ಬ್ರೇಕಿಂಗ್ ನ್ಯೂಸ್
31-03-21 12:02 pm Source: FILMIBEAT Shruthi Gk ಸಿನಿಮಾ
ಸ್ಟಾರ್ ಮಕ್ಕಳನ್ನು ಚಿತ್ರರಂಗಕ್ಕೆ ಪರಿಚಯಿಸುವುದರಲ್ಲಿ ನಿರ್ಮಾಪಕ ಮತ್ತು ನಿರ್ದೇಶಕ ಕರಣ್ ಜೋಹರ್ ಎತ್ತಿದ ಕೈ. ಈಗಾಗಲೇ ಸಾಕಷ್ಟು ಸ್ಟಾರ್ ಕಿಡ್ಗಳನ್ನು ಬಣ್ಣದ ಲೋಕಕ್ಕೆ ಎಂಟ್ರಿ ಕೊಡಿಸಿರುವ ಕರಣ್ ಇದೀಗ ಸೈಫ್ ಅಲಿ ಖಾನ್ ಪುತ್ರನನ್ನು ಬಾಲಿವುಡ್ಗೆ ಕರೆತರುವ ಜವಾಬ್ದಾರಿ ವಹಿಸಿಕೊಂಡಿದ್ದಾರೆ.
ಸೈಫ್ ಅಲಿ ಖಾನ್ ಪುತ್ರಿ ಸಾರಾ ಅಲಿ ಖಾನ್ ಅವರನ್ನು ಚಿತ್ರರಂಗಕ್ಕೆ ಪರಿಚಯಿಸಿದ್ದು ಸಹ ಇದೇ ಕರಣ್ ಜೋಹರ್. ಅಂದಹಾಗೆ ಸೈಫ್ ಪುತ್ರ ಇಬ್ರಾಹಿಂ ಅಲಿ ಖಾನ್ ಬಣ್ಣದ ಲೋಕಕ್ಕೆ ಎಂಟ್ರಿ ಕೊಡುತ್ತಿರುವುದು ನಾಯಕನಾಗಿ ಅಲ್ಲ, ಬದಲಿಗೆ ಸಹಾಯಕ ನಿರ್ದೇಶಕನಾಗಿ. ಬಹುತೇಕರು ನಾಯಕನಾಗಿ ಮಿಂಚಬೇಕು, ಬೆಳ್ಳಿ ಪರದೆ ಮೇಲೆ ರಾರಾಜಿಸಬೇಕು ಎನ್ನುವ ಕನಸು ಕಂಡಿರುತ್ತಾರೆ. ಆದರೆ ಸೈಫ್ ಪುತ್ರ ನಿರ್ದೇಶಕನಾಗುವ ಕನಸನ್ನು ಹೊತ್ತು ಚಿತ್ರರಂಗಕ್ಕೆ ಪ್ರವೇಶ ಮಾಡುತ್ತಿದ್ದಾರೆ.
ಕರಣ್ ಜೋಹರ್ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಹೊಸ ಸಿನಿಮಾದಲ್ಲಿ ಇಬ್ರಾಹಿಂ ಸಹಾಯಕ ನಿರ್ದೇಶಕನಾಗಿ ಕೆಲಸ ಮಾಡಲಿದ್ದಾರೆ. ಅಂದಹಾಗೆ ಕರಣ್ ಮುಂದಿನ ಸಿನಿಮಾ ರಣ್ವೀರ್ ಸಿಂಗ್ ಮತ್ತು ಅಲಿಯಾ ಭಟ್

ಗಲ್ಲಿಬಾಯ್ ಸಿನಿಮಾ ಬಳಿಕ ಅಲಿಯಾ ಮತ್ತು ರಣ್ವೀರ್ ಎರಡನೇ ಬಾರಿ ಒಂದಾಗುತ್ತಿದ್ದಾರೆ. ಗಲ್ಲಿಬಾಯ್ ಸೂಪರ್ ಹಿಟ್ ಆದ ಬಳಿಕ ಈ ಜೋಡಿಯನ್ನು ಮತ್ತೆ ತೆರೆಮೇಲೆ ನೋಡಲು ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ಅಭಿಮಾನಿಗಳ ಆಸೆಯಂತೆ ಅಲಿಯಾ ಮತ್ತು ರಣ್ವೀರ್ ಒಟ್ಟಿಗೆ ಕಾಣಿಸಿಕೊಳ್ಳುತ್ತಿದ್ದಾರೆ. ಕರಣ್ ಸಾರಥ್ಯದಲ್ಲಿ ಮೂಡಿಬರುತ್ತಿರುವ ಇನ್ನೂ ಹೆಸರಿಡದ ಈ ಚಿತ್ರ ರೊಮ್ಯಾಂಟಿಕ್ ಥ್ರಿಲ್ಲರ್ ಆಗಿದೆಯಂತೆ. ಸದ್ಯ ಪ್ರಿ-ಪ್ರೊಡಕ್ಷನ್ ಕೆಲಸದಲ್ಲಿ ನಿರತವಾಗಿರುವ ಕರಣ್ ಮತ್ತು ತಂಡ ಜೂನ್ ಅಥವ ಜುಲೈನಲ್ಲಿ ಚಿತ್ರೀಕರಣ ಪ್ರಾರಂಭ ಮಾಡಲಿದ್ದಾರೆ.
ಅದಕ್ಕೂ ಮೊದಲು ವರ್ಕ್ ಶಾಪ್ ಆಯೋಜಿಸಲಿದ್ದು, ರಣ್ವೀರ್ ಮತ್ತು ಅಲಿಯಾ ಜೊತೆಗೆ ಇಬ್ರಾಹಿಂ ಕೂಡ ಭಾಗಿಯಾಗುತ್ತಿದ್ದಾರೆ. ಅಲಿಯಾ ಮತ್ತು ರಣ್ವೀರ್ ಸಿನಿಮಾಗೆ ಸಹಾಯಕ ನಿರ್ದೇಶಕನಾಗಿ ಕೆಲಸ ಮಾಡುವ ಮೂಲಕ ಬಣ್ಣದ ಲೋಕದ ಪಯಣ ಪ್ರಾರಂಭಿಸುತ್ತಾರಾ ಎಂದು ಕಾಯುನೋಡಬೇಕು.
This News Article Is A Copy Of FILMIBEAT
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am