ಬ್ರೇಕಿಂಗ್ ನ್ಯೂಸ್
31-03-21 12:02 pm Source: FILMIBEAT Shruthi Gk ಸಿನಿಮಾ
ಸ್ಟಾರ್ ಮಕ್ಕಳನ್ನು ಚಿತ್ರರಂಗಕ್ಕೆ ಪರಿಚಯಿಸುವುದರಲ್ಲಿ ನಿರ್ಮಾಪಕ ಮತ್ತು ನಿರ್ದೇಶಕ ಕರಣ್ ಜೋಹರ್ ಎತ್ತಿದ ಕೈ. ಈಗಾಗಲೇ ಸಾಕಷ್ಟು ಸ್ಟಾರ್ ಕಿಡ್ಗಳನ್ನು ಬಣ್ಣದ ಲೋಕಕ್ಕೆ ಎಂಟ್ರಿ ಕೊಡಿಸಿರುವ ಕರಣ್ ಇದೀಗ ಸೈಫ್ ಅಲಿ ಖಾನ್ ಪುತ್ರನನ್ನು ಬಾಲಿವುಡ್ಗೆ ಕರೆತರುವ ಜವಾಬ್ದಾರಿ ವಹಿಸಿಕೊಂಡಿದ್ದಾರೆ.
ಸೈಫ್ ಅಲಿ ಖಾನ್ ಪುತ್ರಿ ಸಾರಾ ಅಲಿ ಖಾನ್ ಅವರನ್ನು ಚಿತ್ರರಂಗಕ್ಕೆ ಪರಿಚಯಿಸಿದ್ದು ಸಹ ಇದೇ ಕರಣ್ ಜೋಹರ್. ಅಂದಹಾಗೆ ಸೈಫ್ ಪುತ್ರ ಇಬ್ರಾಹಿಂ ಅಲಿ ಖಾನ್ ಬಣ್ಣದ ಲೋಕಕ್ಕೆ ಎಂಟ್ರಿ ಕೊಡುತ್ತಿರುವುದು ನಾಯಕನಾಗಿ ಅಲ್ಲ, ಬದಲಿಗೆ ಸಹಾಯಕ ನಿರ್ದೇಶಕನಾಗಿ. ಬಹುತೇಕರು ನಾಯಕನಾಗಿ ಮಿಂಚಬೇಕು, ಬೆಳ್ಳಿ ಪರದೆ ಮೇಲೆ ರಾರಾಜಿಸಬೇಕು ಎನ್ನುವ ಕನಸು ಕಂಡಿರುತ್ತಾರೆ. ಆದರೆ ಸೈಫ್ ಪುತ್ರ ನಿರ್ದೇಶಕನಾಗುವ ಕನಸನ್ನು ಹೊತ್ತು ಚಿತ್ರರಂಗಕ್ಕೆ ಪ್ರವೇಶ ಮಾಡುತ್ತಿದ್ದಾರೆ.
ಕರಣ್ ಜೋಹರ್ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಹೊಸ ಸಿನಿಮಾದಲ್ಲಿ ಇಬ್ರಾಹಿಂ ಸಹಾಯಕ ನಿರ್ದೇಶಕನಾಗಿ ಕೆಲಸ ಮಾಡಲಿದ್ದಾರೆ. ಅಂದಹಾಗೆ ಕರಣ್ ಮುಂದಿನ ಸಿನಿಮಾ ರಣ್ವೀರ್ ಸಿಂಗ್ ಮತ್ತು ಅಲಿಯಾ ಭಟ್

ಗಲ್ಲಿಬಾಯ್ ಸಿನಿಮಾ ಬಳಿಕ ಅಲಿಯಾ ಮತ್ತು ರಣ್ವೀರ್ ಎರಡನೇ ಬಾರಿ ಒಂದಾಗುತ್ತಿದ್ದಾರೆ. ಗಲ್ಲಿಬಾಯ್ ಸೂಪರ್ ಹಿಟ್ ಆದ ಬಳಿಕ ಈ ಜೋಡಿಯನ್ನು ಮತ್ತೆ ತೆರೆಮೇಲೆ ನೋಡಲು ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ಅಭಿಮಾನಿಗಳ ಆಸೆಯಂತೆ ಅಲಿಯಾ ಮತ್ತು ರಣ್ವೀರ್ ಒಟ್ಟಿಗೆ ಕಾಣಿಸಿಕೊಳ್ಳುತ್ತಿದ್ದಾರೆ. ಕರಣ್ ಸಾರಥ್ಯದಲ್ಲಿ ಮೂಡಿಬರುತ್ತಿರುವ ಇನ್ನೂ ಹೆಸರಿಡದ ಈ ಚಿತ್ರ ರೊಮ್ಯಾಂಟಿಕ್ ಥ್ರಿಲ್ಲರ್ ಆಗಿದೆಯಂತೆ. ಸದ್ಯ ಪ್ರಿ-ಪ್ರೊಡಕ್ಷನ್ ಕೆಲಸದಲ್ಲಿ ನಿರತವಾಗಿರುವ ಕರಣ್ ಮತ್ತು ತಂಡ ಜೂನ್ ಅಥವ ಜುಲೈನಲ್ಲಿ ಚಿತ್ರೀಕರಣ ಪ್ರಾರಂಭ ಮಾಡಲಿದ್ದಾರೆ.
ಅದಕ್ಕೂ ಮೊದಲು ವರ್ಕ್ ಶಾಪ್ ಆಯೋಜಿಸಲಿದ್ದು, ರಣ್ವೀರ್ ಮತ್ತು ಅಲಿಯಾ ಜೊತೆಗೆ ಇಬ್ರಾಹಿಂ ಕೂಡ ಭಾಗಿಯಾಗುತ್ತಿದ್ದಾರೆ. ಅಲಿಯಾ ಮತ್ತು ರಣ್ವೀರ್ ಸಿನಿಮಾಗೆ ಸಹಾಯಕ ನಿರ್ದೇಶಕನಾಗಿ ಕೆಲಸ ಮಾಡುವ ಮೂಲಕ ಬಣ್ಣದ ಲೋಕದ ಪಯಣ ಪ್ರಾರಂಭಿಸುತ್ತಾರಾ ಎಂದು ಕಾಯುನೋಡಬೇಕು.
This News Article Is A Copy Of FILMIBEAT
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
12-07-26 02:16 pm
HK News Staffer
ಬೆಂಗಳೂರಿನಲ್ಲಿ ಬೆಚ್ಚಿಬೀಳಿಸಿದ ತ್ರಿವಳಿ ಕೊಲೆ ; ತಾ...
11-07-26 08:40 pm
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm
ಮಂಗಳೂರು- ವಿಟ್ಲ ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಯ...
11-07-26 04:28 pm
ಮಾಜಿ ಸಾರಿಗೆ ಅಧಿಕಾರಿ ಮನೆಯಲ್ಲಿ ಕುಬೇರನ ಖಜಾನೆ ! ಗ...
10-07-26 10:14 pm