ಬ್ರೇಕಿಂಗ್ ನ್ಯೂಸ್
31-07-20 03:26 pm Headline Karnataka News Network ಸಿನಿಮಾ
ಮುಂಬೈ: ಬಾಲಿವುಡ್ ನಟನ ಮಗಳ ಖಾಸಗಿ ಫೋಟೋಗಳನ್ನು ಇಟ್ಟುಕೊಂಡು ಹಣಕ್ಕಾಗಿ ಬ್ಲ್ಯಾಕ್ಮೇಲ್ ಮಾಡುತ್ತಿದ್ದ ಯುವಕನನ್ನು ಮುಂಬೈ ಕ್ರೈಂ ಬ್ರ್ಯಾಂಚ್ ಪೊಲೀಸರು ಬಂಧಿಸಿದ್ದಾರೆ.
ಆರೋಪಿಯನ್ನು ಮುಂಬೈನ ಮಲಾಡ್ ನಿವಾಸಿ ಕುಮೇಲ್ ಹನೀಫ್ ಪಟಾನಿ (25) ಎಂದು ಗುರುತಿಸಲಾಗಿದೆ. ಒಂದು ವೇಳೆ ಹಣ ಕೊಡದಿದ್ದರೆ ಖಾಸಗಿ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಅಪ್ಲೋಡ್ ಮಾಡುವುದಾಗಿ ಬೆದರಿಕೆ ಹಾಕುತ್ತಿದ್ದನು. ಇದೀಗ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಕೆಲವು ದಿನಗಳ ಹಿಂದೆ ಬಾಲಿವುಡ್ ನಟಿಯ ಮಗಳಿಗೆ ಆರೋಪಿ ಇನ್ಸ್ಟಾಗ್ರಾಂನಲ್ಲಿ ಮೆಸೇಜ್ ಮಾಡಿದ್ದನು. ಕಾಲೇಜು ದಿನಗಳಿಂದ ನೀನು ನನಗೆ ಗೊತ್ತು. ನಿನ್ನ ಕೆಲವು ಖಾಸಗಿ ಫೋಟೋಗಳು ನನ್ನ ಬಳಿ ಇವೆ. ಹೀಗಾಗಿ ನಾನು ಕೇಳಿದಷ್ಟು ಹಣ ಕೊಡಬೇಕು. ಒಂದು ವೇಳೆ ಹಣ ಕೊಡದಿದ್ದರೆ ನಿನ್ನ ಖಾಸಗಿ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಅಪ್ಲೋಡ್ ಮಾಡುವುದಾಗಿ ಬೆದರಿಕೆ ಹಾಕಿದ್ದನು.
ಅಲ್ಲದೇ ಆರೋಪಿ ಮೆಸೇಜ್ ಮಾಡಿದ ನಂತರ ತಾನು ಯಾರೆಂದು ಗೊತ್ತಾಗಬಾರದೆಂದು ತಕ್ಷಣ ಅವುಗಳನ್ನು ಡಿಲೀಟ್ ಮಾಡಿದ್ದಾನೆ. ಸ್ವಲ್ಪ ದಿನದ ನಂತರ ನಟನ ಮಗಳಿಗೆ ಫೋನ್ ಮಾಡಿ ಹಣಕ್ಕಾಗಿ ಬ್ಲ್ಯಾಕ್ಮೇಲ್ ಮಾಡಿದ್ದಾನೆ. ಕೊನೆಗೆ ಆರೋಪಿಯ ಬೆದರಿಕೆಗೆ ಹೆದರಿ ನಟನ ಮಗಳು 15,000 ರಿಂದ 20,000 ರೂಪಾಯಿ ನೀಡಿದ್ದಾರೆ. ಆದರೆ ಆರೋಪಿ ಮತ್ತೆ ಹೆಚ್ಚಿನ ಹಣಕ್ಕಾಗಿ ಬೇಡಿಕೆ ಇಟ್ಟಿದ್ದಾನೆ. ಆಗ ಆಕೆ ತನ್ನ ಪೋಷಕರಿಗೆ ಈ ಬಗ್ಗೆ ತಿಳಿಸಿದ್ದಾರೆ ಎಂದು ಇನ್ಸ್ಪೆಕ್ಟರ್ ಹೇಳಿದ್ದಾರೆ.
ಪೋಷಕರು ಬಂಗೂರ್ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ನಂತರ ಆರೋಪಿ ಪಟಾನಿ ವಿರುದ್ಧ ಐಪಿಸಿ ಸೆಕ್ಷನ್ ಮತ್ತು ಐಟಿ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಆರೋಪಿಯ ಸಹೋದರಿ ಮತ್ತು ಬಾಲಿವುಡ್ ನಟನ ಮಗಳು ಒಂದೇ ಕಾಲೇಜಿನಲ್ಲಿ ವ್ಯಾಸಂಗ ಮಾಡಿದ್ದು, ಇಬ್ಬರು ಸ್ನೇಹಿತರು ಕೂಡ ಆಗಿದ್ದರು. ಆದರೂ ಆರೋಪಿ ಈ ರೀತಿ ಹಣಕ್ಕಾಗಿ ನಟನ ಮಗಳಿಗೆ ಬ್ಲ್ಯಾಕ್ಮೇಲೆ ಮಾಡಿದ್ದಾನೆ ಎಂದು ವಿಚಾರಣೆ ವೇಳೆ ತಿಳಿದು ಬಂದಿದೆ.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 05:01 pm
Mangaluru Staffer
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm