ಬ್ರೇಕಿಂಗ್ ನ್ಯೂಸ್
31-07-20 03:26 pm Headline Karnataka News Network ಸಿನಿಮಾ
ಮುಂಬೈ: ಬಾಲಿವುಡ್ ನಟನ ಮಗಳ ಖಾಸಗಿ ಫೋಟೋಗಳನ್ನು ಇಟ್ಟುಕೊಂಡು ಹಣಕ್ಕಾಗಿ ಬ್ಲ್ಯಾಕ್ಮೇಲ್ ಮಾಡುತ್ತಿದ್ದ ಯುವಕನನ್ನು ಮುಂಬೈ ಕ್ರೈಂ ಬ್ರ್ಯಾಂಚ್ ಪೊಲೀಸರು ಬಂಧಿಸಿದ್ದಾರೆ.
ಆರೋಪಿಯನ್ನು ಮುಂಬೈನ ಮಲಾಡ್ ನಿವಾಸಿ ಕುಮೇಲ್ ಹನೀಫ್ ಪಟಾನಿ (25) ಎಂದು ಗುರುತಿಸಲಾಗಿದೆ. ಒಂದು ವೇಳೆ ಹಣ ಕೊಡದಿದ್ದರೆ ಖಾಸಗಿ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಅಪ್ಲೋಡ್ ಮಾಡುವುದಾಗಿ ಬೆದರಿಕೆ ಹಾಕುತ್ತಿದ್ದನು. ಇದೀಗ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಕೆಲವು ದಿನಗಳ ಹಿಂದೆ ಬಾಲಿವುಡ್ ನಟಿಯ ಮಗಳಿಗೆ ಆರೋಪಿ ಇನ್ಸ್ಟಾಗ್ರಾಂನಲ್ಲಿ ಮೆಸೇಜ್ ಮಾಡಿದ್ದನು. ಕಾಲೇಜು ದಿನಗಳಿಂದ ನೀನು ನನಗೆ ಗೊತ್ತು. ನಿನ್ನ ಕೆಲವು ಖಾಸಗಿ ಫೋಟೋಗಳು ನನ್ನ ಬಳಿ ಇವೆ. ಹೀಗಾಗಿ ನಾನು ಕೇಳಿದಷ್ಟು ಹಣ ಕೊಡಬೇಕು. ಒಂದು ವೇಳೆ ಹಣ ಕೊಡದಿದ್ದರೆ ನಿನ್ನ ಖಾಸಗಿ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಅಪ್ಲೋಡ್ ಮಾಡುವುದಾಗಿ ಬೆದರಿಕೆ ಹಾಕಿದ್ದನು.
ಅಲ್ಲದೇ ಆರೋಪಿ ಮೆಸೇಜ್ ಮಾಡಿದ ನಂತರ ತಾನು ಯಾರೆಂದು ಗೊತ್ತಾಗಬಾರದೆಂದು ತಕ್ಷಣ ಅವುಗಳನ್ನು ಡಿಲೀಟ್ ಮಾಡಿದ್ದಾನೆ. ಸ್ವಲ್ಪ ದಿನದ ನಂತರ ನಟನ ಮಗಳಿಗೆ ಫೋನ್ ಮಾಡಿ ಹಣಕ್ಕಾಗಿ ಬ್ಲ್ಯಾಕ್ಮೇಲ್ ಮಾಡಿದ್ದಾನೆ. ಕೊನೆಗೆ ಆರೋಪಿಯ ಬೆದರಿಕೆಗೆ ಹೆದರಿ ನಟನ ಮಗಳು 15,000 ರಿಂದ 20,000 ರೂಪಾಯಿ ನೀಡಿದ್ದಾರೆ. ಆದರೆ ಆರೋಪಿ ಮತ್ತೆ ಹೆಚ್ಚಿನ ಹಣಕ್ಕಾಗಿ ಬೇಡಿಕೆ ಇಟ್ಟಿದ್ದಾನೆ. ಆಗ ಆಕೆ ತನ್ನ ಪೋಷಕರಿಗೆ ಈ ಬಗ್ಗೆ ತಿಳಿಸಿದ್ದಾರೆ ಎಂದು ಇನ್ಸ್ಪೆಕ್ಟರ್ ಹೇಳಿದ್ದಾರೆ.
ಪೋಷಕರು ಬಂಗೂರ್ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ನಂತರ ಆರೋಪಿ ಪಟಾನಿ ವಿರುದ್ಧ ಐಪಿಸಿ ಸೆಕ್ಷನ್ ಮತ್ತು ಐಟಿ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಆರೋಪಿಯ ಸಹೋದರಿ ಮತ್ತು ಬಾಲಿವುಡ್ ನಟನ ಮಗಳು ಒಂದೇ ಕಾಲೇಜಿನಲ್ಲಿ ವ್ಯಾಸಂಗ ಮಾಡಿದ್ದು, ಇಬ್ಬರು ಸ್ನೇಹಿತರು ಕೂಡ ಆಗಿದ್ದರು. ಆದರೂ ಆರೋಪಿ ಈ ರೀತಿ ಹಣಕ್ಕಾಗಿ ನಟನ ಮಗಳಿಗೆ ಬ್ಲ್ಯಾಕ್ಮೇಲೆ ಮಾಡಿದ್ದಾನೆ ಎಂದು ವಿಚಾರಣೆ ವೇಳೆ ತಿಳಿದು ಬಂದಿದೆ.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 09:28 pm
HK News Desk
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm
Mangalore Minor student Suicide: ಅಪ್ರಾಪ್ತೆಗೆ...
24-06-26 02:25 pm