಯಾಸಂಗ ಮಾಡಿದ್ದು, ಇಬ್ಬರು ಸ್ನೇಹಿತರು ಕೂಡ ಆಗಿದ್ದರು. ಆದರೂ ಆರೋಪಿ ಈ ರೀತಿ ಹಣಕ್ಕಾಗಿ ನಟನ ಮಗಳಿಗೆ ಬ್ಲ್ಯಾಕ್ಮೇಲೆ ಮಾಡಿದ್ದಾನೆ ಎಂದು ವಿಚಾರಣೆ ವೇಳೆ ತಿಳಿದು ಬಂದಿದೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm